ಐಪಿಎಲ್ | ನಾಯಕನ ಆಟವಾಡಿದ ಸಂಜು ಸ್ಯಾಮ್ಸನ್: ಲಕ್ನೋಗೆ ಗೆಲ್ಲಲು 194 ರನ್‌ಗಳ ಗುರಿ ನೀಡಿದ ರಾಜಸ್ಥಾನ

Date:

Advertisements

ಐಪಿಎಲ್ 2024ರ ನಾಲ್ಕನೇ ಪಂದ್ಯವು ರಾಜಸ್ಥಾನ್ ರಾಯಲ್ಸ್, ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಡುವೆ ರಾಜಸ್ಥಾನದ ತವರು ಮೈದಾನ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು.

ತನ್ನ ನಿರ್ಧಾರಕ್ಕೆ ತಕ್ಕಂತೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ಸಂಜು ಸ್ಯಾಮ್ಸನ್, ತಮ್ಮ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 193 ರನ್ ಕೂಡಿ ಹಾಕುವಲ್ಲಿ ಯಶಸ್ವಿಯಾಯಿತು.

ಸಂಜು ಸ್ಯಾಮ್ಸನ್ 52 ಎಸೆತಗಳನ್ನು ಎದುರಿಸಿ 6 ಸಿಕ್ಸ್ ಹಾಗೂ 3 ಬೌಂಡರಿಯ ನೆರವಿನೊಂದಿಗೆ 82 ರನ್ ಗಳಿಸಿ, ಔಟಾಗದೆ ಉಳಿದರು. ಟೀಮ್ ಇಂಡಿಯಾಕ್ಕೆ ತಮ್ಮನ್ನು ಕಡೆಗಣಿಸುತ್ತಿರುವ ಆಯ್ಕೆಗಾರರಿಗೆ ಐಪಿಎಲ್‌ನ ಆರಂಭಿಕ ಪಂದ್ಯದಲ್ಲೇ ಮಿಂಚಿದ್ದು, ತಮ್ಮ ಬ್ಯಾಟ್ ಮೂಲಕವೇ ಉತ್ತರ ನೀಡಿ, ಗಮನ ಸೆಳೆದಿದ್ದಾರೆ.

Advertisements

ಟೀಮ್ ಇಂಡಿಯಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ ರಾಜಸ್ಥಾನ ಪರ ಇನ್ನಿಂಗ್ಸ್ ಆರಂಭಿಸಿದ್ದರು. ಆದರೆ, ಲಕ್ನೋ ವೇಗಿ ನವೀನ್ ಉಲ್ ಹಕ್ ಅವರು ಎಸೆದ ಎರಡನೇ ಓವರ್‌ನಲ್ಲಿ 11 ರನ್ ಗಳಿಸಿದ್ದ ಜೋಸ್ ಬಟ್ಲರ್, ವಿಕೆಟ್ ಕೀಪರ್ ಕೆ ಎಲ್ ರಾಹುಲ್‌ಗೆ ಕ್ಯಾಚಿತ್ತು ನಿರ್ಗಮಿಸಿದರು.

ಆ ಬಳಿಕ ಯಶಸ್ವಿ ಜೈಸ್ವಾಲ್ 12 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 24 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಕ್ರೀಸ್‌ಗೆ ಬಂದ ರಿಯಾನ್ ಪರಾಗ್ ನಾಯಕ ಸ್ಯಾಮ್ಸನ್‌ ಜೊತೆಗೆ ಇನ್ನಿಂಗ್ಸ್ ಕಟ್ಟಿದರು. ಈ ಜೋಡಿಯು ಮುರಿಯದ ಮೂರನೇ ವಿಕೆಟ್‌ಗೆ 59 ಎಸೆತಗಳಲ್ಲಿ 93 ರನ್‌ಗಳ ಜೊತೆಯಾಟ ನಡೆಸಿತು. ರಿಯಾನ್ ಪರಾಗ್ 29 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ ಮೂರು ಸಿಕ್ಸರ್‌ಗಳ ನೆರವಿನಿಂದ 43 ರನ್ ಗಳಿಸಿ, ನವೀನ್ ಉಲ್ ಹಕ್‌ಗೆ ವಿಕೆಟ್ ಒಪ್ಪಿಸಿದರು.

ಉಳಿದಂತೆ ಶಿಮ್ರಾನ್ ಹೆಟ್ಮಾಯರ್ 7 ರನ್ ಗಳಿಸಿದರೆ, ಇನ್ನಿಂಗ್ಸ್‌ನ ಕೊನೆಯಲ್ಲಿ ನಾಯಕ ಸ್ಯಾಮ್ಸನ್‌ಗೆ ಸಾಥ್ ನೀಡಿದ ಧ್ರುವ್ ಜುರೆಲ್, 12 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 1 ಸಿಕ್ಸರ್‌ನ ನೆರವಿನಿಂದ 20 ರನ್ ದಾಖಲಿಸಿ, ತಂಡಕ್ಕೆ ತಮ್ಮದೇ ಆದ ಕೊಡುಗೆ ನೀಡಿದರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 193 ರನ್ ಕೂಡಿ ಹಾಕುವಲ್ಲಿ ಯಶಸ್ವಿಯಾಯಿತು.

ಲಕ್ನೋ ಸೂಪರ್ ಜೈಂಟ್ಸ್ ಪರ ಬೌಲಿಂಗ್‌ನಲ್ಲಿ ನವೀನ್ ಉಲ್ ಹಕ್ 2 ವಿಕೆಟ್ ಪಡೆದರೆ, ರವಿ ಬಿಷ್ಣೋಯ್ ಹಾಗೂ ಮೊಹ್ಸಿನ್ ಖಾನ್ ತಲಾ ಒಂದೊಂದು ವಿಕೆಟ್ ಗಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X