ಐಪಿಎಲ್ 2023 | ಡೆಲ್ಲಿ ತಂಡದ ಆಟಗಾರರ ದುಬಾರಿ ವಸ್ತುಗಳು, ಬ್ಯಾಟ್ ನಾಪತ್ತೆ

Date:

Advertisements
  • ದೆಹಲಿ ತಂಡದ ಆಟಗಾರರ ಅಮೂಲ್ಯ ವಸ್ತುಗಳು, ಬ್ಯಾಟ್ ನಾಪತ್ತೆ
  • ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಆರ್‌ಸಿಬಿ ಪಂದ್ಯದ ನಂತರ ಲಗೇಜ್ ಸಮಸ್ಯೆ

ಐಪಿಎಲ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರ ಲಕ್ಷಾಂತರ ಮೌಲ್ಯದ ವಸ್ತುಗಳು ಮತ್ತು ಬ್ಯಾಟ್ ನಾಪತ್ತೆ ಆಗಿರುವ ಅಥವಾ ಕಳ್ಳತನವಾಗಿರುವ ಆಘಾತಕಾರಿ ಘಟನೆ ಬುಧವಾರ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಆರ್‌ಸಿಬಿ ನಡುವೆ ಪಂದ್ಯ ನಡೆದಿತ್ತು. ಇದಾದ ಬಳಿಕ ಕ್ಯಾಪಿಟಲ್ಸ್ ತಂಡದ ಆಟಗಾರರು ವಿಮಾನದಲ್ಲಿ ದೆಹಲಿಗೆ ಮರಳಿದ್ದರು.

ಆಟಗಾರರ ಬ್ಯಾಟ್ ಮತ್ತು ಇತರ ವಸ್ತುಗಳನ್ನು ಒಳಗೊಂಡಿದ್ದ ಲಗೇಜ್ ಒಂದು ದಿನದ ಬಳಿಕ ಕಾರ್ಗೋ ವಿಮಾನದಲ್ಲಿ ಬೆಂಗಳೂರಿನಿಂದ ದೆಹಲಿ ವಿಮಾನ ನಿಲ್ದಾಣ ತಲುಪಿತ್ತು. ಆಗಲೇ ವಸ್ತುಗಳು ಮತ್ತು ಬ್ಯಾಟ್ ನಾಪತ್ತೆ ಆಗಿರುವುದು ಅರಿವಾಗಿದೆ.

Advertisements

ಆಟಗಾರರ ಬ್ಯಾಗ್‌ನಲ್ಲಿದ್ದ ಬ್ಯಾಟ್‌, ಪ್ಯಾಡ್‌, ಶೂ, ಥೈ ಪ್ಯಾಡ್‌ (ತೊಡೆಯ ಭಾಗಕ್ಕೆ ಕಟ್ಟುವ ಪ್ಯಾಡ್‌) ಗ್ಲೌಸ್ ಸೇರಿದಂತೆ ಕಿಟ್‌ ಬ್ಯಾಗ್‌ನ ಒಳಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಕಾಣೆಯಾಗಿದ್ದವು.

ಯುವ ಆಟಗಾರ ಯಶ್ ಧುಲ್’ಗೆ ಸೇರಿದ 5, ನಾಯಕ ಡೇವಿಡ್ ವಾರ್ನರ್ ಮತ್ತು ಫಿಲ್ ಸಾಲ್ಟ್ ಅವರ 3 ಬ್ಯಾಟ್‌ಗಳು ಸೇರಿದಂತೆ ಒಟ್ಟು 16 ಬ್ಯಾಟ್‌ಗಳು ಕಾಣೆಯಾಗಿವೆ. ವಿದೇಶಿ ಆಟಗಾರರ 1 ಲಕ್ಷ ಮೌಲ್ಯದ ಬ್ಯಾಟ್‌ಗಳು ಕಳ್ಳತನವಾಗಿವೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಜೈಪುರದಲ್ಲಿ ‘ಸೂಪರ್’ ಸವಾಲಿಗೆ ಸಜ್ಜಾದ ರಾಜಸ್ಥಾನ ರಾಯಲ್ಸ್

ಬ್ಯಾಟ್ ಸೇರಿದಂತೆ ಬೆಲೆಬಾಳುವ ವಸ್ತುಗಳು ಕಾಣೆಯಾದ ವಿಚಾರವನ್ನು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮತ್ತು ಪೊಲೀಸ್ ಗಮನಕ್ಕೆ ತರಲಾಗಿದೆ ಎಂದು ತಂಡದ ಆಡಳಿತ ಮಂಡಳಿ ತಿಳಿಸಿದೆ.

ಐಪಿಎಲ್ 16ನೇ ಆವೃತ್ತಿಯಲ್ಲಿ ಸತತ ಐದು ಪಂದ್ಯಗಳ ಸೋಲಿನಿಂದ ಕಂಗೆಟ್ಟಿರುವ ಡೇವಿಡ್ ವಾರ್ನರ್ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್‌, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಏಪ್ರಿಲ್‌ 20, ಗುರುವಾರದಂದು ತವರು ಮೈದಾನ ಅರುಣ್‌ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯದಲ್ಲಿ ವಾರ್ನರ್ ಪಡೆ, ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವನ್ನು ಎದುರಿಸಲಿದೆ.

ಪ್ಲೇ ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಮುಂದಿನ ಎಲ್ಲಾ ಪಂದ್ಯಗಳಲ್ಲೂ
ಗೆಲುವಿನ ದಾರಿ ಹಿಡಿಯುವುದು ಅತ್ಯಗತ್ಯ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X