ಲೋಕಸಭಾ ಚುನಾವಣೆ | ಒಡಿಶಾದಲ್ಲಿ ಬಿಜೆಪಿಗೆ ಪ್ರಭಾವಿ ಮುಖಗಳೇ ಇಲ್ಲ

Date:

Advertisements

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ನಾನಾ ರಾಜ್ಯಗಳಲ್ಲಿ ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಬಿಜೆಪಿ ಸೀಟು ಹಂಚಿಕೆಯ ಕಸರತ್ತು ನಡೆಸುತ್ತಿದೆ. ಒಡಿಶಾದಲ್ಲಿ ಬಿಜೆಡಿ ಜೊತಿನ ಮೈತ್ರಿಯನ್ನು ಕಡಿತಗೊಳಿಸಿರುವ ಬಿಜೆಪಿ, ಏಕಾಂಗಿ ಸ್ಪರ್ಧೆಗೆ ಮುಂದಾಗಿದೆ. ಅದರೆ, ಆ ರಾಜ್ಯದಲ್ಲಿ ಪ್ರಚಾರಕ್ಕೆ ಸ್ಥಳೀಯ ಪಾಪುಲರ್ ಮುಖಗಳ ಕೊರತೆ ಪಕ್ಷವನ್ನು ಕಾಡುತ್ತಿದೆ.

ಒಡಿಶಾದ 21 ಲೋಕಸಭಾ ಕ್ಷೇತ್ರಗಳಲ್ಲಿ ಕೋರಾಪುಟ್‌ ಕ್ಷೇತ್ರವು ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದೆ. ಆದರೆ, ಈ ಕ್ಷೇತ್ರದಲ್ಲಿಯೇ ಬಿಜೆಪಿಗೆ ಪ್ರಬಲ ಮುಖಗಳಿಲಲ್ಲ. ಸದ್ಯ, ಈ ಕ್ಷೇತ್ರದಿಂದ ಸ್ಪರ್ಧಿಸಲು ಮೂವರು ಬಿಜೆಪಿ ಮುಖಂಡರು – ಸಿಬಾ ಶಂಕರ್ ಉಲಕ, ಕಲಿರಾಮ್ ಮಾಝಿ ಮತ್ತು ಭಾಗಬನ್ ಮುದುಲಿ – ಅಕಾಂಕ್ಷಿಗಳಾಗಿದ್ದಾರೆ. ಆದರೆ, ಅವರ ಹೆಸರುಗಳು ಮತದಾರರಿಗೆ ತಿಳಿದೇ ಇಲ್ಲ ಎಂಬುದು ಗಮನಾರ್ಹ.

ಉಲಕ ಅವರು 2014ರಲ್ಲಿ ಕೋರಾಪುಟ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ, ಕೇವಲ 89,788 ಮತಗಳನ್ನು ಪಡೆದು ಹೀನಾಯ ಸೋಲುಂಡಿದ್ದರು. 2019ರ ವಿಧಾನಸಭಾ ಚುನಾವಣೆಯಲ್ಲಿಯೂ ಅದೇ ಕ್ಷೇತ್ರದ ಭಾಗವಾಗಿರುವ ಬಿಸ್ಸಾಮಕಟ್ಟಕ್ ಕ್ಷೇತ್ರದಲ್ಲಿ ಸ್ಪರ್ಧಿಸಿ, ಮೂರನೇ ಸ್ಥಾನ ಗಳಿಸಿದ್ದರು.

Advertisements

ಮಾಝಿ ಅವರು ಪ್ರಸ್ತುತ ಎಸ್‌ಟಿ ಬಿಜೆಪಿ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದಾರೆ. ಅವರು ರಾಯಗಡ ಜಿಲ್ಲೆಯವರಾಗಿದ್ದು, ಇತ್ತೀಚೆಗೆ ಪಕ್ಷದ ಸಭೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಬಗ್ಗೆ ಮತದಾರರಿಗೆ ಸೀಮಿತ ಪರಿಚಯವಿದೆ. ಅದೇ ರೀತಿ, ಲಕ್ಷ್ಮೀಪುರದ ಜಿಲ್ಲಾ ಸರಪಂಚ ಸಂಘದ ಮಾಜಿ ಅಧ್ಯಕ್ಷ ಭಗಬನ್ ಮುದುಳಿ ಅವರು ಮತದಾರರೊಂದಿಗೆ ನೇರ ಸಂಪರ್ಕ ಸಾಧಿಸಲು ಹೆಣಗಾಡುತ್ತಿದ್ದಾರೆ.

ಒಡಿಶಾದ ರಾಯಗಡ, ಬಿಸ್ಸಾಮಕಟ್ಟಕ್, ಗುಣಪುರ್, ಕೊರಾಪುಟ್, ಲಕ್ಷ್ಮೀಪುರ, ಪೊಟ್ಟಂಗಿ ಮತ್ತು ಜೇಪೋರ್ ಕ್ಷೇತ್ರಗಳಲ್ಲಿ ಈ ಮೂವರು ನಾಯಕರಿಗೆ ತಳಮಟ್ಟದ ಸಂಪರ್ಕವೇ ಇಲ್ಲ. ಹೀಗಾಗಿ, ಪ್ರಾದೇಶಕ ನಾಯಕತ್ವದ ಕೊರತೆಯಿಂದ ಬಿಜೆಪಿ ಹೆಣಗಾಡುತ್ತಿದೆ.

ರಾಜಕೀಯ ವೀಕ್ಷಕ ಕೀರ್ತಿ ಚಂದ್ರ ಸಾಹು ಪ್ರಕಾರ, ಬಿಜೆಪಿಯ ಎಲ್ಲ ಟಿಕೆಟ್‌ ಆಕಾಂಕ್ಷಿಗಳು ಮತದಾರರನ್ನು ಸೆಳೆಯಲು ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಮತ್ತು ಪಕ್ಷದ ಚಿಹ್ನೆಯ ಗುರುತಿನಲ್ಲಿ ಚುನಾವಣೆ ಎದುರಿಸಬೇಕಾಗಿದೆ. ಯಾವ ಆಕಾಂಕ್ಷಿಗಳಿಗೂ ಜನರೊಂದಿಗೆ ನೇರ ಸಂಪರ್ಕವೇ ಇಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X