ಚಿತ್ರದುರ್ಗ | ನೀರಾವರಿ ಸಂಪರ್ಕ ಕಲ್ಪಿಸದಿದ್ದರೆ ಚುನಾವಣೆ ಬಹಿಷ್ಕಾರ; ಭರಮಗಿರಿ ಕೆರೆಯಾಶ್ರಿತ ಜನರ ಎಚ್ಚರಿಕೆ

Date:

Advertisements

ಚಿತ್ರದುರ್ಗದ ಭರಮಗಿರಿಯ ಸುತ್ತಮುತ್ತಲಿನ 11 ಹಳ್ಳಿಗಳ ಜನ ಕಳೆದ ಆರು ದಿನಗಳಿಂದ ನೀರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ನೀರಾವರಿ ಸಂಪರ್ಕ ಒದಗಿಸದಿದ್ದಾರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆಯನ್ನೂ ನೀಡಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ನೀರಾವರಿ ಹೋರಾಟಗಾರ ಕಸವನಹಳ್ಳಿ ರಮೇಶ್ ಮಾತನಾಡಿ, ನಿಮ್ಮ ಹೋರಾಟ ನ್ಯಾಯಯುತವಾಗಿದೆ. ವಾಣಿವಿಲಾಸ ಸಾಗರ ಜಲಾಶಯದಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಭರಮಗಿರಿ ಕೆರೆಗೆ ನೀರಾವರಿ ಕಲ್ಪಿಸದೇ, ಅನ್ಯಾಯವಾಗಿದೆ ಎಂದರು.

ಇದರ ಹಿಂದಿನ ವಿಚಾರಗಳನ್ನು ಕೆದಕದೆ ಆಗಬೇಕಾದ ಕೆಲಸಗಳ ಕಡೆ ಗಮನಕೊಡಬೇಕು. ಆದ್ದರಿಂದ ಈ ಭಾಗದ 11 ಹಳ್ಳಿಗಳ ಜನರ ಕುಡಿಯುವ ನೀರಿನ ಬವಣೆ ಜಾನುವಾರಗಳ ನೀರು ಮತ್ತು ಮೇವಿನ ಸಮಸ್ಯೆ. ಅಲ್ಲದೆ ಪ್ರಮುಖ ವೃತ್ತಿಯಾದ ವ್ಯವಸಾಯಕ್ಕೆ ನೀರಿಲ್ಲದೆ ಈ ಭಾಗದ ಜನ ಪರಿತಪಿಸುತ್ತಿದ್ದಾರೆ. ಹತ್ತಿರದಲ್ಲೇ ಜಲಾಶಯ ಇದೆ ಎಂದು ನಂಬಿಕೊಂಡು ಪ್ರತಿಯೊಬ್ಬ ರೈತರು ನಿರಂತರ ಕೃಷಿ ಮಾಡುತ್ತಾ ಅಡಿಕೆ ತೆಂಗು ಬಾಳೆ ಇತ್ಯಾದಿಗಳನ್ನು ಬೆಳೆಯುತ್ತಿದ್ದಾರೆ ಎಂದು ತಿಳಿಸಿದರು.

Advertisements

ಆದರೆ, ಈಗ ಏಕಾಏಕಿ ಕೊಳವೆ ಬಾವಿಗಳಲ್ಲಿ ಅಂತರ್ಜಲ ಬತ್ತಿ ಹೋಗುತ್ತಿದೆ ಆದ್ದರಿಂದ ತುರ್ತಾಗಿ ಸರ್ಕಾರ ನೀರು ಹರಿಸುವ ಮೂಲಕ ಇಚ್ಛಾಶಕ್ತಿ ಪ್ರದರ್ಶಿಸಬೇಕೆಂದು ಒತ್ತಾಯಿಸುತ್ತೇವೆ. ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ಕಸವನಹಳ್ಳಿ ರಮೇಶ್ ಹೇಳಿದರು.

ಹೋರಾಟದ ನೇತೃತ್ವವನ್ನು ಶ್ರೀಮತಿ ಗಂಗಮ್ಮ ಉಮೇಶ್ ಶ್ರೀಮತಿ ಕವಿತಾ, ಕೆಂಚಪ್ಪ, ಮೂರ್ತಿ, ಮೂಡ್ಲಪ್ಪ, ಓಂಕಾರಪ್ಪ, ರಮೇಶ್, ಲೋಕೇಶ್, ವಂದೇ ಮಾತರಂ ವೇದಿಕೆಯ ದೇವರಾಜ್ ನಾಗಣ್ಣ, ಎಸ್‌.ಕೆ. ರಘು, ರಾಮಚಂದ್ರ ಕಸವನಹಳ್ಳಿ ಇತರ ಹಳ್ಳಿಗಳ ಗ್ರಾಮಸ್ಥರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X