ಅಕ್ರಮ ಆಸ್ತಿ ಗಳಿಕೆ ಆರೋಪ; ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Date:

Advertisements

ಬೀದರ್‌ ಜಿಲ್ಲೆಯ ಕಾರಂಜಾ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅಧಿಕಾರಿ ಶಿವಕುಮಾರ ಸ್ವಾಮಿ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಬೀದರ್‌ ನಗರದ ಕೃಷಿ ಕಾಲನಿಯ ಮನೆ, ಕಲಬುರಗಿ ನಗರದ ಮನೆ, ಬೀದರ್‌ ತಾಲೂಕಿನ ನಾಗೂರ್‌ ಗ್ರಾಮದ ಮನೆ ಹಾಗೂ ಭಾಲ್ಕಿ ಪಟ್ಟಣದ ಕಾರಂಜಾ ಕಚೇರಿ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಡಿವೈಎಸ್ಪಿ ನೀಲಪ್ಪ ಓಲೇಕಾರ್‌ ನೇತ್ರತ್ವದಲ್ಲಿ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Advertisements

ವಿಜಯಪುರದಲ್ಲಿ ಆರ್‌ಟಿಓ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ :

ವಿಜಯಪುರದ ಚಾಲುಕ್ಯ ನಗರದಲ್ಲಿ ಆರ್‌ಟಿಒ ಅಧಿಕಾರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಬುಧವಾರ ಬೆಳಗ್ಗೆ ದಾಳಿ ನಡೆಸಿದೆ.

ಬಾಗಲಕೋಟೆ ಜಿಲ್ಲೆ ಜಮಖಂಡಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಖಪ್ಪ ತೀರ್ಥ ಎಂಬುವರ ಮನೆ ಹಾಗೂ ಅವರ ಸಂಬಂಧಿಕರ ಮನೆ ಮೇಲೂ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಡಿಎಸ್ಪಿ ಸುರೇಶ ರೆಡ್ಡಿ, ಇನ್ಸಪೆಕ್ಟರ್ ಆನಂದ ಠಕ್ಕನ್ನವರ ಹಾಗೂ ಇತರ ಸಿಬ್ಬಂದಿ‌ ನೇತ್ರತ್ವದಲ್ಲಿ ದಾಳಿ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದರೋಡೆ ಮಾಡಿ ಕೊಡುಗೆ ನೀಡುವ ಮಾಡರ್ನ್ ರಾಬಿನ್ ಹುಡ್- ಮೋದಿ!

ಇಂಗ್ಲೆಂಡಿನ ಜನಪದ ಕಳ್ಳ ರಾಬಿನ್ ಹುಡ್ ಶ್ರೀಮಂತರ ಬಂಗಲೆಗಳನ್ನು ದರೋಡೆ ಮಾಡಿ...

ಸಿಂದಗಿ | ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್‌ಗೆ ಹೋಗುವ ದಾರಿ ಕೆಸರುಮಯ

ಸಿಂದಗಿ ಪಟ್ಟಣದ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕಿಗೆ ರಜ್ಜು(ರಾಡಿ) ತೊಳೆದುಕೊಂಡೇ...

ಕೊಲ್ಹಾರ | ಬಾಧಿತ ಗ್ರಾಮಗಳ ಬೇಡಿಕೆ ಈಡೇರಿಸುವಂತೆ ಕರವೇ ಆಗ್ರಹ

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಎನ್‌ಟಿಪಿಸಿ ಕೂಡಗಿಯಲ್ಲಿ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗ...

Download Eedina App Android / iOS

X