ತೆಲಂಗಾಣ | ಬಿಆರ್‌ಎಸ್ ಟಿಕೆಟ್ ಸಿಕ್ಕರೂ ಸ್ಪರ್ಧಿಸದ ಹಾಲಿ ಸಂಸದೆ, ಕಾಂಗ್ರೆಸ್‌ನತ್ತ ಕಡಿಯಂ ಕಾವ್ಯ

Date:

Advertisements

ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಬೆನ್ನಲ್ಲೆ ತೆಲಂಗಾಣದ ವಿಪಕ್ಷ ಭಾರತೀಯ ರಾಷ್ಟ್ರ ಸಮಿತಿಗೆ ಸಂಕಷ್ಟ ಎದುರಾಗಿದೆ. ವಾರಂಗಲ್‌ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೊಬ್ಬರು ಬಿಆರ್‌ಎಸ್‌ ನಿಂದ ಟಿಕೆಟ್ ಸಿಕ್ಕರೂ ತಾವು ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಸ್ಟೇಷನ್‌ ಗಾನ್‌ಪುರ್‌ ಕ್ಷೇತ್ರದ ಶಾಸಕ ಕಡಿಯಂ ಶ್ರೀಹರಿ ಅವರ ಪುತ್ರಿಯಾದ ಡಾ. ಕಾವ್ಯ ಕಡಿಯಂ ಬಿಆರ್‌ಎಸ್‌ ಅಧ್ಯಕ್ಷ ಕೆ ಚಂದ್ರಶೇಖರ್‌ ರಾವ್‌ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ಪತ್ರದಲ್ಲಿ ಡಾ. ಕಾವ್ಯ ಅವರು, ಭ್ರಷ್ಟಾಚಾರ, ಭೂ ಒತ್ತುವರಿ ಅಕ್ರಮಗಳು, ಫೋನ್‌ ಟ್ಯಾಪಿಂಗ್ ಹಾಗೂ ಅಬಕಾರಿ ಹಗರಣಗಳ ಬಗ್ಗೆ ಇತ್ತೀಚಿಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಪಕ್ಷಕ್ಕೆ ಕಳಂಕ ಉಂಟಾಗಿದೆ. ಅಲ್ಲದೆ ನಾಯಕರ ನಡುವೆ ಸಹಕಾರ ಹಾಗೂ ಸಮನ್ವಯದ ಕೊರತೆ ಇಲ್ಲದಿರುವುದು ಕೂಡ ಕಾಣಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೌರತ್ವ ಪ್ರಮಾಣಪತ್ರ ಪೂಜಾರಿ ಕೊಡುವುದಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ?

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ನಾನು ಚುನಾವಣಾ ಕಣದಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ.ನಾನು ಪಕ್ಷದ ಮುಖ್ಯಸ್ಥ ಕೆಸಿಆರ್ ಹಾಗೂ ಮುಖಂಡರುಗಳಿಗೆ ಕ್ಷಮಿಸುವಂತೆ ಕೇಳಿಕೊಳ್ಳುತ್ತೇನೆ. ವಾರಂಗಲ್‌ನ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಲು ಆಯ್ಕೆ ಮಾಡಿದ್ದಕ್ಕಾಗಿ ನಾಯಕರುಗಳಿಗೆ ನಾನು ಧನ್ಯವಾದ ತಿಳಿಸುತ್ತೇನೆ” ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಡಾ. ಕಾವ್ಯ ಕಡಿಯಂ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಅಲ್ಲಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿಗಷ್ಟೆ ಪಕ್ಷ ಬಿಡುವುದಾಗಿ ಘೋಷಿಸಿ ಮಾ.31 ರಂದು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿರುವ ಬಿಆರ್‌ಎಸ್‌ನ ಪ್ರಮುಖ ನಾಯಕರಾದ ಕೆ ಕೇಶವ ರಾವ್‌ ಹಾಗೂ ಅವರ ಪುತ್ರಿ ಜಿಹೆಚ್‌ಎಂಸಿ ಮೇಯರ್ ಗಡ್ವಾಲ್ ವಿಜಯಲಕ್ಷ್ಮಿ ಬೆಳವಣಿಗೆಯ ನಂತರ ಡಾ. ಕಾವ್ಯ ಅವರು ಬಿಆರ್‌ಎಸ್‌ ತೊರೆದಿರುವುದು ಪಕ್ಷಕ್ಕೆ ಮತ್ತಷ್ಟು ಮುಜುಗರವುಂಟಾಗಿದೆ.

ಕಾವ್ಯ ಕಡಿಯಂ ಪಕ್ಷ ಬಿಡುವ ಬಗ್ಗೆ ಬಿಆಎರ್‌ಎಸ್‌ ನಾಯಕರುಗಳು ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ನಿಡಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X