ಚಿಕ್ಕಮಗಳೂರು | ಬಾಳೆಹೊನ್ನೂರಿನಲ್ಲಿ 2 ಸೆಂ.ಮೀ ಮಳೆ; ಕಲಬುರಗಿಯಲ್ಲಿ ಮುಂದುವರೆದ ಬಿಸಿ

Date:

Advertisements

ಕರ್ನಾಟಕದಾದ್ಯಂತ ಬಿಸಿಲಿನ ಝಳಕ್ಕೆ ಜನರು ತತ್ತರಿಸಿರುವ ನಡುವೆಯೇ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಳೆ ಸುರಿದಿದ್ದು, ಬಾಳೆಹೊನ್ನೂರಿನಲ್ಲಿ 2 ಸೆಂಟಿ ಮೀಟರ್ ಮಳೆಯಾಗಿದೆ. ಇತ್ತ ಬೆಳಗಾವಿಯ ಲೋಂಡಾದಲ್ಲಿ ಮಳೆ ಸುರಿದಿದೆ. ಉಳಿದಂತೆ ರಾಜ್ಯದಲ್ಲಿ ಒಣ ಹವೆ ಮುಂದುವರೆದಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.

ಭಾನುವಾರ (ಮಾರ್ಚ್ 24) ಬೆಳಗಿನ ವರೆಗೆ ದಾಖಲಾಗಿರುವ ಮಾಹಿತಿಯ ಪ್ರಕಾರ, ಚಿಕ್ಕಮಗಳೂರು ಹಾಗೂ ಬೆಳಗಾವಿಯ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಲೋಂಡಾದಲ್ಲಿ 1 ಸೆಂಟಿ ಮೀಟರ್ ಮಳೆಯಾಗಿರುವ ವರದಿಯಾಗಿದೆ.

ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಯಾದಗರಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಳವಾಗಿದೆ. ಅಂದರೆ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5.0 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಕಡಿಮೆ ದಾಖಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಕಡೆ ಮಳೆಯಾಗುವ ನಿರೀಕ್ಷೆ ಇದೆ.

Advertisements

ದಕ್ಷಿಣ ಒಳನಾಡಿನಲ್ಲಿ ಸೋಮವಾರ ಮುಂಜಾನೆ ವೇಳೆಯಲ್ಲಿ ಸ್ವಲ್ಪ ಚಳಿಯ ವಾತಾವರಣವಿತ್ತು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ ಈ ಜಿಲ್ಲೆಗಳಲ್ಲಿ ಅಲ್ಪ ಬಿಸಿಯ ವಾತಾವರಣವಿದೆ. ಆದರೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಏರಿಕೆಯಾಗಿದೆ. ಬೆಳಗ್ಗೆ 10ರ ಬಳಿಕ ಬಿಸಿ ಹೆಚ್ಚಾಗಲಿದೆ. ಕಲಬುರಗಿಯಲ್ಲಿ ಗರಿಷ್ಟ ಉಷ್ಣಾಂಶ 39.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಮಂಡ್ಯದಲ್ಲಿ ಕನಿಷ್ಠ ಉಷ್ಣಾಂಶ 19.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಗರದಲ್ಲಿ ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಟ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಟ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X