ಕಾಂಗ್ರೆಸ್‌ಗೆ ನೀಡಿರುವ ಐಟಿ ನೋಟಿಸ್‌ ಎಲ್ಲ ವಿಪಕ್ಷಗಳಿಗೆ ಎಚ್ಚರಿಕೆ ಸಂದೇಶ: ಪಿ ಚಿದಂಬರಂ

Date:

Advertisements

“ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ಗೆ ನೀಡಿರುವ ಐಟಿ ನೋಟಿಸ್, ಎಲ್ಲ ವಿಪಕ್ಷಗಳಿಗೆ ಮತ್ತು ದೇಶದ ಜನರಿಗೆ ಎಚ್ಚರಿಕೆ ಸಂದೇಶವಾಗಿದೆ” ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ ಹೇಳಿದರು.

ತಮಿಳುನಾಡಿನ ಪುದುಕೊಟ್ಟೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆಯು 135 ಕೋಟಿ ರೂಪಾಯಿಗಳ ಐಟಿ ನೋಟಿಸ್ ಅನ್ನು ನೀಡಲಾಗಿದ್ದು, ಬಿಜೆಪಿಯು ವಿಪಕ್ಷಗಳನ್ನು ನಾಶ ಮಾಡಲು ಉದ್ದೇಶ ಹೊಂದಿದೆ” ಎಂದು ದೂರಿದರು.

“ಬಿಜೆಪಿಯು ಚುನಾವಣಾ ಬಾಂಡ್‌ಗಳ ಮೂಲಕ ಸುಮಾರು 8,250 ಕೋಟಿ ರೂಪಾಯಿಯನ್ನು ಪಡೆದುಕೊಂಡಿದೆ. ಆದರೆ ಬಿಜೆಪಿ ಸರ್ಕಾರವು ಕಾಂಗ್ರೆಸ್‌ ಮೇಲೆ 135 ಕೋಟಿ ರೂಪಾಯಿಯ ದಂಡವನ್ನು ವಿಧಿಸಿದೆ. ಇದು ಎಲ್ಲ ರಾಜಕೀಯ ಪಕ್ಷಗಳು ಮತ್ತು ಜನರಿಗೆ ಬಿಜೆಪಿಯು ಎಲ್ಲ ವಿಪಕ್ಷಗಳನ್ನು ನಾಶ ಮಾಡಲು ಬಯಸುತ್ತದೆ ಎಂಬ ಎಚ್ಚರಿಕೆಯಾಗಿದೆ” ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ?  ಕಾಂಗ್ರೆಸ್ ಬ್ಯಾಂಕ್ ಖಾತೆ ನಿರ್ಬಂಧ ಉಲ್ಲೇಖ; ಕೇಜ್ರಿವಾಲ್ ಬಂಧನದ ಬಗ್ಗೆ ಮತ್ತೆ ಹೇಳಿಕೆ ನೀಡಿದ ಅಮೆರಿಕಾ

“ಈ ದೇಶದಲ್ಲಿ ಬಿಜೆಪಿ ಮಾತ್ರ ಇರಬೇಕು ಎಂಬುವುದು ಅದರ ನಾಯಕರ ಬಯಕೆ. ಇದುವೇ ‘ಒಂದು ದೇಶ, ಒಂದು ಚುನಾವಣೆ’ ಎಂಬ ಅಜೆಂಡಾದ ಭಾಗವಾಗಿದೆ. ಇತ್ತು ಮತ್ತೇನಲ್ಲ ‘ಒಂದು ದೇಶ, ಒಂದು ಪಕ್ಷ’ ಆಗಿದೆ. ಇದು ಎಲ್ಲರಿಗೂ ನೀಡಲಾಗಿರುವ ಎಚ್ಚರಿಕೆ. ಜನರಿಗೆ ಇದು ಅರ್ಥವಾಗಲಿದೆ” ಎಂದು ಹಿರಿಯ ಕಾಂಗ್ರೆಸ್ ನಾಯಕ ಅಭಿಪ್ರಾಯಿಸಿದರು.

ಈ ನಡುವೆ ಶುಕ್ರವಾರ ಕಾಂಗ್ರೆಸ್‌ಗೆ ಮತ್ತೊಂದು ಆದಾಯ ತೆರಿಗೆ ನೋಟಿಸ್ ಅನ್ನು ನೀಡಲಾಗಿದೆ. ಬರೋಬ್ಬರಿ 1,823.08 ಕೋಟಿ ರೂಪಾಯಿ ದಂಡವನ್ನು ಪಾವತಿಸುವಂತೆ ಕಾಂಗ್ರೆಸ್‌ಗೆ ಐಟಿ ಇಲಾಖೆ ತಿಳಿಸಿದೆ. ಇದಕ್ಕೂ ಮುನ್ನ ಕಾಂಗ್ರೆಸ್‌ನ ಬ್ಯಾಂಕ್‌ ಖಾತೆಗಳನ್ನ ಸೀಝ್ ಮಾಡಲಾಗಿದೆ. “ಲೋಕಸಭೆ ಚುನಾವಣೆ ಸಂದರ್ಭದಲ್ಲಿ ವಿಪಕ್ಷಗಳು ಆರ್ಥಿಕವಾಗಿ ಕುಗ್ಗಿಸಲು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಹುನ್ನಾರ ಇದಾಗಿದೆ” ಎಂದು ಕಾಂಗ್ರೆಸ್ ನಾಯಕರುಗಳು ಆರೋಪಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆ ಬಂದ್ ಮಾಡಿರುವುದನ್ನು ಯುಎಸ್‌ ವಕ್ತಾರರು ಕೂಡಾ ಪ್ರಸ್ತಾಪಿಸಿದ್ದು, “ಈ ಪ್ರಕರಣದ ಬೆಳವಣಿಗೆ ಬಗ್ಗೆ ಗಮನಹರಿಸುತ್ತೇವೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X