ಕೆ.ಸುಧಾಕರ್‌ ಹೆಸರಲ್ಲಿ ಮತ ಕೇಳಿದರೆ ಬಿಜೆಪಿಗೆ ಮೈನಸ್‌: ಎಸ್‌ ಆರ್‌ ವಿಶ್ವನಾಥ್‌

Date:

Advertisements

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿನ ಆಂತರಿಕ ಭಿನ್ನಮತ ದಿನೇ ದಿನೇ ಹೆಚ್ಚುತ್ತಿದೆ. ಯಲಹಂಕ ಬಿಜೆಪಿ ಶಾಸಕ ಎಸ್‌ ಆರ್‌ ವಿಶ್ವನಾಥ್‌ ಅವರು ತಮ್ಮದೇ ಪಕ್ಷದ ಡಾ.ಕೆ. ಸುಧಾಕರ್‌ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಸೋಮವಾರ (ಏ.1) ಯಲಹಂಕದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, “ಡಾ.ಕೆ.ಸುಧಾಕರ್‌ ಅವರ ಹೆಸರಲ್ಲಿ ಮತ ಕೇಳಿದರೆ ಪಕ್ಷಕ್ಕೇ ಮೈನಸ್‌ ಆಗುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ, ನಾವು ಮೋದಿ ಹೆಸರಿನಲ್ಲೇ ಮತ ಕೇಳುತ್ತೇವೆ” ಎಂದರು.

“ಟಿಕೆಟ್‌ ಸಿಗದಿದ್ದಾಗ ಅಸಮಾಧಾನ ಇರುವುದು ಸಹಜ. ನನ್ನ ಮಗನಿಗೆ ಟಿಕೆಟ್‌ ಸಿಕ್ಕಿಲ್ಲ. ಹಾಗಂತ ನಾನು ನಾನು ಯಾರ ಮೇಲೂ ಮುನಿಸಿಕೊಂಡಿಲ್ಲ. ನಮಗೆ ಪಕ್ಷದ ಹಿತಾಸಕ್ತಿ ಮುಖ್ಯ. ಆದರೆ, ಮಾಧ್ಯಮಗಳನ್ನು ಕರೆತಂದು ಸಿಂಪತಿ ಕ್ರಿಯೇಟ್‌ ಮಾಡುವ ಕೆಲಸ ನಾನು ಮಾಡುವುದಿಲ್ಲ” ಎಂದು ಹೇಳಿದರು.

Advertisements

“ನಾನು ಸುಧಾಕರ್‌ ಅವರನ್ನು ಒಬ್ಬನೇ ಭೇಟಿ ಮಾಡುವುದಿಲ್ಲ. ಮುಖಂಡರ ಜತೆ ತೆರಳಿ ಭೇಟಿ ಮಾಡುತ್ತೇನೆ. ನಾಲ್ಕೈದು ದಿನಗಳ ಹಿಂದೆ ಭೇಟಿ ಮಾಡಬೇಕು ಎಂದು ಮೆಸೇಜ್‌ ಮಾಡಿದ್ದರು ಅಷ್ಟೆ. ನಮ್ಮ ಕ್ಷೇತ್ರದಲ್ಲಿ ನಾಳೆ ಮತದಾನ ನಡೆದರೂ ಮತ ಹಾಕಿಸುವ ವ್ಯವಸ್ಥೆ ಮಾಡಿಕೊಂಡಿದ್ದೇವೆ” ಎಂದರು.

“ಮಾಜಿ ಸಚಿವ ಸುಧಾಕರ್‌ ಅವರನ್ನು ಮನೆಯೊಳಗೆ ಬಿಟ್ಟಿಲ್ಲ ಎಂಬುದು ಸುಳ್ಳು. ಅವರು ಬರುವ ವಿಚಾರ ನನಗೆ ಗೊತ್ತಿರಲಿಲ್ಲ. ಹೀಗಾಗಿ ನಾನು ಬೇರೆ ಕೆಲಸದ ಮೇಲೆ ಹೊರಗೆ ಹೋಗಿದ್ದೆ. ಯಲಹಂಕದವರನ್ನು ಖಳನಾಯಕರು ಎಂಬಂತೆ ಮಾಧ್ಯಮಗಳಲ್ಲಿ ಬಿಂಬಿಸಿದ್ದಾರೆ” ಎಂದು ಪರೋಕ್ಷವಾಗಿ ಸುಧಾಕರ್‌ಗೆ ಟಾಂಗ್‌ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X