ಕೇಜ್ರಿವಾಲ್ ಬಂಧನದ ಬಗ್ಗೆ ಅಮೆರಿಕ-ಜರ್ಮನಿ ಹೇಳಿದ್ದೇನು? ಕೇಂದ್ರ ಸರ್ಕಾರ ಸಿಟ್ಟಾಗಿದ್ದೇಕೆ?

Date:

Advertisements

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಬಂಧನದ ವರದಿಗಳನ್ನು ಅಮೆರಿಕ ನಿಕಟವಾಗಿ ಗಮನಿಸುತ್ತಿದ್ದು, ನಾವು ನ್ಯಾಯೋಚಿತ ಹಾಗೂ ಪಾರದರ್ಶಕ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎಂದು ಅಮೆರಿಕದ ವಕ್ತಾರರು ಹೇಳಿಕೆ ನೀಡಿದ್ದಾರೆ.

ಕೇಜ್ರಿವಾಲ್‌ ಬಂಧನದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದಿರುವ ಪ್ರತಿಭಟನೆಗಳ ನಂತರ ಇತ್ತೀಚಿಗಷ್ಟೆ ಜರ್ಮನಿ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೆ ಅಮೆರಿಕ ಕೂಡ ತನ್ನ ಪ್ರತಿಕ್ರಿಯೆ ನೀಡಿದೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಬಗ್ಗೆ ನಾವು ನ್ಯಾಯೋಚಿತ ಹಾಗೂ ಪಾರದರ್ಶಕ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎಂದು ಅಮೆರಿಕ ವಕ್ತಾರರು ಇಮೇಲ್ ಮಾಡಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

Advertisements

ಜರ್ಮನಿ ಹೇಳಿಕೆ ನೀಡಿದ ನಂತರ ಭಾರತದ ಜರ್ಮನಿ ರಾಯಭಾರಿಯನ್ನು ಕರೆಸಿಕೊಂಡಿದ್ದ ಕೆಂದ್ರ ಸರ್ಕಾರ ತನ್ನ ಆಂತರಿಕ ವಿಷಯಗಳಲ್ಲಿ ತಲೆ ಹಾಕಿರುವುದರ ಬಗ್ಗೆ ಪ್ರತಿಭಟನೆ ವ್ಯಕ್ತಪಡಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಡಿಕೆ ಕದ್ದ ಕಳ್ಳ ಜೈಲಿಗೆ, ಆನೆ ಕದ್ದ ಕಳ್ಳ ಎಲ್ಲಿಗೆ?

ಜರ್ಮನಿಯ ವಿದೇಶಾಂಗ ಇಲಾಖೆಯ ವಕ್ತಾರರಾದ ಸೆಬಾಸ್ಟಿನ್ ಫಿಸ್‌ಚೇರ್‌ ಅವರು, ಕೇಜ್ರಿವಾಲ್‌ರಂತೆ ಯಾರೆ ಆರೋಪಗಳನ್ನು ಎದುರಿಸುತ್ತಿದ್ದರೂ ನ್ಯಾಯೋಚಿತ ಹಾಗೂ ನಿಷ್ಪಕ್ಷಪಾತ ವಿಚಾರಣೆ ನಡೆಸಬೇಕು ಎಂದು ಹೇಳಿದ್ದರು.

”ನಾವು ನ್ಯಾಯಾಂಗ ಸ್ವಾತಂತ್ರ್ಯದ ಸಂಬಂಧಿಸಿದ ಮಾನದಂಡಗಳನ್ನು ನಿರೀಕ್ಷಿಸುತ್ತೇವೆ ಹಾಗೂ ಈ ಪ್ರಕರಣದಲ್ಲಿ ಸಾಮಾನ್ಯ ಪ್ರಜಾಸತ್ತಾತ್ಮಕ ತತ್ವಗಳನ್ನು ಅಳವಡಿಸಬೇಕೆಂದು ಭಾವಿಸುತ್ತೇವೆ” ಎಂದು ಹೇಳಿದ್ದರು.

ಈ ಹೇಳಿಕೆಯ ನಂತರ ಭಾರತ ಸರ್ಕಾರವು ಜರ್ಮನಿ ರಾಯಭಾರಿ ಕಚೇರಿಯ ಉಪ ಮುಖ್ಯಸ್ಥರಾದ ಜಾರ್ಜ್‌ ಎಂಜ್ವೇಲಿಯರ್‌ ಅವರನ್ನು ಕರೆಸಿಕೊಂಡು ತೀವ್ರವಾಗಿ ಪ್ರತಿಭಟನೆ ವ್ಯಕ್ತಪಡಿಸಿತ್ತು.

”ನಾವು ನಮ್ಮ ನ್ಯಾಯಾಂಗ ಪ್ರಕ್ರಿಯೆಯ ಆಂತರಿಕ ವ್ಯವಹಾರಗಳಲ್ಲಿ ಮಧ್ಯಸ್ಥಿಕೆ ವಹಿಸುವುದು ಹಾಗೂ ನಮ್ಮ ನ್ಯಾಯಾಂಗ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುವುದನ್ನು ಖಂಡಿಸುತ್ತೇವೆ. ಇಂತಹ ಪಕ್ಷಪಾತದ ಊಹೆಗಳು ಅನಗತ್ಯವಾದವು” ಎಂದು ಭಾರತ ಖಂಡಿಸಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X