ಧಾರವಾಡ | ಬಿಜೆಪಿ ಇವಿಎಂ ಗದ್ದಲ ಮಾಡಲೂಬಹುದು: ವಿನೋದ್ ಅಸೂಟಿ ತಿರುಗೇಟು

Date:

Advertisements

ಸೋಲು-ಗೆಲುವು ಜನರ ಕೈಯಲ್ಲಿದೆ. 03 ಲಕ್ಷ ಮತಗಳ ಅಂತರದಿಂದ ಜಯಗಳಿಸುವುದಾಗಿ ಅಷ್ಟೊಂದು ಖಚಿತವಾಗಿ ಹೇಳಬೇಕಾದರೆ ಬಿಜೆಪಿಯು ತನ್ನ ಕುತಂತ್ರದಿಂದ ಇವಿಎಂ ಗದ್ದಲ ಮಾಡಲೂಬಹುದು ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿನೋದ್ ಅಸೂಟಿ ತಿರುಗೇಟು ನೀಡಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 03 ಲಕ್ಷ ಮತಗಳ ಅಂತರದಿಂದ ಜಯಗಳಿಸುವುದಾಗಿ ಹೇಳಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತಿಗೆ ತಿರುಗೇಟು ನೀಡಿದ್ದಾರೆ.

“ನಮ್ಮ ಪಕ್ಷದ ಎಲ್ಲ ಮುಖಂಡರ ಸಲಹೆ ಪಡೆದು ನನಗೆ ಟಿಕೆಟ್ ಕೊಟ್ಟಿದೆ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕೆಂಬ ಕಾರಣದಿಂದಲೇ ನನಗೆ ಟಿಕೆಟ್ ಕೊಟ್ಟಿದ್ದು, ಪಕ್ಷದಲ್ಲಿ ಯಾರಿಗೂ, ಯಾವುದೇ ಅಸಮಾಧಾನವಿಲ್ಲ” ಎಂದರು.

Advertisements

“ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮ ಆಗಲಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಲೆ ಕೆಲಸಕ್ಕೆ ಬರುವುದಿಲ್ಲ. ಹತ್ತು ತಿಂಗಳ ಹಿಂದೆ ವಿಧಾನಸಭೆ ಚುನಾವಣೆ ಆಗಿದೆ. ಪ್ರಧಾನಿ ಮೋದಿ ನಮ್ಮ ರಾಜ್ಯಕ್ಕೆ ಬಂದು ಹೋಗಿದ್ದರು. ಆದರೂ ಕಾಂಗ್ರೆಸ್‌ ರಾಜ್ಯದಲ್ಲಿ 135 ಸ್ಥಾನ ಗಳಿಸಿದೆ. ಜನರ ಆರ್ಶೀವಾದದಿಂದ ಸರ್ಕಾರ ಅಡಳಿತ ನಡೆಸುತ್ತಿದೆ” ಎಂದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪರಮೇಶ್ವರ್, ರಾಜಣ್ಣ, ಮುದ್ದಹನುಮೇಗೌಡ ವಲಸಿಗರು: ಬಿಜೆಪಿ ಅಭ್ಯರ್ಥಿ ಠಕ್ಕರ್

“ಧಾರವಾಡ ಕ್ಷೇತ್ರವು ಬಿಜೆಪಿಗೂ ಮೊದಲು ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. ಕ್ಷೇತ್ರದ ಜನತೆ ಬದಲಾವಣೆ ಬಯಸುತ್ತಿದ್ದಾರೆ. ಕಾಂಗ್ರೆಸ್ ನುಡಿದಂತೆ ನಡೆದಿದೆ. ಈಗ ಚುನಾವಣೆ ವೇಳೆ ಅನೇಕರು ಸುಳ್ಳು ಅಶ್ವಾಸನೆ ಕೊಡುತ್ತಿದ್ದಾರೆ. ಆದರೆ ಅದಾವುದೂ ಉಪಯೋಗವಾಗುವುದಿಲ್ಲ” ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಚಿಕ್ಕಮಗಳೂರು l ಅತ್ತೆಯನ್ನು ಹತ್ಯೆಗೈದ ಸೊಸೆ

ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಸೊಸೆಯೇ ಅತ್ತೆಯನ್ನು ಹತ್ಯೆ ಮಾಡಿರುವ ಘಟನೆ...

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಕೋಲಾರ | ಪ್ರಗತಿಪರ ರೈತ ತುರಾಂಡಹಳ್ಳಿ ರವಿ ತೋಟಕ್ಕೆ ಅಂತಾರಾಷ್ಟ್ರೀಯ ಅಧಿಕಾರಿಗಳು ಭೇಟಿ

ಕೋಲಾರ ತಾಲೂಕಿನ ತುರಾಂಡಹಳ್ಳಿ ಗ್ರಾಮದ ಪ್ರಗತಿಪರ ರೈತ ಟಿ.ಎನ್ ರವಿ ಅವರ...

Download Eedina App Android / iOS

X