ಐಪಿಎಲ್ 2023 | ಜೈಪುರದಲ್ಲಿ ‘ಸೂಪರ್’ ಸವಾಲಿಗೆ ಸಜ್ಜಾದ ರಾಜಸ್ಥಾನ ರಾಯಲ್ಸ್

Date:

Advertisements
  • ರಾಜಸ್ಥಾನ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಟ್ಸ್ ನಡುವೆ ಸ್ಪರ್ಧೆ
  • ನಾಲ್ಕು ವರ್ಷಗಳ ನಂತರ ಜೈಪುರಕ್ಕೆ ಮರಳಿದ ಐಪಿಎಲ್ ಪಂದ್ಯ

ಐಪಿಎಲ್ 16ನೇ ಆವೃತ್ತಿಯ 26ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಬುಧವಾರ ಲಕ್ನೋ ಸೂಪರ್ ಜೈಂಟ್ಸ್ ಸವಾಲನ್ನು ಎದುರಿಸಲಿದೆ.

ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ನಾಲ್ಕು ವರ್ಷಗಳ ಬಳಿಕ ಜೈಪುರ ಐಪಿಎಲ್ ಪಂದ್ಯಕ್ಕೆ ವೇದಿಕೆಯಾಗುತ್ತಿದೆ‌.

23 ಸಾವಿರ ಆಸನ ವ್ಯವಸ್ಥೆಯನ್ನು ಹೊಂದಿರುವ ಕ್ರೀಡಾಂಗಣವನ್ನು ಇತ್ತೀಚಿಗೆ ನವೀಕರಿಸಲಾಗಿದೆ.

Advertisements

ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ 4ರಲ್ಲೂ ಗೆಲುವು ಕಂಡಿರುವ ಸಂಜು ಸ್ಯಾಮ್ಸನ್ ಸಾರಥ್ಯದ ರಾಯಲ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಲಕ್ನೋ ಎರಡನೇ ಸ್ಥಾನದಲ್ಲಿದೆ‌.

ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ತಂಡದ ವಿರುದ್ಧದ ನಾಲ್ಕು ಪಂದ್ಯಗಳಲ್ಲಿ ಮೊದಲ ಗೆಲುವು ದಾಖಲಿಸಿದ ಹುಮ್ಮಸ್ಸಿನಲ್ಲಿರುವ ರಾಯಲ್ಸ್, ಬಲಿಷ್ಠ ಬ್ಯಾಟಿಂಗ್ ಲೈನ್ ಅಪ್ ಹೊಂದಿದೆ.

ಕಳೆದ ಪಂದ್ಯದಲ್ಲಿ 4 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡ ಬಳಿಕವೂ ಸಂಜು ಸ್ಯಾಮ್ಸನ್ ಮತ್ತು ಹೆಟ್ನಾಯರ್ ಭರ್ಜರಿ ಅರ್ಧಶತಕಗಳ ಮೂಲಕ 177 ರನ್ ಚೇಸ್ ಮಾಡಿತ್ತು.

ಎರಡನೇ ತವರು ಮೈದಾನ ಗುವಹಾಟಿಯ ಬರ್ಸಪರಾ ಸ್ಟೇಡಿಯಂನಲ್ಲಿ ಎರಡು ಪಂದ್ಯಗಳನ್ನಾಡಿರುವ ರಾಜಸ್ಥಾನ ರಾಯಲ್ಸ್, ಮಾನ್ಸಿಂಗ್ ಮೈದಾನದಲ್ಲೂ ಗೆಲುವಿನ ಓಟವನ್ನು ಮುಂದುವರಿಸುವ ತವಕದಲ್ಲಿದೆ‌.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಮುಂಬೈ ತಂಡಕ್ಕೆ ಹ್ಯಾಟ್ರಿಕ್ ಗೆಲುವು

ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ಆಡುವ ಪಂದ್ಯಗಳ ವೇಳಾಪಟ್ಟಿ;

ಏಪ್ರಿಲ್ 19 – vs ಲಕ್ನೋ ಸೂಪರ್ ಜೈಂಟ್ಸ್

ಏಪ್ರಿಲ್ 27 – vs ಚೆನ್ನೈ ಸೂಪರ್ ಕಿಂಗ್ಸ್

ಮೇ 5 – vs ಗುಜರಾತ್ ಟೈಟಾನ್ಸ್

ಮೇ 7 – vs ಸನ್‌ರೈಸರ್ಸ್ ಹೈದರಾಬಾದ್

ಮೇ 14 – vs ರಾಯಲ್ ಚಾಲೆಂಜರ್ಸ್ ಬೆಂಗಳೂರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X