ದಾವಣಗೆರೆ | ಲೋಕಸಭಾ ಟಿಕೆಟ್ ಹಂಚಿಕೆ: ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ; ವಚನಾನಂದ ಸ್ವಾಮೀಜಿ ಅಸಮಧಾನ

Date:

Advertisements

ರಾಜ್ಯದಲ್ಲಿ ಹೆಚ್ಚಿರುವ ಪಂಚಮಸಾಲಿ ಸಮಾಜಕ್ಕೆ ಟಿಕೆಟ್ ಹಂಚಿಕೆಯಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಕೇಳಲಾಗಿತ್ತು.  ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ನಮ್ಮ ಸಮಾಜಕ್ಕೆ  ಗೌರವ ನೀಡಿಲ್ಲ. ಸಮಾಜಕ್ಕೆ ನ್ಯಾಯ ಸಿಗದಿದ್ದರೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಇರುವ ನಮ್ಮ ಪಂಚಮಸಾಲಿ ಸಮಾಜಕ್ಕೆ ಬಿಜೆಪಿಯಲ್ಲಿ ಕೇವಲ ಒಂದು ಮತ್ತು ಕಾಂಗ್ರೆಸ್ ನಲ್ಲಿ ಕೇವಲ ಎರಡು ಟಿಕೆಟ್ ಹಂಚಿಕೆ ಮಾಡಲಾಗಿದೆ. ಇದು ನಮ್ಮ ಸಮಾಜಕ್ಕೆ ಆಗಿರುವ ನ್ಯಾಯವನ್ನು ಎತ್ತಿ ತೋರಿಸುತ್ತದೆ ಹಾಗಾಗಿ ನಾವು ಇತರ ವಿರುದ್ಧದ ನಿಯತ್ತಿದ್ದೇವೆ ರಾಷ್ಟ್ರೀಯ ಪಕ್ಷಗಳು ನಮ್ಮ ಸಮಾಜಕ್ಕೆ ಮನ್ನಣೆ ನೀಡಿ ಲೋಕಸಭೆ ಟಿಕೆಟ್ ಘೋಷಿಸಬೇಕಿತ್ತು ಎಂದು ಸಮಾಧಾನ ವ್ಯಕ್ತಪಡಿಸಿದರು.

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಈ ವಿಚಾರ ಕುರಿತಂತೆ ರಾಜ್ಯದೆಲ್ಲೆಡೆ ಪ್ರವಾಸ ಮಾಡುತ್ತೇವೆ. ದಾವಣಗೆರೆ, ಹಾವೇರಿ, ಧಾರವಾಡ, ಕೊಪ್ಪಳ, ವಿಜಯಪುರ, ಕಲಬುರಗಿ, ಉತ್ತರ ಕನ್ನಡ, ಚಿಕ್ಕೋಡಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪಂಚಮಸಾಲಿ ಸಮಾಜ ಹೆಚ್ಚಿದೆ. ಮಾತ್ರವಲ್ಲ, ನಿರ್ಣಾಯಕ ಪಾತ್ರ ವಹಿಸುತ್ತದೆ. ಹಾಗಾಗಿ, ಹೆಚ್ಚಿನ ಪ್ರಾತಿನಿಧ್ಯ ದೊರಕದಿದ್ದರೆ ಉತ್ತರ ನೀಡುತ್ತೇವೆ ಎಂದು ಹೇಳಿದರು.

Advertisements

ಸಮಾಜಕ್ಕೆ ಆಗಿರುವ ಅನ್ಯಾಯ ಕುರಿತಂತೆ ಮುಖಂಡರು, ಬಾಂಧವರ ಜೊತೆ ಸಮಾಲೋಚನೆ ನಡೆಸುತ್ತೇವೆ. ಸುದೀರ್ಘವಾಗಿ ಚರ್ಚಿಸುತ್ತೇವೆ. ಹಲವು ಕ್ಷೇತ್ರಗಳಲ್ಲಿ ಹೆಚ್ಚಿನ ಮತದಾರರಿದ್ದಾರೆ. ಚುನಾವಣೆಯಲ್ಲಿ ಉತ್ತರ ನೀಡುತ್ತೇವೆ, ಕಾದು ನೋಡಿ ಎಂದು ಎಚ್ಚರಿಕೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X