ಐಪಿಎಲ್ | ‘ಹೀರೋ’ ಆದ ಹರ್ಷಿತ್ ರಾಣಾ: ಹೈದರಾಬಾದ್‌ ವಿರುದ್ಧ ಕೆಕೆಆರ್‌ಗೆ 4 ರನ್‌ಗಳ ರೋಚಕ ಜಯ

Date:

Advertisements

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂದಿನ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ನೀಡಿದ್ದ 208 ರನ್‌ಗಳ ಬೃಹತ್ ಗುರಿಯನ್ನು ಕೊನೆಯ ಕ್ಷಣದಲ್ಲಿ ಎಡವಿದ ಸನ್‌ರೈಸರ್ಸ್‌ ಹೈದರಾಬಾದ್, ಕೊನೆಯ ಓವರ್‌ನಲ್ಲಿ 4 ರನ್‌ಗಳಿಂದ ಸೋಲೊಪ್ಪಿಕೊಂಡಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್, ಫಿಲ್ ಸಾಲ್ಟ್ ಅವರ ಅರ್ಧಶತಕ (54 ರನ್) ಹಾಗೂ ಮಧ್ಯಮ ಕ್ರಮಾಂಕದ ಸ್ಫೋಟಕ ಬ್ಯಾಟರ್ ಆಂಡ್ಯ್ರೂ ರಸ್ಸೆಲ್ ಅವರ ಆಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 208 ರನ್ ದಾಖಲಿಸಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಸನ್‌ರೈಸರ್ಸ್‌ ಹೈದರಾಬಾದ್, ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ 5 ರನ್‌ಗಳ ಅವಶ್ಯಕತೆ ಇದ್ದಾಗ ಸೋಲೊಪ್ಪಿಕೊಂಡಿದೆ. ಕೆಕೆಆರ್ ಪರ ಕೊನೆಯ ಓವರ್ ಎಸೆದ ಹರ್ಷಿತ್ ರಾಣಾ, ತಮ್ಮ ತಂಡಕ್ಕೆ ರೋಚಕ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು. ಆ ಮೂಲಕ ತವರಿನಲ್ಲಿ ಹೀರೋ ಆಗಿದ್ದಾರೆ.

Advertisements

ಸನ್‌ರೈಸರ್ಸ್‌ ಹೈದರಾಬಾದ್‌ಗೆ ಕೊನೆಯ ಓವರ್‌ನಲ್ಲಿ ಕೇವಲ 13 ರನ್ ಬೇಕಾಗಿತ್ತು. ಆದರೆ ಹರ್ಷಿತ್ ರಾಣಾ ಕೇವಲ 8 ರನ್ ನೀಡಿ, ಎರಡು ವಿಕೆಟ್ ಪಡೆಯುವಲ್ಲಿ ಸಫಲರಾಗುವ ಮೂಲಕ ತಂಡಕ್ಕೆ ರೋಚಕ ಜಯ ತಂದುಕೊಟ್ಟರು. ಉತ್ತಮ ಬೌಲಿಂಗ್ ನಡೆಸಿದ ಹರ್ಷಿತ್ ರಾಣಾ, 4 ಓವರ್ ಎಸೆದು 33 ರನ್ ನೀಡಿ, ಮೂರು ವಿಕೆಟ್ ಪಡೆದು ಮಿಂಚಿದರು.

ಸನ್‌ರೈಸರ್ಸ್‌ ಹೈದರಾಬಾದ್‌ ಪರ ಹೆನ್ರಿ ಕ್ಲಾಸೆನ್ ಕೊನೆಯವರೆಗೂ ಹೋರಾಟ ನಡೆಸಿದರೂ ಕೂಡ ‘ಲಕ್’ ಅವರ ಕೈ ಹಿಡಿಯಲಿಲ್ಲ. ಕ್ಲಾಸೆನ್ 29 ಎಸೆತಗಳಲ್ಲಿ 63 ರನ್(8 ಸಿಕ್ಸ್) ಗಳಿಸಿ ಮಿಂಚಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X