ಇಡೀ ಕೇಂದ್ರ ಸರ್ಕಾರವೇ ಬಂದರೂ ಸುಧಾಕರ್ ಸಂಸತ್ತಿನ ಮೆಟ್ಟಿಲು ತುಳಿಯಲು ಬಿಡಲ್ಲ: ಪ್ರದೀಪ್ ಈಶ್ವರ್ ಸವಾಲು

Date:

Advertisements

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿಯಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಟೀಕಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಕರೋನಾ ಸಮಯದಲ್ಲಿ 2200 ಕೋಟಿ ಹಗರಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. 40 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಮಾಡಿದ್ದಾರೆ. ಆದರೂ ಬಿಜೆಪಿ ಅವರಿಗೆ ಟಿಕೆಟ್ ನೀಡಿದೆ” ಎಂದು ವಾಗ್ದಾಳಿ ನಡೆಸಿದರು.

“ಒಬ್ಬ ಸಾಮಾನ್ಯ ವ್ಯಕ್ತಿ ಮೇಲೆ ಸೋತ ವ್ಯಕ್ತಿಗೆ, ಟ್ಯೂಷನ್ ಟೀಚರ್ ವಿರುದ್ಧ ಸೋತ ವ್ಯಕ್ತಿಗೆ ಏಕೆ ಟಿಕೆಟ್ ನೀಡಿದರು ಎನ್ನುವುದೇ ಆಶ್ವರ್ಯ. ರಾಜ್ಯದ ಕೆಲವು ಬಿಜೆಪಿ ನಾಯಕರಿಗೆ ಸಹಾಯ ಮಾಡಿರುವ ಕಾರಣ ಟಿಕೆಟ್ ದೊರೆತಿದೆ. ಹಿರಿಯ ನಾಯಕರಿಗೆ ಸೂರ್ಯ ನಮಸ್ಕಾರ, ಶವಾಸನ, ಕಪಾಲಿಪಾತಿ, ಧೀರ್ಘ ದಂಡ ನಮಸ್ಕಾರ ಈ ರೀತಿಯ ಸೇವೆಯನ್ನು ಮಾಡಿರುವ ಕಾರಣ ಟಿಕೆಟ್ ಸಿಕ್ಕಿರಬಹುದು” ಎಂದು ಲೇವಡಿ ಮಾಡಿದರು.

Advertisements

“ಸಾಮಾನ್ಯ ಮನುಷ್ಯನಾದ ನಾನು ನನ್ನ ಎಲ್ಲಾ ವ್ಯವಹಾರ, ಗಳಿಕೆ, ಖರ್ಚು ಸೇರಿದಂತೆ ನನ್ನ ಸಂಪೂರ್ಣ ಆದಾಯದ ಬಗ್ಗೆ ನಾಳೆಯೇ ಲೆಕ್ಕ ನೀಡಲು ಸಿದ್ದನಿದ್ದೇನೆ. ನೀವು ನನ್ನ ಮೇಲೆ ಐಟಿ, ಇಡಿ ಬಿಡುವ ಪ್ರಮೇಯವೇ ಬೇಡ. ನೀವು ಪ್ರಾಮಾಣಿಕರಾಗಿದ್ದರೆ ನಿಮ್ಮ ಆದಾಯದ ಮೂಲವನ್ನು ಘೋಷಣೆ ಮಾಡುತ್ತೀರಾ. ನಿಮಗೆ ಆ ಧೈರ್ಯ ಇದೆಯೇ? ಸಂಸತ್ತು ಘನತೆಯನ್ನು ಹೊಂದಿರುವ ಸ್ಥಳ, ಅಲ್ಲಿಗೆ ನಿಮ್ಮನ್ನು ನಾವು ಹೋಗಲು ಬಿಡುವುದಿಲ್ಲ. ಇಡೀ ಕೇಂದ್ರ ಸರ್ಕಾರವೇ ಬಂದು ನಿಂತುಕೊಂಡರೂ ಸುಧಾಕರ್ ಅವರು ಸಂಸತ್ತಿನ ಮೆಟ್ಟಿಲನ್ನು ತುಳಿಯಲು ಬಿಡುವುದಿಲ್ಲ” ಎಂದು ಸವಾಲು ಹಾಕಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪರಮೇಶ್ವರ್, ರಾಜಣ್ಣ, ಮುದ್ದಹನುಮೇಗೌಡ ವಲಸಿಗರು: ಬಿಜೆಪಿ ಅಭ್ಯರ್ಥಿ ಠಕ್ಕರ್

