ಚೆನ್ನೈ ವಿರುದ್ಧದ ಪಂದ್ಯದಲ್ಲಿ ಶುಭಮನ್ ಗಿಲ್‌ಗೆ 12 ಲಕ್ಷ ರೂ. ದಂಡ

Date:

Advertisements

ಚೆನ್ನೈನಲ್ಲಿ ಸಿಎಸ್‌ಕೆ ತಂಡದ ವಿರುದ್ಧ ನಡೆದ ನಿನ್ನೆಯ(ಮಾ.26) ಐಪಿಎಲ್‌ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದ ನಾಯಕ ಶುಭಮನ್‌ ಗಿಲ್‌ ಅವರಿಗೆ ನಿಧಾನಗತಿಯ ಓವರ್‌ ಮಾಡಿದ ಕಾರಣಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಐಪಿಎಲ್,ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 2014ನೇ ಸಾಲಿನ ಸಿಎಸ್‌ಕೆ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್‌ ಮಾಡಿದ ಗುಜರಾತ್‌ ಟೈಟಾನ್ಸ್‌ ತಂಡದ ನಾಯಕ ಶುಭಮನ್‌ ಗಿಲ್‌ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದು ಟೂರ್ನಮೆಂಟ್‌ನ 17ನೇ ಆವೃತ್ತಿಯ ಒಂದು ತಂಡದ ಪರವಾಗಿ ಓವರ್‌ದರಕ್ಕೆ ಸಂಬಂಧಿಸಿದ ಅಪರಾಧವಾಗಿದೆ ಎಂದು ತಿಳಿಸಿದೆ.

ನಿಗದಿತ ಸಮಯದಲ್ಲಿ ಕನಿ‍ಷ್ಠ ಓವರ್‌ಗಳನ್ನು ಪೈರೈಸದ ಕಾರಣ ಐಪಿಎಲ್ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಈ ಕಾರಣಕ್ಕಾಗಿ ದಂಡ ವಿಧಿಸಲಾಗಿದೆ ಎಂದು ಐಪಿಎಲ್‌ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಭ್ರಷ್ಟರು ಬೇಕಾಗಿದ್ದಾರೆ’ ಇದು ಬಿಜೆಪಿಯ ಹೊಸ ಜಾಹೀರಾತು

17ನೇ ಆವೃತ್ತಿಯಲ್ಲಿ ಗುಜರಾತ್‌ ತಂಡದ ನಾಯಕನಾಗಿ ಶುಭಮನ್‌ ಗಿಲ್‌ ಜವಾಬ್ದಾರಿ ವಹಿಸಿಕೊಂಡಿದ್ದು, ತಮ್ಮ ನೇತೃತ್ವದಲ್ಲಿ ನಡೆದ ಮೊದಲ ಪಂದ್ಯದಲ್ಲಿಯೇ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಗೆಲುವು ಸಾಧಿಸಿತ್ತು.

ನಿನ್ನೆ ನಡೆದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ವಿರುದ್ಧದ ಎರಡನೇ ಪಂದ್ಯದಲ್ಲಿ 63 ರನ್‌ಗಳ ಸೋಲು ಅನುಭವಿಸಿತ್ತು. ನ್ಯೂಜಿಲೆಂಡ್‌ನ ರಚಿನ್ ರವೀಂದ್ರ(46), ಶಿವಂ ದುಬೆ(51) ಹಾಗೂ ನಾಯಕ ರುತುರಾಜ್ ಗಾಯಕ್‌ವಾಡ್(46) ಅವರ ಅಮೋಘ ಆಟದಿಂದ ಸಿಎಎಸ್‌ಕೆ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 206 ರನ್‌ ಗಳಿಸಿತ್ತು.

207 ರನ್‌ಗಳ ಸವಾಲನ್ನು ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್‌ಗಳನಷ್ಟೆ ಗಳಿಸಲು ಸಾಧ್ಯವಾಯಿತು. ಚೆನ್ನೈ ಪರ ದೀಪಕ್‌ ಚಹಾರ್, ಮುಸ್ತಫಿಜೂರ್ ಹಾಗೂ ತುಷಾರ್ ದೇಶಪಾಂಡೆ ತಲಾ 2 ವಿಕೆಟ್‌ಗಳನ್ನು ಪಡೆದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X