ಬಂಧನದ ವಿರುದ್ಧ ಕೇಜ್ರಿವಾಲ್‌ಗೆ ಹೈಕೋರ್ಟ್‌ನಿಂದ ಮುಕ್ತಿಯಿಲ್ಲ; ಮುಂದಿನ ವಿಚಾರಣೆ ಏ.03ಕ್ಕೆ

Date:

Advertisements

ಅಬಕಾರಿ ಹಗರಕ್ಕೆ ಸಂಬಂಧಿಸಿದಂತೆ ಮಾ.15ರಂದು ಜಾರಿ ನಿರ್ದೇಶನಾಲಯ ಬಂಧನದ ಕ್ರಮವನ್ನು ಪ್ರಶ್ನಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಳ್ಳಿ ಹಾಕಿದ್ದು, ಸದ್ಯಕ್ಕೆ ಹೈಕೋರ್ಟ್‌ನಿಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮುಕ್ತಿ ಇಲ್ಲದಂತಾಗಿದೆ.

ಕೇಜ್ರಿವಾಲ್‌ ಅವರ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಜಾರಿ ನಿರ್ದೇಶನಾಲಯಕ್ಕೆ ಏ.02ರವರೆಗೂ ಹೈಕೋರ್ಟ್ ಸಮಯ ನೀಡಿದೆ.

ಅಲ್ಲಿಯವರೆಗೂ ಕೇಜ್ರಿವಾಲ್‌ ಅವರು ಜೈಲಿನಲ್ಲಿಯೇ ಇರಬೇಕಿದೆ. ಸದ್ಯ ಅರವಿಂದ್ ಕೇಜ್ರಿವಾಲ್ ಇ.ಡಿ ಕಸ್ಟಡಿಯಲ್ಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಳುವವರ ಕೊಡಲಿಗೆ ಹಾಡಹಗಲೇ ಬಲಿಯಾಗತೊಡಗಿವೆ ಒಕ್ಕೂಟದ ಬೇರುಗಳು

ಈ ನಡುವೆ ಜೈಲಿನಲ್ಲಿರುವ ಕಾರಣ ಮುಖ್ಯಮಂತ್ರಿ ಹುದ್ದೆಯಿಂದ ತೆಗೆದು ಹಾಕಬೇಕೆಂದು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ. ದೆಹಲಿ ಹೈಕೋರ್ಟ್‌ನ ಉಸ್ತುವಾರಿ ಮುಖ್ಯ ನ್ಯಾಯಮೂರ್ತಿ ಮನ್‌ಮೋಹನ್‌ ಅವರು ವಿಚಾರಣೆ ನಡೆಸಲಿದ್ದಾರೆ.

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡುತ್ತಿರುವ ಸಮನ್ಸ್‌ಗಳಿಂದ ಮಧ್ಯಂತರ ರಕ್ಷಣೆ ನೀಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ, ಕೇಜ್ರಿವಾಲ್‌ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X