ರಾಜಸ್ಥಾನ | ಮಕ್ಕಳು ತನ್ನವಲ್ಲವೆಂದು ಶಂಕಿಸಿ ಕೊಲೆ; ವಿಕೃತ ತಂದೆಯ ಬಂಧನ

Date:

Advertisements

ಮಕ್ಕಳು ತನ್ನವಲ್ಲ ಎಂದು ಶಂಕಿಸಿದ ತಂದೆಯೊಬ್ಬ ಇಬ್ಬರು ಮಕ್ಕಳನ್ನು ಹಾಗೂ ತನ್ನ ಅಜ್ಜಿಯನ್ನು ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ವರದಿಯಾಗಿದೆ. ಆರೋಪಿ ವಿಕೃತ ತಂದೆಯನ್ನು ಬಂಧಿಸಿರುವುದಾಗಿ ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

“ಬಂಧಿತ ಆರೋಪಿ ಭೂಪ್‌ ಸಿಂಗ್‌ (32) ಎಂಬಾತ ಭೈನ್ಸಿ ಗ್ರಾಮದಲ್ಲಿ ತನ್ನ ಅಜ್ಜಿಯನ್ನು ಜನವರಿ 31ರಂದು ಹಾಗೂ ಮಕ್ಕಳಾದ ಗರ್ವಿತ್‌ (4) ಹಾಗೂ ಅನುರಾಗ್‌ (8) ಅವರನ್ನು ಫೆಬ್ರವರಿ 13ರಂದು ವಿಷ ಹಾಕಿ ಕೊಲೆ ಮಾಡಿದ್ದಾನೆ” ಎಂದು ಚುರು ಪೊಲೀಸ್‌ ಸೂಪರಿಂಟೆಂಡೆಂಟ್‌ ಜೈ ಯಾದವ್‌ ಹೇಳಿದ್ದಾರೆ.

“ತಿಂಗಳ ಅವಧಿಯಲ್ಲಿ ಮೂವರು ಮೃತಪಟ್ಟಿದ್ದರಿಂದ ಅನುಮಾನ ಮೂಡಿತ್ತು. ಹೀಗಾಗಿ, ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು” ಎಂದಿದ್ದಾರೆ.

Advertisements

“ಮಕ್ಕಳ ಶವಗಳನ್ನು ಸಮಾಧಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಗರ್ವಿತ್‌ ದೇಹದಲ್ಲಿ ವಿಷದ ಅಂಶ ಪತ್ತೆಯಾದ ಕಾರಣ, ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಯಿತು. ಬಳಿಕ ಆತ ʼಮಕ್ಕಳು ತನ್ನವಲ್ಲ ಎಂಬ ಅನುಮಾನ ಮೂಡಿತ್ತು. ಹಾಗಾಗಿ ಕೊಲೆ ಮಾಡಲು ನಿರ್ಧರಿಸಿದೆʼ ಎಂದು ವಿಚಾರಣೆ ವೇಳೆ ಒಪ್ಪಿಕೊಂಡಿರುವ ಆರೋಪಿ, ಅನುಮಾನ ಬರದಂತೆ ನೋಡಿಕೊಳ್ಳುವ ಸಲುವಾಗಿ, ಮೊದಲು ತನ್ನ ಅಜ್ಜಿಯನ್ನು ನಂತರ ಮಕ್ಕಳನ್ನು ಕೊಲೆ ಮಾಡಿದ್ದಾನೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಮೆರಿಕದ ಗಾಜಾ ನಡೆ ವಿರೋಧಿಸಿ ಪಿ.ಹೆಚ್‌ಡಿ, ಎಂಎಸ್‌ಸಿ ಪದವಿಗಳನ್ನು ಮರಳಿಸಿದ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ

“ಆರೋಪಿಯು ನರ್ಸಿಂಗ್ ಓದಿದ್ದು, ಮೆಡಿಕಲ್‌ ಸ್ಟೋರ್‌ ಹೊಂದಿದ್ದಾನೆಂಬುದೂ ವಿಚಾರಣೆ ವೇಳೆ ಗೊತ್ತಾಗಿದೆ” ಎಂದು ವಿವರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X