ಪಂಚಮಸಾಲಿ ಸಮುದಾಯ ಬಿಎಸ್‌ವೈ ಜೊತೆಗಿಲ್ಲ, ಅವರ ನಾಯಕತ್ವ ನಾವು ಒಪ್ಪಲ್ಲ: ಯತ್ನಾಳ್‌ ಕಿಡಿ

Date:

Advertisements

ಬಿ ಎಸ್​ ಯಡಿಯೂರಪ್ಪ ಬಿಟ್ಟರೆ ಬಿಜೆಪಿ ಮುಳುಗಿ ಹೋಗುತ್ತೆ ಎಂದುಕೊಂಡಿರಬಹುದು. ನಾವಂತೂ ಯಡಿಯೂರಪ್ಪ ನಾಯಕತ್ವ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತೆ ಬಿಎಸ್‌ವೈ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ.

ವಿಜಯಪುರ ತಾಲೂಕಿನ ತೊರವಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಲೋಕಸಭೆ ಚುನಾವಣೆ ಬಳಿಕ ಬಹಳ ದೊಡ್ಡ ಬದಲಾವಣೆಯಾಗುತ್ತದೆ. ಬದಲಾವಣೆಯಾಗಬೇಕೆಂಬ ಕೂಗು ಕರ್ನಾಟಕ ಬಿಜೆಪಿಯಲ್ಲಿ ಏಳುತ್ತೆ. ನಾಯಕರು, ಕಾರ್ಯಕರ್ತರ ಜತೆ ನಡೆದುಕೊಂಡ ರೀತಿ ಸರಿಯಿಲ್ಲ” ಎಂದರು.

“ಮೊದಲಿನಿಂದಲೂ ಬಿ ಎಸ್ ಯಡಿಯೂರಪ್ಪ ಜೊತೆಗೆ ಯಾವ ಸಮುದಾಯಗಳು ಇಲ್ಲ. ಪ್ರಮುಖವಾಗಿ ನಮ್ಮ ಪಂಚಮಸಾಲಿ ಸಮುದಾಯ ಜೊತೆಗಿಲ್ಲ. ನಮ್ಮ ಸಮುದಾಯಕ್ಕೆ ಬಿ ಎಸ್ ಯಡಿಯೂರಪ್ಪ ಮೋಸ ಮಾಡಿದ್ದಾರೆ. ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಅಡ್ಡಿ ಮಾಡಿದ್ದಾರೆ” ಎಂದು ಆರೋಪಿಸಿದರು.

Advertisements

“ಟಿಕೆಟ್ ಹಂಚಿಕೆಯಲ್ಲಿ ಭಿನ್ನಮತ ಅವರಿಂದಲೇ ಆಗುತ್ತಿದೆ. ತುಮಕೂರಿನಲ್ಲಿ ಬಿ.ಎಸ್​.ಯಡಿಯೂರಪ್ಪ ಶಿಷ್ಯ ಜೆ ಸಿ ಮಾಧುಸ್ವಾಮಿ. ಯಡಿಯೂರಪ್ಪ ಕೆಜೆಪಿ ಮಾಡಿದಾಗ ಚಂದ್ರಪ್ಪ ರಾಜೀನಾಮೆ ನೀಡಿ ಹೋಗಿದ್ದರು. ಈಗ ಅವರನ್ನು ಕರೆದು ಮಾತನಾಡಿಸದೆ ಟಿಕೆಟ್ ಘೋಷಣೆ ಮಾಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಸವಣ್ಣ, ಕುವೆಂಪು, ಶರೀಫರು ನಡೆದಾಡಿದ ಈ ನೆಲಕ್ಕೆ ಯೋಗಿ ಮಾದರಿಯ ಆಡಳಿತ ಬೇಕೇ ಭೈರಪ್ಪನವರೇ?

“ಚಿತ್ರದುರ್ಗದಲ್ಲಿ ಕಾರಜೋಳಗೆ ಕೊಡದಿದ್ದರೆ ಪ್ರಚಾರ ಮಾಡಲ್ಲ ಎಂದಿದ್ದಾರೆ. ಹೀಗಾಗಿ ಯಡಿಯೂರಪ್ಪ ಬ್ಲಾಕ್​ಮೇಲ್ ಮಾಡಿ ಕಾರಜೋಳಗೆ ಟಿಕೆಟ್ ಕೊಡಿಸಿದ್ದಾರೆ. ಈ ವಿಚಾರವನ್ನು ಶಾಸಕ ಚಂದ್ರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ರೇಣುಕಾಚಾರ್ಯ ಇದೇ ಯಡಿಯೂರಪ್ಪ ಶಿಷ್ಯ. ನನಗೂ ಬೇರೆ ಜಿಲ್ಲೆಗೆ ಹೋಗಿ ಲೋಕಸಭೆಗೆ ನಿಲ್ಲುವಂತೆ ಸೂಚಿಸಿದ್ದರು. ನಾವು ಬೇರೆ ಜಿಲ್ಲೆಗೆ ಹೋಗಿ ಅಲ್ಲಿಯ ಕಾರ್ಯಕರ್ತರಿಗೆ ತೊಂದರೆ ಕೊಡಬಾರದು” ಎಂದು ಮಾರ್ಮಿಕವಾಗಿ ಹೇಳಿದರು.

“ಶೆಟ್ಟರ್ ಬಲಿಕೊಡ್ತಾರೋ, ಹೆಬ್ಬಾಳ್ಕರ್ ಜತೆ ಒಳ ಒಪ್ಪಂದವಿದೆಯೋ ಗೊತ್ತಿಲ್ಲ. ಸಚಿವೆ ಹೆಬ್ಬಾಳ್ಕರ್​ಗೆ ಅನುಕೂಲ ಆಗುವಂತಹ ಕುತಂತ್ರವಿರಬಹುದು. ಇದನ್ನೆಲ್ಲ ಮಾಡುತ್ತಿರುವವರು ಅದೇ ಅಪ್ಪ ಮಕ್ಕಳು. ಅಪ್ಪ ಮಕ್ಕಳಿಗೆ ಕಳಕಳಿ ಇದ್ದರೆ ಕೆ.ಎಸ್.ಈಶ್ವರಪ್ಪಗೆ ಟಿಕೆಟ್​ ಕೊಡಬೇಕಿತ್ತು” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X