ಇಂದು ನಾಮಪತ್ರ ಸಲ್ಲಿಸಿದ ಹಾಲಿ ಸಿಎಂ ಬೊಮ್ಮಾಯಿ; ಮಾಜಿ ಸಿಎಂ ಸಿದ್ದರಾಮಯ್ಯ

Date:

Advertisements
  • ಬೊಮ್ಮಾಯಿ ನಾಮಪತ್ರ ಸಲ್ಲಿಕೆಗೆ ಜೊತೆಯಾದ ನಟ ಸುದೀಪ್
  • ಸಿದ್ದರಾಮಯ್ಯ ನಾಮಿನೇಷನ್‌ಗೆ ಹರಿದು ಬಂದ ಜನಸಾಗರ

ರಾಜ್ಯ ವಿಧಾನಸಭಾ ಚುನಾವಣೆ ಸಲುವಾಗಿ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ನಾಳೆ (ಏಪ್ರಿಲ್ 20) ಕಡೆಯ ದಿನವಾಗಿರುವ ಹಿನ್ನೆಲೆಯಲ್ಲಿ ಇಂದು ನಾಮಪತ್ರ ಸಲ್ಲಿಕೆಗೆ ನಾಯಕರ ದಂಡು ಹರಿದು ಬಂದಿತ್ತು. ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ನಟ ಸುದೀಪ್ ಜೊತೆ ರೋಶ್ ಶೋ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದರು.ನಾಮಪತ್ರ

ಇತ್ತ ನಂಜನಗೂಡಿನಲ್ಲಿ ಜನಸಾಗರದೊಂದಿಗೆ ಸಾಗಿ ಬಂದ ಮಾಜಿ ಸಿಎಂ ಸಿದ್ದರಾಮಯ್ಯ ನಾಮಿನೇಷನ್ ಫೈಲ್ ಮಾಡಿದರು. ಇದಕ್ಕೂ ಮುನ್ನ ಅವರು ಗ್ರಾಮ ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ಹಾಗೂ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದರು.

Advertisements

ಹಾಗೆಯೇ ಶಿಕಾರಿಪುರದ ಬಿಜೆಪಿಯ ಬಿವೈ ವಿಜಯೇಂದ್ರ ನಾಮಪತ್ರ ಸಲ್ಲಿಕೆ ಮಾಡಿದರು. ಬಿವೈ ವಿಜಯೇಂದ್ರಗೆ ತಂದೆ ಬಿಎಸ್ ಯಡಿಯೂರಪ್ಪ ಪತ್ನಿ ಪ್ರೇಮಾ, ಸೋದರ ಬಿವೈ ರಾಘವೇಂದ್ರ ಜೊತೆಯಾಗಿದ್ದರು.

ಮಗನ ನಾಮಪತ್ರ ಸಲ್ಲಿಕೆ ಸಂದರ್ಭಕ್ಕೆ ತೆರಳುವ ವೇಳೆ ತಮ್ಮ ಹಳೆಯ ಅಂಬಾಸಿಡರ್ ಕಾರನ್ನು ಯಡಿಯೂರಪ್ಪ ಬಳಕೆ ಮಾಡಿ ಗಮನ ಸೆಳೆದರು.ನಾಮಪತ್ರ

ಇತ್ತ ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ಡಾ ಜಿ. ಪರಮೇಶ್ವರ್ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಘುನಾಥನಾಯ್ಡು ನಾಮಪತ್ರ ಸಲ್ಲಿಕೆ ಮಾಡಿದರು, ಇವರಿಗೆ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಸಾಥ್ ನೀಡಿದರು.ನಾಮಪತ್ರ

ಈ ಸುದ್ದಿ ಓದಿದ್ದೀರಾ? :ಚುನಾವಣೆ 2023 | ಜೆಡಿಎಸ್‌ನಲ್ಲಿ ಪಕ್ಷಾಂತರಿಗಳ ಹವಾ; ಕೈ-ಕಮಲ ತೊರೆದು ತೆನೆ ಹೊತ್ತ 24 ಮಂದಿ

ತುಮಕೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಹಾಗೆಯೇ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಪಕ್ಷೇತರ ಅಭ್ಯರ್ಥಿಯಾಗಿ ಗೂಳಿಹಟ್ಟಿ ಶೇಖರ್ ನಾಮಪತ್ರ ಸಲ್ಲಿಕೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X