ಮೇಕೆದಾಟು ಯೋಜನೆ | ಬಿಜೆಪಿಯವರು ದೇವೇಗೌಡರ ಸಲಹೆ ಪಡೆಯಲಿ: ರಮೇಶ್ ಬಾಬು

Date:

Advertisements

ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ ನಾಯಕರು ದೇವೇಗೌಡರಿಂದ ಸಲಹೆ ಪಡೆಯಲಿ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಮೇಕೆದಾಟು ಯೋಜನೆ ಜಾರಿಗೆ ಡಿ ಕೆ ಶಿವಕುಮಾರ್ ಅವರು ಮತ್ತು ಕಾಂಗ್ರೆಸ್ ಪಕ್ಷ ದೊಡ್ಡ ಹೋರಾಟ ಮಾಡಿತ್ತು. ಈ ಯೋಜನೆಗೆ ಅನುಮೋದನೆ ನೀಡಬೇಕು ಎಂದು ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾವನೆ ಇಡಲಾಗಿದೆ. ಈ ಮಧ್ಯೆ ಹಿರಿಯರಾದ ದೇವೇಗೌಡರು ಈ ಯೋಜನೆ ಪರವಾಗಿ ಮಾತನಾಡಿರುವುದು ಒಳ್ಳೆಯದು” ಎಂದರು.

“ಕುಮಾರಸ್ವಾಮಿ ಅವರು ಸಹ ಶೀಘ್ರ ಗುಣಮುಖರಾಗಲಿ. ಸುಮಲತಾ ಅವರನ್ನು ಅಕ್ಕ ಎಂದು ಕುಮಾರಸ್ವಾಮಿ ಕರೆದಿದ್ದಾರೆ. ಅವರ ಪರವಾಗಿ ಮಾತನಾಡುತ್ತಿದ್ದಾರೆ. ಸುಮಲತಾ ಅವರನ್ನು ಎಂಎಲ್ ಸಿ ಮಾಡಿ” ಎಂದು ಬಿಜೆಪಿಗೆ ಸಲಹೆ ನೀಡಿದರು.

Advertisements

“2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಾಗ 7 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದರು. ನಾವು ಯಾವುದೇ ಪಕ್ಷಗಳ ಮನೆ ಬಾಗಿಲಿಗೆ ಹೋಗಬಾರದು ಅವರೇ ನಮ್ಮ ಬಳಿ ಬರಬೇಕು ಎಂದು ದೇವೇಗೌಡರು ಪದೇ, ಪದೇ ಹೇಳುತ್ತಿದ್ದರು. ಈಗ ಪ್ರತಿದಿನ ಯಡಿಯೂರಪ್ಪ ಅವರ ಮನೆ ಬಾಗಿಲು ತಟ್ಟುವ ಪರಿಸ್ಥಿತಿ ಉಂಟಾಗಿದೆ” ಎಂದು ಕುಟುಕಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಡಿಕೆ ಕದ್ದ ಕಳ್ಳ ಜೈಲಿಗೆ, ಆನೆ ಕದ್ದ ಕಳ್ಳ ಎಲ್ಲಿಗೆ?

“ಈ ಹಿಂದೆ ರಾಮಕೃಷ್ಣ ಹೆಗಡೆ ಅವರು ಹಿಂದೆ ಲೋಕಶಕ್ತಿ ಪಕ್ಷ ಸ್ಥಾಪಿಸಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು 3 ಸ್ಥಾನಗಳನ್ನು ಗೆದ್ದರು. ಕರ್ನಾಟಕದಲ್ಲಿ ಈ ಪಕ್ಷ ಇತ್ತು ಎಂಬುದೇ ಜನಕ್ಕೆ ಮರೆತು ಹೋಗಿದೆ. ಇದೇ ಪರಿಸ್ಥಿತಿ ಜೆಡಿಎಸ್ ಪಕ್ಷಕ್ಕೆ ಖಂಡಿತಾ ಬರಲಿದೆ. ಜೆಡಿಎಸ್ ಕರ್ನಾಟಕದಿಂದ ಕಣ್ಮರೆ ಆಗುತ್ತದೆ. ಕೇವಲ ಮೂರು ಸ್ಥಾನಕ್ಕೆ ಅಂಗಲಾಚುತ್ತಿದೆ. ಸಿ.ಎಸ್.ಪುಟ್ಟರಾಜು ಅವರನ್ನೇ ಅಭ್ಯರ್ಥಿ ಎಂದು ಹೇಳಿ ಈಗ ನಾನೇ ಸ್ಪರ್ಧೆ ಮಾಡುತ್ತೇನೆ ಎನ್ನುತ್ತಿದ್ದಾರೆ ಕುಮಾರಸ್ವಾಮಿ. ಅಂದರೆ ಇವರಿಗೆ ಕುಟುಂಬ ಮಾತ್ರ ಮುಖ್ಯ” ಎಂದು ಟೀಕಿಸಿದರು.

“2013ರ ಲೋಕಸಭಾ ಉಪಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯದಲ್ಲಿ ಬಿಜೆಪಿ ಬೆಂಬಲದಿಂದ ಜೆಡಿಎಸ್ ಸ್ಪರ್ಧೆ ಮಾಡಿತ್ತು. ಆದರೆ ಗೆದಿದ್ದು ಮಾತ್ರ ಕಾಂಗ್ರೆಸ್ ಪಕ್ಷ. ಕನಿಷ್ಠ 20 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಜೆಡಿಎಸ್ ಪಕ್ಷದ ಆತ್ಮ ವಂಚನೆಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X