ದೆಹಲಿ ಅಬಕಾರಿ ನೀತಿ ಪ್ರಕರಣ; ಕೇಜ್ರಿವಾಲ್‌ ಮತ್ತೆ 4 ದಿನ ಇಡಿ ವಶಕ್ಕೆ

Date:

Advertisements

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಯಲ್ಲಿದ್ದಾರೆ. ಕೇಜ್ರಿವಾಲ್‌ ಅವರನ್ನು ಇನ್ನೂ 4 ದಿನಗಳ ಕಾಲ ತನ್ನ ಕಸ್ಟಡಿಯಲ್ಲಿಟ್ಟುಕೊಳ್ಳಲು ಇಡಿಗೆ ರೋಸ್ ಅವೆನ್ಯೂ ಕೋರ್ಟ್ ಅನುಮತಿ ನೀಡಿದೆ. ಏಪ್ರಿಲ್ 1ರವರೆಗೆ ಕೇಜ್ರಿವಾಲ್ ಇಡಿ ವಶದಲ್ಲಿ ಇರಲಿದ್ದಾರೆ.

ಕೆಲವು ದಿನಗಳ ಹಿಂದೆ ಜಾರಿ ನಿರ್ದೇಶನಾಲಯದ ಸಮನ್ಸ್ಅನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಬಳಿಕ, ಇಡಿ ಅಧಿಕಾರಿಗಳು ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ.

ತನ್ನ ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಅರವಿಂದ್ ಕೇಜ್ರಿವಾಲ್ ಅಂದೇ ಆ ಅರ್ಜಿಯನ್ನು ಹಿಂಪಡೆದಿದ್ದರು. ಅದಾದ ಬಳಿಕ ರೋಸ್ ಅವೆನ್ಯೂ ಕೋರ್ಟ್​​ ದೆಹಲಿ ಮುಖ್ಯಮಂತ್ರಿಯನ್ನು ಒಂದು ವಾರ ಇಡಿ ಕಸ್ಟಡಿಗೆ ನೀಡಿತ್ತು. ಅದಾದ ಬಳಿಕ ಈಗ ಮತ್ತೆ ಈ ಅವಧಿಯನ್ನು ನಾಲ್ಕು ದಿನ ವಿಸ್ತರಿಸಲಾಗಿದೆ.

Advertisements

ಇದನ್ನು ಓದಿದ್ದೀರಾ?  ಅರವಿಂದ್ ಕೇಜ್ರಿವಾಲ್ ಮನೆಯಲ್ಲಿ ಇಡಿಗೆ ಸಿಕ್ಕಿದು ಬರೀ 70,000 ರೂಪಾಯಿ: ಎಎಪಿ

ಇನ್ನು, ಈ ನಡುವೆ ಕೇಜ್ರಿವಾಲ್ ತನ್ನ ಬಂಧನದ ವಿರುದ್ಧ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ತನಿಖಾ ಸಂಸ್ಥೆ ವರ್ತಿಸಿದ ರೀತಿ ನನ್ನ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ ಎಂದು ವಾದಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ನಿರಾಕರಿಸಿದ ಕೋರ್ಟ್ ಏಪ್ರಿಲ್ 2ರ ಒಳಗಾಗಿ ಉತ್ತರಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿಗೊಳಿಸಿದೆ. ಏಪ್ರಿಲ್ 3ರಂದು ದೆಹಲಿ ಹೈಕೋರ್ಟ್ ಈ ಅರ್ಜಿ ವಿಚಾರಣೆ ನಡೆಸಲಿದೆ.

ಇನ್ನು ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಕೇಜ್ರಿವಾಲ್ ಅವರನ್ನು ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗಲು ಅನುಮತಿ ನೀಡಲಾಗಿದ್ದು, ಕೇಜ್ರಿವಾಲ್ ಕೋರ್ಟ್‌ನಲ್ಲಿ ತನಿಖಾ ಸಂಸ್ಥೆ ತನ್ನ ಪಕ್ಷವನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?  ಕಾಂಗ್ರೆಸ್ ಬ್ಯಾಂಕ್ ಖಾತೆ ನಿರ್ಬಂಧ ಉಲ್ಲೇಖ; ಕೇಜ್ರಿವಾಲ್ ಬಂಧನದ ಬಗ್ಗೆ ಮತ್ತೆ ಹೇಳಿಕೆ ನೀಡಿದ ಅಮೆರಿಕಾ

ಇನ್ನು 100 ಕೋಟಿ ರೂಪಾಯಿ ಲಂಚ ಪಡೆದಿರುವ ಆರೋಪ ಮಾಡಲಾಗಿದೆ. ಆದರೆ ಅದರಲ್ಲಿ ಕೊಂಚ ಮೊತ್ತವೂ ಕೂಡಾ ಇಡಿ ವಶಕ್ಕೆ ಸಿಕ್ಕಿಲ್ಲ. ಯಾವ ನ್ಯಾಯಾಲಯವೂ ಅರವಿಂದ್ ಕೇಜ್ರಿವಾಲ್ ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿಲ್ಲ ಎಂದು ಎಎಪಿ ಹೇಳಿದೆ.

“ನಾನು ಬಂಧಿತನಾಗಿದ್ದೇನೆ, ಆದರೆ ಯಾವ ನ್ಯಾಯಾಲಯವೂ ಕೂಡಾ ನನ್ನನ್ನು ತಪ್ಪಿತಸ್ಥ ಎಂದು ಸಾಬೀತುಪಡಿಸಿಲ್ಲ. ಸಿಬಿಐ 31,000 ಪುಟಗಳ ಚಾರ್ಚ್‌ಶೀಟ್ ಸಲ್ಲಿಸಿದೆ. ಇಡಿ 25,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದೆ. ನೀವು ಎರಡನ್ನೂ ಜೊತೆಯಾಗಿ ಓದಿದರೂ ನಿಮಗೆ ಕೆಲವು ಪ್ರಶ್ನೆಗಳು ಬರುತಜಾರಿ ನಿರ್ದೇಶನಾಲಯ್ತದೆ. ನಾನು ಯಾಕೆ ಬಂಧನಕ್ಕೊಳಗಾದೆ ಎಂಬ ಪ್ರಶ್ನೆ ಬರುತ್ತದೆ” ಎಂದು ಕೋರ್ಟ್‌ ಮುಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X