ಬಿಜೆಪಿ ಟಿಕೆಟ್ ಕೈತಪ್ಪುತ್ತಿದ್ದಂತೆ ಕಾಂಗ್ರೆಸ್ ಸೇರಲು ವರುಣ್ ಗಾಂಧಿಗೆ ಆಹ್ವಾನ

Date:

Advertisements

ಉತ್ತರ ಪ್ರದೇಶದ ಬಿಜೆಪಿ ಸಂಸದ ವರುಣ್ ಗಾಂಧಿ ಅವರಿಗೆ ಪಿಲಿಭಿತ್ ಕ್ಷೇತ್ರದಿಂದ ಟಿಕೆಟ್‌ ಕೊಡಲು ಬಿಜೆಪಿ ನಿರಾಕರಿಸಿದೆ. ಈ ಬೆನ್ನಲ್ಲೇ ಅವರನ್ನು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕಾಂಗ್ರೆಸ್‌ಗೆ ಆಹ್ವಾನಿಸಿದ್ದಾರೆ. “ವರುಣ್ ಗಾಂಧಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾದರೆ ನಾವು ತುಂಬಾ ಸಂತೋಷಪಡುತ್ತೇವೆ” ಎಂದು ಹೇಳಿದ್ದಾರೆ.

“ವರುಣ್ ಗಾಂಧಿ ಉತ್ತಮ ವ್ಯಕ್ತಿತ್ವ ಹೊಂದಿರುವ ಪ್ರಬಲ ನಾಯಕ ಮತ್ತು ಗಾಂಧಿ ಕುಟುಂಬದೊಂದಿಗೆ ಸಂಬಂಧವನ್ನು ಹೊಂದಿದ್ದಾರೆ. ಆದ್ದರಿಂದಾಗಿ ಬಿಜೆಪಿಯು ವರುಣ್ ಗಾಂಧಿ ಅವರಿಗೆ ಲೋಕಸಭೆ ಚುನಾವಣೆ ಟಿಕೆಟ್ ನೀಡಿಲ್ಲ. ಅವರು ಕಾಂಗ್ರೆಸ್‌ಗೆ ಬರಬೇಕೆಂದು ನನಗೆ ಅನಿಸುತ್ತದೆ. ನಮಗೆ ಅದರಿಂದ ಸಂತೋಷವಾಗುತ್ತದೆ” ಎಂದು ಚೌಧರಿ ಹೇಳಿದರು.

ಇದನ್ನು ಓದಿದ್ದೀರಾ?  ಅಘೋಷಿತ ತುರ್ತು ಪರಿಸ್ಥಿತಿ: ಪ್ರಧಾನಿ ಮೋದಿಗೆ ಸೋಲು ಕಟ್ಟಿಟ್ಟ ಬುತ್ತಿ?  

Advertisements

ಪಿಲಿಭಿತ್‌ ಲೋಕಸಭೆ ಕ್ಷೇತ್ರದಲ್ಲಿ ಎರಡು ಬಾರಿ ಗೆಲುವು ಸಾಧಿಸಿರುವ ವರುಣ್ ಗಾಂಧಿ ಅವರಿಗೆ ಈ ಬಾರಿ ಟಿಕೆಟ್ ಸಿಕ್ಕಿಲ್ಲ. ಅವರ ಬದಲಾಗಿ ಉತ್ತರ ಪ್ರದೇಶ ಸಚಿವ ಜಿತಿನ್ ಪ್ರಸಾದ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ವರುಣ್ ಗಾಂಧಿಯ ತಾಯಿ ಮೇನಕಾ ಗಾಂಧಿಗೆ ಸುಲ್ತಾನಪುರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಲಾಗಿದೆ.

ಮನ್‌ಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿದ್ದ ಜಿತಿನ್ ಪ್ರಸಾದ್, 2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಅದಾದ ಬಳಿಕ ಎರಡು ವರ್ಷಗಳ ಹಿಂದೆ ಬಿಜೆಪಿ ಸೇರ್ಪಡೆಯಾಗಿದ್ದು, 2021ರಲ್ಲಿ ಉತ್ತರ ಪ್ರದೇಶದ ವಿಧಾನಸಭೆಗೆ ಆಯ್ಕೆಯಾಗಿದ್ದರು.

ವರುಣ್ ಗಾಂಧಿ ಬಿಜೆಪಿಯ ಸಂಸದರಾದರೂ ಕೂಡಾ ಮೋದಿ ಸರ್ಕಾರದ ವಿರುದ್ಧವೇ ಹಲವಾರು ಬಾರಿ ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ವರುಣ್ ಗಾಂಧಿಗೆ ಟಿಕೆಟ್ ತಪ್ಪುತ್ತಿದ್ದಂತೆ ಇತ್ತ ಅಖಿಲೇಶ್ ಯಾದವ್‌ರ ಸಮಾಜವಾದಿ ಪಕ್ಷವೂ ಕೂಡಾ ‘ವರುಣ್ ಗಾಂಧಿಗಾಗಿ ತಮ್ಮ ಪಕ್ಷದ ಬಾಗಿಲು ತೆರೆದಿದೆ’ ಎಂದು ಹೇಳಿದೆ.

ಸಂಜಯ್ ಗಾಂಧಿಯ ಪುತ್ರ ವರುಣ್ ಗಾಂಧಿ 2009ರಲ್ಲಿ ಮೊದಲ ಬಾರಿಗೆ ಲೋಕಸಭೆಯಲ್ಲಿ ಪಿಲಿಭಿತ್‌ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ. 2014ರಲ್ಲಿ ಸುಲ್ತಾನಪುರದಲ್ಲಿ ಸ್ಪರ್ಧಿಸಿ ಜಯಿಸಿದ್ದಾರೆ. ಆದರೆ ಈ ಬಾರಿ ಈ ಕ್ಷೇತ್ರದ ಟಿಕೆಟ್ ಅನ್ನು ವರುಣ್ ಗಾಂಧಿಯ ತಾಯಿ ಮೇನಕಾ ಅವರಿಗೆ ನೀಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X