ಚುನಾವಣಾ ಬಾಂಡ್ ಹಗರಣ | ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು

Date:

Advertisements

ಚುನಾವಣಾ ಬಾಂಡ್‌ ಹಗರಣವು ಸ್ವತಂತ್ರ್ಯ ಭಾರತದ ಅತಿ ದೊಡ್ಡ ಹಗರಣವಾಗಿದೆ. ಈ ಹಗರಣದ ಕುರಿತು ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ರಾಜಕೀಯ ಪಕ್ಷಗಳು ಮತ್ತು ಕಂಪನಿಗಳ ನಡುವಿನ ಅಪವಿತ್ರ ಮೈತ್ರಿ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ವಕೀಲರು ಮತ್ತು ಹೋರಾಟಗಾರರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಶುಕ್ರವಾರ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿರುವ ವಕೀಲರು-ಹೋರಾಟಗಾರರ ತಂಡ, “ಹಲವು ಕಂಪನಿಗಳು ಪಕ್ಷಗಳಿಗೆ ಚುನಾವಣಾ ಬಾಂಡ್‌ ಮೂಲಕ ಹಣ ನೀಡಿ, ತಮಗೆ ಬೇಕಾದ ಅನುಕೂಲಗಳನ್ನು ಪಡೆದುಕೊಂಡಿವೆ. ಆಡಳಿತಾರೂಢ ಬಿಜೆಪಿಗೆ ಹಣ ಕೊಟ್ಟು, ಕಂಪನಿಗಳು ನಾನಾ ರೀತಿಯ ನೆರವು ಪಡೆದಿವೆ. ಈ ಅಪವಿತ್ರ ಮೈತ್ರಿಯು ಬಹಿರಂಗವಾಗಬೇಕು” ಎಂದು ಒತ್ತಾಯಿಸಿದೆ.

“ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರೂ. ದೇಣಿಗೆ ಪಡೆದಿರುವ ಬಿಜೆಪಿ, ಬೃಹತ್ ಮೊತ್ತದ ಯೋಜನೆಗಳನ್ನು ತಮಗೆ ಹಣ ನೀಡಿದ ಕಂಪನಿಗಳಿಗೆ ಕೊಟ್ಟಿದೆ. ಹಲವು ಕಂಪನಿಗಳು ಬಿಜೆಪಿಗೆ ದೇಣಿಗೆ ನೀಡಿ, ತನಿಖಾ ಸಂಸ್ಥೆಗಳ ತನಿಖೆಯಿಂದ ತಪ್ಪಿಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

Advertisements

“33 ಕಂಪನಿಗಳು ಬಿಜೆಪಿಗೆ 1,751 ಕೋಟಿ. ರೂ. ದೇಣಿಗೆ ನೀಡಿ, 3.7 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಗುತ್ತಿಗೆ ಪಡೆದಿವೆ. ತನಿಖಾ ಸಂಸ್ಥೆಗಳ ತನಿಖೆಯಿಂದ ತಪ್ಪಿಸಿಕೊಳ್ಳಲು 41 ಕಂಪನಿಗಳು ಬಿಜೆಪಿಗೆ 2,471 ಕೋಟಿ ರೂ. ದೇಣಿಗೆ ನೀಡಿವೆ. ಈ ಹಣದಲ್ಲಿ ಅರ್ಧದಷ್ಟು ಮೊತ್ತವು ಇಡಿ/ಐಟಿ ದಾಳಿಗಳ ಬಳಿಕ ಬಿಜೆಪಿಗೆ ಬಂದಿದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.

“ಈ ಹಿಂದೆ, 2ಜಿ ಹಗರಣ ಅಥವಾ ಕಲ್ಲಿದ್ದಲು ಹಗರಣದಲ್ಲಿ ಹಣದ ಅವ್ಯವಹಾರ ನಡೆದಿರಲಿಲ್ಲ. ಅದರೂ, ಆ ಎರಡು ಹಗರಣಗಳ ಕುರಿತು ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲಾಗಿತ್ತು. ಚುನಾವಣಾ ಬಾಂಡ್‌ ಯೋಜನೆಯಲ್ಲಿ ಭಾರೀ ಹಗರಣ ನಡೆದಿದೆ. ಹೀಗಾಗಿ, ಕಾರ್ಪೊರೇಟ್-ರಾಜಕೀಯ ಸಂಬಂಧ ಹಾಗೂ ಚುನಾವಣಾ ಬಾಂಡ್ ಹಗರಣದ ಬಗ್ಗೆ ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಯಾಗಬೇಕು” ಎಂದು ಪ್ರಶಾಂತ್ ಭೂಷಣ್ ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X