ಹಾಸನ | ಪ್ರೀತಂಗೌಡ ಪತ್ನಿಯಿಂದ ಎರಡೆರಡು ನಾಮಪತ್ರ ಸಲ್ಲಿಕೆ

Date:

Advertisements

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪ್ರೀತಂ ಗೌಡ ಅವರ ಪತ್ನಿ ಕಾವ್ಯ ಅವರು ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಎರಡೆರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.‌ ಈ ಹಿನ್ನೆಲೆಯಲ್ಲಿ ಶಾಸಕ ಪ್ರೀತಂ ಗೌಡ ಚುನಾವಣೆ ಕಣದಿಂದ ಹಿಂದೆ ಸರಿಯುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ ಜೆಡಿಎಸ್‌ನ ಆಂತರಿಕ ಭಿನ್ನಾಭಿಪ್ರಾಯಗಳ ಕಾರಣದಿಂದ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿತ್ತು. ಬಳಿಕ ಸ್ವರೂಪ್‌ಗೆ ಟಿಕೆಟ್‌ ಸಿಗುವ ಮೂಲಕ ಸುಖಾಂತ್ಯ ಕಂಡಿದೆ. ಭವಾನಿ ರೇವಣ್ಣ ಅವರೂ ಕೂಡ ಸ್ವರೂಪ್‌ಗೆ ಸಾಥ್‌ ನೀಡಿದ್ದು, ಸ್ವರೂಪ್‌ ನನ್ನ ಮಗನಿದ್ದಂತೆ ಎಂದು ಹೇಳಿದ್ದಾರೆ.

ಜೆಡಿಎಸ್‌ ವಿಷಯ ತಣ್ಣಗಾಗುತ್ತಲೇ, ಪ್ರೀತಂ ಗೌಡ ಅವರ ಪತ್ನಿ ಕಾವ್ಯ ಅವರು ನಾಮಪತ್ರ ಸಲ್ಲಿಕೆ ಮಾಡಿರುವುದು ಇನ್ನೊಂದು ರೀತಿಯ ಸದ್ದನ್ನು ಉಂಟುಮಾಡುತ್ತಿದೆ.

Advertisements

ಈ ಸುದ್ದಿ ಓದಿದ್ದೀರಾ? ಜೆಡಿಎಸ್ ಉಮೇದುವಾರರ 3ನೇ ಪಟ್ಟಿ ಬಿಡುಗಡೆ : ಅನಿಲ್ ಲಾಡ್, ಆಯನೂರು, ಸಂತೋಷ್‌ಗೂ ಟಿಕೆಟ್

ಜೆಡಿಎಸ್‌ ಮತ್ತು ಬಿಜೆಪಿ ನಡುವಿನ ಪ್ರಬಲ ಪೈಪೋಟಿ ನಡುವೆ ಕಾಂಗ್ರೆಸ್‌ನಿಂದ ಬನವಾಸೆ ರಂಗಸ್ವಾಮಿ ಕಣಕ್ಕಿಳಿದಿದ್ದಾರೆ. ಹಾಸನದಲ್ಲಿ ಕಾಂಗ್ರೆಸ್‌ ಕಣ್ಮರೆಯಾಯಿತು ಎನ್ನುವ ಹಿಂದೆಯೇ ಬನವಾಸೆ ರಂಗಸ್ವಾಮಿ ಅವರು ಕಾಂಗ್ರೆಸ್‌ನ ಸ್ಥಳೀಯ ನಾಯಕರನ್ನು ಒಟ್ಟುಗೂಡಿಸಿಕೊಂಡು ನಾಮಪತ್ರ ಸಲ್ಲಿಸಿದ್ದಾರೆ.

ಹಾಸನದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಅಭ್ಯರ್ಥಿಗಳ ಪ್ರಚಾರ ಭರಾಟೆ ಜೋರಾಗಿದೆ. ಈ ನಡುವೆ ಪ್ರೀತಂ ಪತ್ನಿ ಕಾವ್ಯ ಎರಡೆರಡು ನಾಮಪತ್ರ ಸಲ್ಲಿಸಿ ಸಂಚಲನವನ್ನುಂಟು ಮಾಡಿದ್ದಾರೆ.  

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X