ದೆಹಲಿಗೆ ರಾಜ್ಯತ್ವ, ಉಚಿತ ವಿದ್ಯುತ್; ಕೇಜ್ರಿವಾಲ್‌ರ ಆರು ಚುನಾವಣಾ ಭರವಸೆಗಳಿವು

Date:

Advertisements

ದೆಹಲಿಗೆ ರಾಜ್ಯತ್ವ, ದೇಶದ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ರಕ್ಷಣೆ ಸೇರಿದಂತೆ ಆರು ಚುನಾವಣಾ ಭರವಸೆಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಘೋಷಿಸಿದ್ದಾರೆ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ತಿಳಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ರ‍್ಯಾಲಿಯಲ್ಲಿ ಈ ಘೋಷಣೆ ಮಾಡಲಾಗಿದೆ.

“ಲೋಕತಂತ್ರ ಬಚಾವೋ” ಅಥವಾ ‘ಪ್ರಜಾಪ್ರಭುತ್ವ ಉಳಿಸಿ’ ಎಂಬ ರ‍್ಯಾಲಿಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಫಾರೂಕ್ ಅಬ್ದುಲ್ಲಾ ಸೇರಿದಂತೆ ಪ್ರಮುಖ ವಿರೋಧ ಪಕ್ಷದ ನಾಯಕರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಸುನೀತಾ ಕೇಜ್ರಿವಾಲ್ ಅವರು ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ತನ್ನ ಪತಿಯಿಂದ ಪತ್ರವನ್ನು ಓದಿದರು.

ದೆಹಲಿ ಕೇಜ್ರಿವಾಲ್‌ರ ಆರು ಚುನಾವಣಾ ಭರವಸೆಗಳಿವು

Advertisements

1. ದೇಶದಾದ್ಯಂತ 24 ಗಂಟೆ ವಿದ್ಯುತ್
2. ದೇಶದಾದ್ಯಂತ ಬಡವರಿಗೆ ಉಚಿತ ವಿದ್ಯುತ್
3. ಪ್ರತಿ ಗ್ರಾಮದಲ್ಲಿ ಅತ್ಯುತ್ತಮ ಸರ್ಕಾರಿ ಶಾಲೆಗಳನ್ನು ನಿರ್ಮಿಸುವುದು
4. ಪ್ರತಿ ಗ್ರಾಮದಲ್ಲಿ ಕ್ಲಿನಿಕ್‌ಗಳನ್ನು ಸ್ಥಾಪಿಸುವುದು
5. ಸ್ವಾಮಿನಾಥನ್ ಆಯೋಗದ ವರದಿಯಲ್ಲಿ ನೀಡಲಾಗಿರುವ ಬೆಳೆಗಳಿಗೆ ನ್ಯಾಯಯುತ ಬೆಲೆಯನ್ನು ರೈತರಿಗೆ ನೀಡುವುದು
6. ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ನೀಡುವುದು.

ಇದನ್ನು ಓದಿದ್ದೀರಾ? ನಿರಂಕುಶಾಧಿಕಾರದತ್ತ ಸಾಗುತ್ತಿದೆ ಭಾರತ; ‘ಇಂಡಿಯಾ’ ಮೈತ್ರಿಕೂಟದ ರ್‍ಯಾಲಿಯಲ್ಲಿ ಉದ್ಧವ್ ಠಾಕ್ರೆ

“ನನ್ನ ಪ್ರೀತಿಯ ಭಾರತೀಯರೇ, ನಿಮಗೆಲ್ಲರಿಗೂ ನಿಮ್ಮ ಈ ಮಗನ ಶುಭಾಶಯಗಳು. ನಾನು ಮತ ಕೇಳುತ್ತಿಲ್ಲ, ಚುನಾವಣೆಯಲ್ಲಿ ಗೆಲ್ಲಲು ಯಾರನ್ನೂ ಸೋಲಿಸುವ ಬಗ್ಗೆ ಮಾತನಾಡುವುದಿಲ್ಲ. ನಾನು ಭಾರತವನ್ನು ನವ ಭಾರತ ಮಾಡುವ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಜೈಲಿನಲ್ಲಿದ್ದೇನೆ, ಇಲ್ಲಿ ನನಗೆ ಯೋಚಿಸಲು ಸಾಕಷ್ಟು ಸಮಯ ಸಿಗುತ್ತದೆ. ಭಾರತಮಾತೆಯ ಬಗ್ಗೆ ಯೋಚಿಸುತ್ತೇನೆ, ಜನರಿಗೆ ಉತ್ತಮ ಶಿಕ್ಷಣ ಸಿಗದಿದ್ದಾಗ, ಸರಿಯಾದ ಚಿಕಿತ್ಸೆ ಇಲ್ಲದಾಗ, ವಿದ್ಯುತ್ ಕಡಿತ ಸಂಭವಿಸಿದಾಗ, ರಸ್ತೆಗಳು ಹಾಳಾದಾಗ ನಮ್ಮ ಭಾರತಮಾತೆಗೆ ನೋವಾಗುತ್ತದೆ” ಎಂದು ಕೇಜ್ರಿವಾಲ್ ಪತ್ರದಲ್ಲಿ ತಿಳಿಸಿದ್ದಾರೆ.

ಎನ್‌ಸಿಪಿಯ ಶರದ್ ಪವಾರ್, ಶಿವಸೇನೆ (ಯುಬಿಟಿ) ಉದ್ಧವ್ ಠಾಕ್ರೆ, ಸಮಾಜವಾದಿ ಪಕ್ಷದಿಂದ ಅಖಿಲೇಶ್ ಯಾದವ್, ಸಿಪಿಐ(ಎಂ)ನ ಸೀತಾರಾಂ ಯೆಚೂರಿ, ಸಿಪಿಐನ ಡಿ ರಾಜಾ, ಪಿಡಿಪಿಯ ಮೆಹಬೂಬಾ ಮುಫ್ತಿ, ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಸೇರಿದಂತೆ ಅನೇಕ ಪ್ರಮುಖ ವಿರೋಧ ಪಕ್ಷದ ನಾಯಕರು ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X