ಉರಿ – ನಂಜೇಗೌಡ ವಿವಾದ | ಒಕ್ಕಲಿಗರು, ಮುಸ್ಲಿಮರ ನಡುವಿನ ಒಗ್ಗಟ್ಟು ಮುರಿಯುವ ಕುತಂತ್ರ: ಸಿ ಎಂ ಇಬ್ರಾಹಿಂ

Date:

Advertisements
  • ಸಿದ್ದರಾಮಯ್ಯ ಮೈಸೂರು ಭಾಗದಿಂದ ಸ್ಪರ್ಧಿಸುವುದು ಸೂಕ್ತ
  • ರಾಜಕೀಯ ಲಾಭಕ್ಕಾಗಿ ಬಿಜೆಪಿ ನಾಯಕರಿಂದ ಸುಳ್ಳು ಪಾತ್ರಗಳ ಸೃಷ್ಠಿ

“ಉರಿಗೌಡ – ನಂಜೇಗೌಡ ಕಾಲ್ಪನಿಕ ಕಥೆಗಳನ್ನು ಸೃಷ್ಟಿಸುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ  ರವಿ ಒಕ್ಕಲಿಗರು ಹಾಗೂ ಮುಸ್ಲಿಮರ ಮಧ್ಯೆ ಎತ್ತಿಕಟ್ಟುವ ಕುತಂತ್ರ ಮಾಡುತ್ತಿದ್ದಾರೆ” ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಉರಿಗೌಡ – ನಂಜೇಗೌಡ ವಿವಾದವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಅದಿಚುಂಚನಗಿರಿ ಮಠದ ಪಿಠಾಧಿಪತಿ ನಿರ್ಮಲಾನಂದನಾಥ ಸ್ವಾಮಿಜಿ ಉರಿ – ನಂಜೇಗೌಡ ವಿವಾದವನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದ್ದರು. ಆದರೂ, ವಿವಾದ ಮುಂದುವರಿಸಿರುವ ಸಿ ಟಿ ರವಿ ಅವರಿಗೆ ಸಿ ಎಂ ಇಬ್ರಾಹಿಂ ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಜಯಪುರದಲ್ಲಿ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ”ಮೈಸೂರು ಭಾಗದಲ್ಲಿ ಒಕ್ಕಲಿಗರು ಮತ್ತು ಮುಸ್ಲಿಂರ ನಡುವಿನ ಒಗ್ಗಟ್ಟು ಮುರಿಯಲು ಉರಿ – ನಂಜೇಗೌಡ ಎಂಬ ಸುಳ್ಳು ಪಾತ್ರಗಳನ್ನು ಸೃಷ್ಟಿಸುತ್ತಿದ್ದಾರೆ. ರಾಜಕೀಯ, ಚುನಾವಣಾ ಲಾಭಕ್ಕಾಗಿ ಸಿ ಟಿ ರವಿ ಅವರು ಸಮಾಜದಲ್ಲಿನ ಶಾಂತಿ ಕದಡುವ ಮತ್ತು ಒಗ್ಗಟ್ಟು ಮುರಿಯುವ ಹೇಳಿಕೆ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

Advertisements

ಸಿದ್ದರಾಮಯ್ಯ ಅವರ ಸ್ಪರ್ಧೆಯ ಕುರಿತು ಮಾತನಾಡಿದ ಸಿ ಎಂ ಇಬ್ರಾಹಿಂ, “ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಭಾಗದಲ್ಲಿ ಸ್ಪರ್ಧಿಸುವುದು ಸೂಕ್ತ. ಬಾದಾಮಿ, ಕೋಲಾರ ಸೇರಿದಂತೆ ಇತರೆ ಯಾವ ಕ್ಷೇತ್ರಗಳೂ ಅವರಿಗೆ ಸೂಕ್ತವಲ್ಲ” ಎಂದು ಸಲಹೆ ನೀಡಿದ್ದಾರೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X