ಐಪಿಎಲ್ | ಸ್ಯಾಮ್ ಕರನ್-ಲಿವಿಂಗ್‌ಸ್ಟನ್‌ ಜೊತೆಯಾಟಕ್ಕೆ ತಲೆಬಾಗಿದ ಡೆಲ್ಲಿ ಕ್ಯಾಪಿಟಲ್ಸ್‌

Date:

Advertisements

ಪಂಜಾಬ್‌ನ ಮುಲ್ಲನ್‌ಪುರದ ಮಹಾರಾಜ ಯದ್ವೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ನೀಡಿದ್ದ 175 ರನ್‌ಗಳ ಗುರಿಯನ್ನು ಬೆನ್ನತ್ತಿದ ಪಂಜಾಬ್‌, ಸ್ಯಾಮ್ ಕರನ್-ಲಿವಿಂಗ್‌ಸ್ಟನ್‌ ಜೊತೆಯಾಟದ ನೆರವಿನಿಂದ 4 ವಿಕೆಟ್‌ಗಳ ಜಯಗಳಿಸಿದೆ.

ಡೆಲ್ಲಿ ನೀಡಿದ್ದ ಗುರಿಯನ್ನು ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ 6 ವಿಕೆಟ್ ಕಳೆದುಕೊಂಡು 19.2 ಓವರ್‌ಗಳಲ್ಲಿ ಗುರಿ ಮುಟ್ಟುವಲ್ಲಿ ಸಫಲವಾಯಿತು. ಸ್ಯಾಮ್ ಕರನ್-ಲಿವಿಂಗ್‌ಸ್ಟನ್‌ ಜೋಡಿಯು 5ನೇ ವಿಕೆಟ್‌ಗೆ ನಡೆಸಿದ 67 ರನ್‌ಗಳ ಜೊತೆಯಾಟದ ನೆರವಿನಿಂದ ಗೆಲುವು ಪಡೆಯುವಲ್ಲಿ ಸಫಲವಾಯಿತು.

ಡೆಲ್ಲಿ ಕ್ಯಾಪಿಟಲ್ಸ್‌ ಪರವಾಗಿ 18ನೇ ಓವರ್‌ ಎಸೆದ ಖಲೀಲ್, ಎರಡು ವಿಕೆಟ್ ಕಿತ್ತು ಆಘಾತ ನೀಡಿದರಾದರೂ, ಕೊನೆಯ ಓವರ್‌ನ 2ನೇ ಎಸೆತದಲ್ಲಿ ಲಿವಿಂಗ್‌ಸ್ಟನ್‌ ಸಿಕ್ಸರ್ ಬಾರಿಸುವ ಮೂಲಕ ಗೆಲುವಿನ ದಡ ತಲುಪಿಸಿದರು. ಸ್ಯಾಮ್ ಕರನ್ 47 ಎಸೆತಗಳಲ್ಲಿ 6 ಬೌಂಡರಿ ಹಾಗೂ ಒಂದು ಸಿಕ್ಸರ್‌ನ ನೆರವಿನಿಂದ 63 ರನ್ ಗಳಿಸಿ, ಈ ಬಾರಿಯ ಐಪಿಎಲ್‌ನ ಮೊದಲ ಅರ್ಧಶತಕ ದಾಖಲಿಸಿದರು. ಲಿವಿಂಗ್‌ಸ್ಟನ್‌ 21 ಎಸೆತಗಳಲ್ಲಿ 38 ರನ್ ಗಳಿಸಿ ಔಟಾಗದೆ ಉಳಿದರು.

Advertisements

ಉಳಿದಂತೆ ಪಂಜಾಬ್ ಪರವಾಗಿ ನಾಯಕ ಶಿಖರ್ ಧವನ್ 22 ರನ್ , ಜಾನಿ ಬೈರ್‌ಸ್ಟೋವ್ 9 ರನ್, ಇಂಪ್ಯಾಕ್ಟ್‌ ಪ್ಲೆಯರ್ ಆಗಿ ಬ್ಯಾಟಿಂಗ್ ನಡೆಸಿದ ಪ್ರಭಿಸಿಮ್ರಾನ್ ಸಿಂಗ್ 26 ರನ್, ಜಿತೇಶ್ ಶರ್ಮಾ 9 ರನ್ ಗಳಿಸಿದರೆ, ಶಶಾಂಕ್ ಸಿಂಗ್ ಶೂನ್ಯಕ್ಕೆ ಔಟಾದರು.

ಡೆಲ್ಲಿ ಕ್ಯಾಪಿಟಲ್ಸ್‌ ಪರವಾಗಿ ಕುಲ್‌ದೀಪ್ ಯಾದವ್ ಹಾಗೂ ಖಲೀಲ್ ಅಹ್ಮದ್ ತಲಾ 2 ವಿಕೆಟ್ ಪಡೆದರೆ, ಇಶಾಂತ್ ಶರ್ಮಾ 1 ವಿಕೆಟ್ ಪಡೆದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X