ಕಾಂಗ್ರೆಸ್ ಬ್ಯಾಂಕ್ ಖಾತೆ ನಿರ್ಬಂಧ ಉಲ್ಲೇಖ; ಕೇಜ್ರಿವಾಲ್ ಬಂಧನದ ಬಗ್ಗೆ ಮತ್ತೆ ಹೇಳಿಕೆ ನೀಡಿದ ಅಮೆರಿಕಾ

Date:

Advertisements

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಅಮೆರಿಕಾ ಹೇಳಿಕೆ ನೀಡಿದ ಬೆನ್ನಲ್ಲೇ ಭಾರತದ ರಾಯಭಾರಿ ಕಚೇರಿಯು ಬುಧವಾರ (ಮಾ.26) ಅಮೆರಿಕ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ ಅವರಿಗೆ ಸಮನ್ಸ್ ನೀಡಿದೆ. ಇದೀಗ, ಕೇಜ್ರಿವಾಲ್ ಬಂಧನದ ಬಗ್ಗೆ ಮತ್ತೆ ಹೇಳಿಕೆ ನೀಡಿರುವ ಅಮೆರಿಕಾ, “ಕೇಜ್ರಿವಾಲ್ ಪ್ರಕರಣದಲ್ಲಿ ನ್ಯಾಯೋಚಿತ, ಪಾರದರ್ಶಕತೆ ಹಾಗೂ ಸಮಯಕ್ಕೆ ಸರಿಯಾದ ಕಾನೂನು ಪ್ರಕ್ರಿಯೆಯನ್ನು ನಡೆಸಬೇಕು” ಎಂದು ಪುನರುಚ್ಛರಿಸಿದೆ.

ಭಾರತವು ಅಮೆರಿಕ ರಾಯಭಾರಿ ಕಚೇರಿಗೆ ಸಮನ್ಸ್ ನೀಡಿದ ಬಗ್ಗೆ ಸುಮಾರು 40 ನಿಮಿಷಗಳ ಸಭೆ ನಡೆಸಿರುವುದಾಗಿ ಅಮೆರಿಕಾ ವಕ್ತಾರ ಮ್ಯಾಥ್ಯೂ ಅಲನ್ ಮಿಲ್ಲರ್ ತಿಳಿಸಿದ್ದಾರೆ. “ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಸೇರಿದಂತೆ ಇತರೆ ಪ್ರಕರಣಗಳ ಬಗ್ಗೆ ನಾವು ನಿರಂತರವಾಗಿ ಗಮನಹರಿಸುವುದನ್ನು ಮುಂದುವರಿಸುತ್ತೇವೆ” ಎಂದು ಹೇಳಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಿರುವ ವಿಚಾರದ ಬಗ್ಗೆಯೂ ಮಿಲ್ಲರ್ ಪ್ರತಿಕ್ರಿಯಿಸಿದ್ದಾರೆ. “ತೆರಿಗೆ ಅಧಿಕಾರಿಗಳು ಕಾಂಗ್ರೆಸ್‌ನ ಕೆಲವು ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಿದ್ದಾರೆ. ಇದರಿಂದಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪ್ರಚಾರಕ್ಕೆ ತೊಂದರೆಯಾಗಲಿದೆ ಎಂಬ ವಿಷಯಗಳನ್ನು ಕೂಡ ಗಮನಿಸಿದ್ದೇವೆ” ಎಂದು ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಕೇಜ್ರಿವಾಲ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅಮೆರಿಕ ರಾಯಭಾರಿಗೆ ಭಾರತ ಸಮನ್ಸ್

“ನಾವು ಯಾವುದೇ ಆಡಳಿತದ ಖಾಸಗಿ ವಿಚಾರದ ಬಗ್ಗೆ ಮಾತನಾಡುವುದಿಲ್ಲ. ಆದರೆ, ನಾವು ಈ ಎರಡು ವಿಚಾರದಲ್ಲಿ ನ್ಯಾಯೋಚಿತ ಹಾಗೂ ಪಾರದರ್ಶಕತೆ, ಸಮಯಕ್ಕೆ ಸರಿಯಾದ ಕಾನೂನು ಪ್ರಕ್ರಿಯೆಯನ್ನು ನಡೆಸುವಂತೆ ಒತ್ತಾಯಿಸುತ್ತೇವೆ. ಇದನ್ನು ಯಾರೂ ಕೂಡಾ ವಿರೋಧಿಸಬೇಕೆಂದು ನಮಗೆ ಅನಿಸುವುದಿಲ್ಲ” ಎಂದು ಮಿಲ್ಲರ್ ಒತ್ತಿ ಹೇಳಿದರು.

ಇದನ್ನು ಓದಿದ್ದೀರಾ?  ಕೇಜ್ರಿವಾಲ್ ಬಂಧನ | ಸತ್ಯಪಾಲ್ ಮಲಿಕ್ ಭವಿಷ್ಯ ನುಡಿದ ವಿಡಿಯೋ ವೈರಲ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದ್ದು ಇಡಿ ಕಸ್ಟಡಿ ಇಂದಿಗೆ (ಮಾರ್ಚ್ 28) ಕೊನೆಯಾಗಲಿದೆ. ಕೇಜ್ರಿವಾಲ್ ಇಂದು ಹೈಕೋರ್ಟ್‌ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ನೀಡಲಿದ್ದಾರೆ ಎಂದು ಪತ್ನಿ ಸುನಿತಾ ಕೇಜ್ರಿವಾಲ್ ತಿಳಿಸಿದ್ದಾರೆ.

ಇನ್ನು ಹಳೆಯ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯನ್ನು ಮರುಮೌಲ್ಯಮಾಪನ ಮಾಡುತ್ತಿರುವ ಆದಾಯ ತೆರಿಗೆ ಇಲಾಖೆಯು ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಫ್ರೀಝ್ ಮಾಡಿದೆ. ಈ ಮೂಲಕ ವಿಪಕ್ಷಗಳನ್ನು ಕೇಂದ್ರ ಸರ್ಕಾರವು ಆರ್ಥಿಕವಾಗಿ ದಿವಾಳಿ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X