ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್‌ಕೆಎಸ್‌ ಬದೌರಿಯಾ ಬಿಜೆಪಿಗೆ ಸೇರ್ಪಡೆ

Date:

Advertisements

ಭಾರತೀಯ ವಾಯುಡೆಯ ಮಾಜಿ ಮುಖ್ಯಸ್ಥ, ನಿವೃತ್ತ ಏರ್‌ ಚೀಫ್ ಮಾರ್ಷಲ್ ಆರ್‌ಕೆಎಸ್‌ ಬದೌರಿಯಾ ಅವರು ಇಂದು ಬಿಜೆಪಿ ಸೇರ್ಪಡೆಯಾದರು. ನಿವೃತ್ತಿಗೂ ಮುನ್ನ ಭಾರತೀಯ ವಾಯುಪಡೆಯಲ್ಲಿ ಸುಮಾರು ಎರಡೂವರೆ ದಶಕಗಳ ಕಾಲ ಬದೌರಿಯಾ ಅವರು ಸೇವೆ ಸಲ್ಲಿಸಿದ್ದರು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಇಲಾಖೆಯ ಸಚಿವ ಅನುರಾಗ್‌ ಠಾಕೂರ್‌ ಹಾಗೂ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಕಮಲ ಪಕ್ಷಕ್ಕೆ ಸೇರಿದ್ದಾರೆ.

ಆರ್‌ಕೆಎಸ್‌ ಬದೌರಿಯಾ ಅವರು 2019 ಸೆಪ್ಟೆಂಬರ್‌ 30 ರಿಂದ 2021 ಸೆಪ್ಟೆಂಬರ್‌ 30ರವರೆಗೂ ಏರ್‌ ಚೀಫ್ ಮಾರ್ಷಲ್‌ ಆಗಿ ಸೇವೆ ಸಲ್ಲಿಸಿದ್ದರು.ಉತ್ತರ ಪ್ರದೇಶದ ಆಗ್ರ ಜಿಲ್ಲೆಯವರಾದ ಅವರು ಘಾಜಿಯಾಬಾದ್‌ನಿಂದ ಸ್ಪರ್ಧಿಸುವ ಸಾಧ್ಯತೆಯಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣೆ – ಐಪಿಎಲ್‌ ಕ್ರಿಕೆಟ್‌ನಲ್ಲಿ ಅಪ್ಪ-ಮಗನ ಆಟ

ಮತ್ತೊಬ್ಬ ಮಾಜಿ ಭೂಸೇನಾ ಮುಖ್ಯಸ್ಥರಾದ ಜನರಲ್‌ ವಿ ಕೆ ಸಿಂಗ್ ಅವರು ಘಾಜಿಯಾಬಾದ್‌ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದಾರೆ.2014ರಿಂದ ಇದೇ ಕ್ಷೇತ್ರದಿಂದ ಆಯ್ಕೆಯಾಗುತ್ತ ಬಂದಿದ್ದಾರೆ. ಬಿಜೆಪಿ ಇಲ್ಲಿಯವರೆಗೂ ಪ್ರಕಟಿಸಿದ ನಾಲ್ಕು ಪಟ್ಟಿಗಳಲ್ಲಿ ಘಾಜಿಯಾಬಾದ್‌ ಕ್ಷೇತ್ರವನ್ನು ಪ್ರಕಟಿಸಿಲ್ಲ.

ಆರ್‌ಕೆಎಸ್‌ ಬದೌರಿಯಾ 2021 ಸೆಪ್ಟೆಂಬರ್‌ನಲ್ಲಿ ಸೇವೆಯಿಂದ ನಿವೃತ್ತರಾದ ನಂತರ ವಿವೇಕ್‌ ರಾಮ್‌ ಚೌಧರಿ ಏರ್‌ ಚೀಫ್ ಮಾರ್ಷಲ್‌ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X