ರಾಯಚೂರು | ರಾಜಾ ಅಮರೇಶ್ವರ ನಾಯಕರಿಗೆ ಟಿಕೆಟ್; ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ

Date:

Advertisements

ಬಿ ವಿ ನಾಯಕರಿಗೆ ಟಿಕೆಟ್ ನೀಡದೇ ಇರುವ ಕುರಿತು ಕಾರ್ಯಕರ್ತರಲ್ಲಿ ಅಸಮಧಾನವಿದ್ದು, ಮಾರ್ಚ್‌ 27ರಂದು ಸಮಾನ ಮನಸ್ಕ ಅಭಿಮಾನಿಗಳಿಂದ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ರಾಯಚೂರು ಜಿಲ್ಲೆಯ ಮಾನ್ವಿ ಟಿಎಪಿಎಂಎಸ್ ಅಧ್ಯಕ್ಷ ತಿಮ್ಮಾರೆಡ್ಡಿ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಬಿಜೆಪಿ ಮುಖಂಡರು ಟಿಕೆಟ್‌ ನೀಡುವ ಭರವಸೆ ಮೇಲೆಯೇ ಬಿ ವಿ ನಾಯಕ ಅವರು ಲೋಕಸಭಾ ಕ್ಷೇತ್ರದ ಕಾರ್ಯಕರ್ತರು, ಮುಖಂಡರನ್ನು ಭೇಟಿ ಮಾಡಿ ಸಿದ್ದತೆ ನಡೆಸಿದ್ದರು. ಆದರೆ ಪಕ್ಷದ ವರಿಷ್ಠರು ರಾಜಾ ಅಮರೇಶ್ವರ ನಾಯಕರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಹಾಲಿ ಸಂಸದರಾಗಿರುವ ಅಮರೇಶ್ವರ ನಾಯಕ ಪಕ್ಷದ ಕಾರ್ಯಕರ್ತರು, ಮುಖಂಡರೊಂದಿಗೆ ಸಂಪರ್ಕ ಹೊಂದಿಲ್ಲ” ಎಂದು ಹೇಳಿದರು.

“ಅಧಿಕಾರದ ಅವಧಿಯಲ್ಲಿ ಪಕ್ಷದ ಕಾರ್ಯಕರ್ತರಿಂದಲೂ ದೂರವಿದ್ದವರಿಗೆ ಟಿಕೇಟ್ ನೀಡಿರುವ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕೆಂಬುದು ಕಾರ್ಯಕರ್ತರ ಒತ್ತಾಯವಾಗಿದೆ. ಪಕ್ಷ ನಡೆಸಿರುವ ಸರ್ವೆಗಳಲ್ಲಿಯೂ ಬಿ ವಿ ನಾಯಕ ಅಭ್ಯರ್ಥಿಯಾದರೆ ಗೆಲ್ಲುವ ಅವಕಾಶವಿದೆ ಎಂಬ ಮಾಹಿತಿಯಿದೆ. ಆದರೆ ಏಕಾಏಕಿ ಬದಲಾವಣೆ ಮಾಡಲು ಕಾರಣ ಗೊತ್ತಾಗಿಲ್ಲ. ಪಕ್ಷದ 8 ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರು, ಅಭಿಮಾನಿಗಳು ಸಭೆಗೆ ಆಗಮಿಸಲಿದ್ದು ಬಿ ವಿ ನಾಯಕರಿಗೆ ಟಿಕೆಟ್ ಘೋಷಿಸುವಂತೆ ಒತ್ತಾಯಿಸಲಾಗುತ್ತದೆ. ಪಕ್ಷದ ತೀರ್ಮಾನವನ್ನು ಗೌರವಿಸಬೇಕಾಗುತ್ತದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ತನ್ವೀರ್‌ಗೆ ಹಳೇ ಮೈಸೂರು ಭಾಗದ ‘ಜವಾಬ್ದಾರಿ’

ಈ ಸಂದರ್ಭದಲ್ಲಿ ಜಂಬಣ್ಣ ನಿಲೋಗಲ್, ವೀರಭದ್ರಪ್ಪಗೌಡ ಭೋಗಾವತಿ, ವೀರೇಶನಾಯಕ, ಮಹಾಂತೇಶ ಪಾಟೀಲ್ ಅತ್ತನೂರು, ಮಲ್ಲಿಕಾರ್ಜುನ ಜಕ್ಕಲದಿನ್ನಿ, ನಾಗಲಿಂಗಸ್ವಾಮಿ, ನರಸಿಂಹರಾವ್ ಕುಲಕರ್ಣಿ, ವೀರನಗೌಡ ಗಣದಿನ್ನಿ ಇದ್ದರು.

ವರದಿ : ಹಫೀಜುಲ್ಲ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X