ನಿಮ್ಮ ಪಕ್ಷದಲ್ಲಿ 261 ರೌಡಿಗಳಿದ್ದಾರೆ; ಪ್ರಧಾನಿ ಮೋದಿಗೆ ಎಂಕೆ ಸ್ಟಾಲಿನ್ ತಿರುಗೇಟು

Date:

Advertisements

ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದ ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ “ನಿಮ್ಮ ಪಕ್ಷದಲ್ಲಿ 261 ರೌಡಿಗಳಿದ್ದಾರೆ” ಎಂದು ಹೇಳಿದರು.

ಸೇಲಂನಲ್ಲಿ ಸೇಲಂ ಡಿಎಂಕೆ ಅಭ್ಯರ್ಥಿ ಟಿಎಂ ಸೆಲ್ವಗಣಪತಿ ಮತ್ತು ಕಲ್ಲಕುರಿಚಿ ಡಿಎಂಕೆ ಅಭ್ಯರ್ಥಿ ಡಿ ಮಲೈಯರಸನ್ ಪರ ಪ್ರಚಾರ ನಡೆಸುತ್ತಿದ್ದ ಸಿಎಂ ಸ್ಟಾಲಿನ್ ಮೋದಿ ಹೇಳಿಕೆಗೆ ತಿರುಗೇಟು ನೀಡಿದರು.

ತಮಿಳುನಾಡಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರಧಾನಿ ಮೋದಿ ಈ ಹಿಂದೆ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸ್ಟಾಲಿನ್ “ಬಿಜೆಪಿಯ 261 ನಾಯಕರುಗಳು ಹಿಸ್ಟರಿ ಶೀಟರ್‌ಗಳು ಮತ್ತು ಕ್ರಿಮಿನಲ್ ದಾಖಲೆಗಳನ್ನು ಹೊಂದಿರುವವರು ಆಗಿದ್ದಾರೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ| ರಾಹುಲ್ ಗಾಂಧಿ ವಿರುದ್ಧದ ಬಿಜೆಪಿ ಅಭ್ಯರ್ಥಿ ಮೇಲಿದೆ 242 ಪ್ರಕರಣಗಳು!

“ರೌಡಿಗಳು ತಮ್ಮ ಪಕ್ಷದೊಳಗೆ ಇರುವಾಗ ನಮ್ಮ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಮಾತನಾಡುವ ಹಕ್ಕು ಪ್ರಧಾನಿ ಮೋದಿಯವರಿಗೆ ಇದೆಯೇ” ಎಂದು ಪ್ರಶ್ನಿಸಿದ ಎಂಕೆ ಸ್ಟಾಲಿನ್ ಅವರು, “ಎಲ್ಲಾ ರೌಡಿಗಳು ನಿಮ್ಮ (ಪಿಎಂ ಮೋದಿ) ಪಕ್ಷದಲ್ಲಿದ್ದಾರೆ. ಹಾಗಿದ್ದಾಗ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಮಾತನಾಡಲು ನಿಮಗೆ ಯಾವ ಹಕ್ಕಿದೆ? ಎಂದು ಕೇಳಿದರು. ಜೊತೆಗೆ ಬಿಜೆಪಿಯಲ್ಲಿರುವ ಹಿಸ್ಟರ್ ಶೀಟರ್‌ಗಳ ಹೆಸರು ಬರೆಯುತ್ತಾ ಹೋದರೆ 32 ಪುಟಗಳ ಪಟ್ಟಿ ಆಗುತ್ತದೆ ಎಂದು ಹೇಳಿದರು.

ಇನ್ನು “ಬಿಜೆಪಿಯಲ್ಲಿರುವ ಹಿಸ್ಟರ್ ಶೀಟ್‌ಗಳ ಪಟ್ಟಿಯಿದೆ. ತಮಿಳುನಾಡಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ನಿಮ್ಮ ಹೇಳಿಕೆಗೆ ಸರಿಯಾದ ಸಾಕ್ಷ್ಯ ನೀಡಿ” ಎಂದ ಎಂಕೆ ಸ್ಟಾಲಿನ್ ಅವರು “ಬಿಜೆಪಿ ನಾಯಕರ ವಿರುದ್ಧ ಒಟ್ಟು 1,977 ಪ್ರಕರಣಗಳಿವೆ” ಎಂದು ಬಹಿರಂಗಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದೇ ಮೊದಲ ಬಾರಿಗೆ ಭಾರತಕ್ಕೆ ತಾಲಿಬಾನ್ ಸಚಿವರ ಭೇಟಿ; ಐತಿಹಾಸಿಕ ಹೆಜ್ಜೆ

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಖಾನ್ ಮುತ್ತಖಿ...

ದಾವಣಗೆರೆ | ಜಾತಿ ಧರ್ಮ ಭಾಷೆಗಳ ಸಂಘರ್ಷ ತಡೆಗೆ ಗಾಂಧೀಜಿ ದಾರಿ ಮುಖ್ಯ: ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ

ʼʼಜಾತಿ,ಧರ್ಮಗಳ, ಮಧ್ಯೆ, ಭಾಷೆ ಮತ್ತು ಪ್ರದೇಶಗಳ ಮಧ್ಯೆ ವೈಷಮ್ಯ ಮಾಡಿಕೊಂಡು ಸಂಘರ್ಷ...

ಒಳ ಮೀಸಲಾತಿ | ಎಐಸಿಸಿ ಹಸ್ತಕ್ಷೇಪಕ್ಕೆ ಹೆಚ್ಚಿದ ಆಗ್ರಹ, ದೆಹಲಿ ಬಿಡದಿರಲು ಅಲೆಮಾರಿ ಸಂಸತ್ತು ತೀರ್ಮಾನ

ಒಳ ಮೀಸಲಾತಿ ವಿತರಣೆಯಲ್ಲಿ ಕರ್ನಾಟಕದ ಅಸ್ಪೃಶ್ಯ ದಲಿತ ಅಲೆಮಾರಿ ಸಮುದಾಯಗಳಿಗೆ ಆಗಿರುವ...

Download Eedina App Android / iOS

X