“ಸುಧಾಕರ್ ಅವರು ಗೆದ್ದರೆ ಕೇಂದ್ರದ ಬಿಜೆಪಿಯ ಮಂತ್ರಿಗಳಿಗೂ ಇವರು ಒಂದಷ್ಟು ಆಸನಗಳನ್ನು ಕಲಿಸುತ್ತಾರೆ. ಒಂದಷ್ಟು ಜನರ ಆತ್ಮ ಸಂತೋಷ, ಆತ್ಮ ತೃಪ್ತಿಗೆ ಕೆಲಸ ಮಾಡುತ್ತಾರೆ. ಇದಾದ ನಂತರ ರಾಜ್ಯದಲ್ಲಿ ವಿಜಯೇಂದ್ರ ಸೇರಿದಂತೆ ಯಾರೂ ಇರುವುದಿಲ್ಲ” ಎಂದರು.

“ಕೆ. ಸುಧಾಕರ್ ವಿಚಿತ್ರವಾದ ರಾಜಕಾರಣಿ. ಬಿಜೆಪಿಯ ಕೆಲವು ನಾಯಕರು ಹೇಳಿದರು ಸುಧಾಕರ್ ತುಂಬಾ ಕ್ರಿಮಿನಲ್ ಮನುಷ್ಯ ನಿನ್ನ ಅವನು ಬಿಡುವುದಿಲ್ಲ ಎಂದು. ಆದರೆ ನಾನೇ ಅವರನ್ನು ಬಿಡುವುದಿಲ್ಲ ಎಂದು ಹೇಳಿದ್ದೇನೆ. ಸುಧಾಕರ್ ಅವರು ಮಾಡಿದ ಭ್ರಷ್ಟಾಚಾರದ ವಿರುದ್ದ ನನ್ನ ಹೋರಾಟ” ಎಂದು ಹೇಳಿದರು.

“ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಭಾಗದ ಯುವಕರು, ಜನತೆ ನನ್ನ ಮಾತನ್ನು ಗಮನವಿಟ್ಟು ಕೇಳಬೇಕು. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷ ಯಾರಿಗೆ ಟಿಕೆಟ್ ನೀಡಿದರು ನೀವು ಬೆಂಬಲ ನೀಡಬೇಕು. ಸುಧಾಕರ್ ಗೆದ್ದರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ಆತ ಭ್ರಷ್ಟಾಚಾರಿ ಎಂದು ಅವರ ಪಕ್ಷದ ಯಲಹಂಕ ಶಾಸಕ ವಿಶ್ವನಾಥ್ ಹೇಳಿದ್ದಾರೆ. ಅವರ ಅಹಂಕಾರದ ಬಗ್ಗೆ ಅವರ ಪಕ್ಷದ ಜನರೇ ಮಾತನಾಡುತ್ತಾರೆ” ಎಂದರು.

“ನಾನು 10 ಆಂಬ್ಯುಲೆನ್ಸ್ ಗಳನ್ನು ಉಚಿತವಾಗಿ ಜನರ ಸೇವೆಗೆ ಬಿಟ್ಟಿದ್ದೇನೆ. ತಾವು ಆರೋಗ್ಯ ಸಚಿವರಾಗಿದ್ದವರು ಏನು ಕೆಲಸ ಮಾಡಿದ್ದೀರಾ ಹೇಳಿ? ಉತ್ಸವ ಮಾಡಿ ಎಲ್ಲಾ ಸೂಪರ್ ಸ್ಟಾರ್ಗಳನ್ನು ಕರೆದುಕೊಂಡು ಬಂದಿರಿ, ಆದರೆ ಸಾಮಾನ್ಯ ಹುಡುಗನ ವಿರುದ್ದ ಸೋತು ಹೋದಿರಿ. ಸೆಲೆಬ್ರಿಟಿ ಬಂದರೆ ಮತ ಹಾಕುವ ಕಾಲ ಹೋಯಿತು” ಎಂದು ಹೇಳಿದರು.

“ಒಂದೇ ಒಂದು ರೂಪಾಯಿ ಲಂಚ ತೆಗೆದುಕೊಂಡಿಲ್ಲ ಎಂದು ಭೋಗನಂದೀಶ್ವರ ದೇವಸ್ಥಾನದಲ್ಲಿ ಆಣೆ ಮಾಡುತ್ತೇನೆ. ಅವರು ಕೊರೋನಾ ಸಮಯದಲ್ಲಿ ಲಂಚ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ. ಆಗ ನಿಮ್ಮ ವಿರುದ್ದ ಮಾತನಾಡುವುದನ್ನೇ ನಿಲ್ಲಿಸುತ್ತೇನೆ. ಆದಾಯದ ಮೂಲ ಕೇಳಿದರೆ ಎಲ್ಲರಿಗೂ ಬೈಯ್ಯುತ್ತಾರೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X