ಜನಸಂಖ್ಯೆಯಲ್ಲಿ ಚೀನಾ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಭಾರತ

Date:

Advertisements
  • 2050ರಲ್ಲಿ ಭಾರತದ ಜನಸಂಖ್ಯೆ 166.08 ಕೋಟಿ ಆಗಿರುತ್ತದೆ
  • ಚೀನಾದಲ್ಲಿ 20 ಕೋಟಿ ಜನರು 65 ವರ್ಷ ಮೇಲ್ಪಟ್ಟವರು

ವಿಶ್ವದಲ್ಲಿಯೇ ಭಾರತ ಈಗ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಿದೆ.

ವಿಶ್ವಸಂಸ್ಥೆ ನೀಡಿರುವ ವರದಿಯಲ್ಲಿ, ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಹಿಂದಿಕ್ಕಿದೆ. ವರದಿಯ ಪ್ರಕಾರ, ಈಗ ಭಾರತದ ಜನಸಂಖ್ಯೆ 142.86 ಕೋಟಿ ಆಗಿದೆ. ಚೀನಾ 142.57 ಕೋಟಿ ಜನಸಂಖ್ಯೆಯೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ.

2022ರಲ್ಲಿ ಚೀನಾದ 142.06 ಕೋಟಿಗೆ ಹೋಲಿಸಿದರೆ, ಭಾರತದ ಜನಸಂಖ್ಯೆಯು 141.02 ಕೋಟಿ ಇತ್ತು. 2050ರಲ್ಲಿ ಭಾರತದ ಜನಸಂಖ್ಯೆಯು 166.08 ಕೋಟಿ ಆಗಿರುತ್ತದೆ ಎಂದು ಅಂದಾಜಿಸಲಾಗಿದೆ.

Advertisements

ಒಂದು ವರ್ಷದಲ್ಲಿ ಭಾರತದ ಜನಸಂಖ್ಯೆ ಶೇ.1.56ರಷ್ಟು ಹೆಚ್ಚಾಗಿದೆ. ಭಾರತದ ಶೇ. 25ರಷ್ಟು ಜನರ ವಯಸ್ಸು 0-14 ವರ್ಷ, 10-19 ವರ್ಷ ವಯೋಮಾನದ ಶೇ.18 ಜನರಿದ್ದಾರೆ. 10-24 ವರ್ಷ ವಯಸ್ಸಿನ ಜನರ ಸಂಖ್ಯೆ ಶೇ. 26. ಭಾರತದಲ್ಲಿ 15-64 ವರ್ಷಗಳ ನಡುವೆ ಸುಮಾರು ಶೇ. 68 ಜನರಿದ್ದಾರೆ. ಅಂದರೆ ಭಾರತವು ಅತಿ ಹೆಚ್ಚು ಯುವಕರನ್ನು ಹೊಂದಿದೆ. ಇತ್ತೀಚಿನ ವರದಿಯು ಭಾರತದ ಒಟ್ಟು ಫಲವತ್ತತೆ ದರ 2.0 ಎಂದು ಅಂದಾಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಭಾರತದ ಚಿತ್ರಣವನ್ನು ಬದಲಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಭಾರತೀಯ ಪುರುಷನ ಸರಾಸರಿ ಜೀವಿತಾವಧಿ 71 ವರ್ಷ, ಮಹಿಳೆಯರ ಜೀವಿತಾವಧಿ 74 ವರ್ಷ. ಈ ವರದಿಯನ್ನು 1978ರಿಂದ ಪ್ರಕಟಿಸಲಾಗುತ್ತಿದೆ. ಈಗ ವಿಶ್ವದ ಜನಸಂಖ್ಯೆ 800 ಕೋಟಿ ದಾಟಿದೆ ಎಂದು ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿಯ (ಯುಎನ್‌ಎಪ್‌ಪಿಎ) ಭಾರತದ ಪ್ರತಿನಿಧಿ ತಿಳಿಸಿದ್ದಾರೆ.

ಚೀನಾದಲ್ಲಿ ಒಂದು ಮಗುವಿನ ನೀತಿ ರದ್ದುಗೊಳಿಸಿ, ಮೂರು ಮಕ್ಕಳಿಗೆ ಅವಕಾಶ ನೀಡಿದ ನಂತರ ಜನಸಂಖ್ಯೆಯು ನಿರೀಕ್ಷೆಯಂತೆ ಹೆಚ್ಚಾಗಲಿಲ್ಲ. ಇಲ್ಲಿ 20 ಕೋಟಿ ಜನರು 65 ವರ್ಷ ಮೇಲ್ಪಟ್ಟವರಿದ್ದಾರೆ.

ಚೀನಾ ತನ್ನ ವೃದ್ಧರ ಜನಸಂಖ್ಯೆಯಿಂದ ತೊಂದರೆಗೀಡಾಗಿದೆ. ಅಲ್ಲಿ ಜನಸಂಖ್ಯೆ ಹೆಚ್ಚಿಸಲು ಸರ್ಕಾರ ಜನರಿಗೆ  ಹೊಸ ಯೋಜನೆಗಳನ್ನು ನೀಡುತ್ತಿದೆ. ಆದರೆ, ಅಲ್ಲಿಯ ಜನರು ಒಂದಕ್ಕಿಂತ ಹೆಚ್ಚು ಮಕ್ಕಳಿಗೆ ಜನ್ಮ ನೀಡುತ್ತಿಲ್ಲ. ಈಗ ಅವಿವಾಹಿತರು ಸಹ ಅಲ್ಲಿ ಮಗುವಿಗೆ ಜನ್ಮ ನೀಡಬಹುದು, ಮದುವೆಯಾದ ದಂಪತಿಯ ಮಗುವಿಗೆ ಸಿಗುವ ಎಲ್ಲಾ ಸೌಲಭ್ಯಗಳು ಅವರಿಗೆ ಸಿಗುತ್ತವೆ. ಅಲ್ಲಿ ಒಂದು ಕಾಲದಲ್ಲಿ ಜನರ ಸಂಖ್ಯೆ ನಿಯಂತ್ರಿಸಲು ಹಲವು ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿತ್ತು.  

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X