ಮೇ 25ರೊಳಗೆ ಅನಧಿಕೃತ ಶಾಲೆಗಳ ಮುಚ್ಚಲು ಸೂಚನೆ

Date:

Advertisements
  • 1,316 ಅನಧಿಕೃತ ಶಾಲೆಗಳ ಪತ್ತೆ ಹಚ್ಚಿರುವ ಶಿಕ್ಷಣ ಇಲಾಖೆ
  • ಅನಧಿಕೃತ ಶಾಲೆಗಳಿಂದ ಮಕ್ಕಳ ಭವಿಷ್ಯಕ್ಕೆ ಕುತ್ತು

ರಾಜ್ಯದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಶಾಲೆಗಳನ್ನು ಮೇ 25ರೊಳಗೆ ಮುಚ್ಚಿಸಬೇಕು. ಈ ಕುರಿತು ವರದಿಯನ್ನು ಸಲ್ಲಿಸಬೇಕು ಎಂದು ಶಿಕ್ಷಣ ಇಲಾಖೆಯ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.

ರಾಜ್ಯದಲ್ಲಿ 1,316 ಅನಧಿಕೃತವಾಗಿ ಶಾಲೆಗಳಿವೆ ಎಂದು ಇಲಾಖೆ ಪತ್ತೆ ಹಚ್ಚಿದೆ. “ಹಿಂದಿನ ವರ್ಷದಲ್ಲಿ ಅಂದರೆ 2022-23ರಲ್ಲಿ ಅನಧಿಕೃತ ಶಾಲೆಗಳನ್ನು ಪಟ್ಟಿ ಮಾಡಲಾಗಿದೆ. ಈ ಅನಧಿಕೃತ ಶಾಲೆಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕಾಗಿದೆ. 2023-24ರ ಸಾಲಿನಲ್ಲಿಯೂ ಈ ಅನಧಿಕೃತ ಶಾಲೆಗಳನ್ನು ಮುಂದುವರಿಸಿದರೆ, ಇಂತಹ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪೂರೈಸುವ ಪ್ರಮಾಣ ಪತ್ರಗಳ ನೈಜತೆಯ ಬಗ್ಗೆ ದೃಢೀಕರಿಸುವುದು ಕಷ್ಟವಾಗುತ್ತದೆ. ಇದು ವಿದ್ಯಾರ್ಥಿಗಳ ಭವಿಷ್ಯದಲ್ಲಿ ತೊಂದರೆಯನ್ನುಂಟು ಮಾಡುತ್ತದೆ” ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

2023-24ರ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಅನಧಿಕೃತ ಶಾಲೆಗಳು ನಡೆಯುವುದು ಕಂಡುಬಂದರೆ ಜಿಲ್ಲಾ ಉಪನಿರ್ದೇಶಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎನ್ನಲಾಗಿದೆ. ಶಾಲಾ ನೋಂದಣಿ ಅಥವಾ ಅನುಮತಿಯನ್ನು ಪಡೆಯದೇ ನಡೆಸುತ್ತಿರುವ ಶಾಲೆಗಳು, ನೋಂದಣಿ ಇಲ್ಲದೆ ಉನ್ನತೀಕರಿಸಿದ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳು, ರಾಜ್ಯಪಠ್ಯಕ್ರಮದಲ್ಲಿ ಬೋಧಿಸಲು ಅನುಮತಿಯನ್ನು ಪಡೆದು, ಅನಧಿಕೃತವಾಗಿ ಕೇಂದ್ರ ಪಠ್ಯಕ್ರಮದಲ್ಲಿ ಬೋಧಿಸುತ್ತಿರುವ ಶಾಲೆಗಳು, ಅನಧಿಕೃತವಾಗಿ ಬೇರೆ ಮಾಧ್ಯಮದಲ್ಲಿ ಬೋಧಿಸುತ್ತಿರುವ ಶಾಲೆಗಳು ಅನಧಿಕೃತ ಶಾಲೆಗಳೆಂದು ಪರಿಗಣಿಸಲಾಗಿದೆ.

Advertisements

ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ (ಕೆಪಿಎಂಟಿಸಿಸಿ), “ಅನಧಿಕೃತ ಶಾಲೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಶಿಕ್ಷಣ ಇಲಾಖೆಯು ಈ ಬಗ್ಗೆ ಕ್ರಮ ವಹಿಸಬೇಕು. ಅಕ್ರಮವಾಗಿ ನಿರ್ಮಾಣವಾಗಿರುವ ಶಾಲೆಗಳ ಬಗ್ಗೆ ಶೀಘ್ರವಾಗಿ ಮಾಹಿತಿ ನೀಡಿದರೆ ಪೋಷಕರು ತಮ್ಮ ಮಕ್ಕಳನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಯಾವ ಶಾಲೆಗೆ ಸೇರಿಸಬೇಕೆಂದು ಚಿಂತನೆ ನಡೆಸುತ್ತಾರೆ” ಎಂದು ಶಿಕ್ಷಣ ಇಲಾಖೆಯನ್ನು ಆಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ?: ಕೇಂದ್ರೀಕರಣಗೊಳ್ಳುತ್ತಿರುವ ಶಿಕ್ಷಣ; ಮುಂದಿನ ತಲೆಮಾರಿನ ಮಕ್ಕಳ ಶಿಕ್ಷಣ ಅತಂತ್ರ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X