ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಡಿಕ್ಕಿ: ತಪ್ಪಿದ ಭಾರಿ ಅನಾಹುತ

Date:

Advertisements

ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿದ್ದ ಎರಡು ವಿಮಾನ ಗಳ ರೆಕ್ಕೆಗಳು ಡಿಕ್ಕಿ ಹೊಡೆದುಕೊಂಡಿದ್ದು, ಸ್ವಲ್ಪದರಲ್ಲಿಯೇ ಭಾರಿ ಅನಾಹುತವೊಂದು ತಪ್ಪಿದೆ.

ಒಂದು ವಿಮಾನ ಚೆನ್ನೈಗೆ ಹೊರಡಲು ಮೇಲಕ್ಕೆ ಹಾರುತ್ತಿದ್ದರೆ, ಬಿಹಾರದ ದಾರಬಾಂಗ್‌ ಮೂಲದ ವಿಮಾನ ಹೊರಡಲು ಸಿದ್ಧವಾಗಿತ್ತು. ಅಪಘಾತದಲ್ಲಿ ಎರಡು ವಿಮಾನಗಳ ರೆಕ್ಕೆಗಳು ಪರಸ್ಪರ ಬಡಿದುಕೊಂಡಿವೆ.

ಈ ಘಟನೆಯು ಇಂದು ಬೆಳಿಗ್ಗೆ 11.10ಕ್ಕೆ ಸಂಭವಿಸಿದ್ದು, ಅದೃಷ್ಟವಶಾತ್, ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

Advertisements

ವಿಮಾನಗಳ ಘರ್ಷಣೆಯಲ್ಲಿ ಚೆನ್ನೈ ಮೂಲದ ವಿಮಾನದ ರೆಕ್ಕೆ ಮುರಿದು ಬಿದ್ದರೆ, ದಾರಬಾಂಗ್ ವಿಮಾನವು ಅಸ್ತವ್ತಸ್ಥಗೊಂಡಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಭ್ರಷ್ಟರು ಬೇಕಾಗಿದ್ದಾರೆ’ ಇದು ಬಿಜೆಪಿಯ ಹೊಸ ಜಾಹೀರಾತು

ಘಟನೆಯ ಬಗ್ಗೆ ನಾಗರಿಕ ವಿಮಾನಯಾನದ ಮಹಾ ನಿರ್ದೇಶಕರು ಮಾಹಿತಿ ಪಡೆದುಕೊಂಡಿದ್ದಾರೆ. ಅಪಘಾತದ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಉನ್ನತಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲಗಳ ಪ್ರಕಾರ, ಇಂದು ಬೆಳಿಗ್ಗೆ 10.40ಕ್ಕೆ ಚೆನ್ನೈಗೆ ಹೊರಡಲು ತಯಾರಾಗಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಈ ಘಟನೆ ಸಂಭವಿಸಿದೆ. ಈ ಸಮಯದಲ್ಲಿ 6 ವಿಮಾನದ ಸಿಬ್ಬಂದಿ ಒಳಗೊಂಡು 163 ಪ್ರಯಾಣಿಕರು ಏರ್‌ ಇಂಡಿಯಾ ವಿಮಾನದಲ್ಲಿದ್ದರು. ಈ ನಡುವೆ ಕೋಲ್ಕತ್ತಾದಿಂದ ಬಿಹಾರದ ದಾರ್‌ಗಂಗಾಗೆ ಹೊರಟಿದ್ದ 6 ಸಿಬ್ಬಂದಿಯೊಂದಿಗೆ 149 ಪ್ರಯಾಣಿಕರಿದ್ದ ಇಂಡಿಗೋ ವಿಮಾನ  ಹೊರಡಲು ಸಿದ್ದವಾಗುತ್ತಿತ್ತು. ಇವೆರೆಡು ವಿಮಾನಗಳ ನಡುವೆ ಅಪಘಾತ ಸಂಭಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X