ಐಪಿಎಲ್ | ಮುಂಬೈ ವಿರುದ್ಧ ರಾಜಸ್ಥಾನಕ್ಕೆ ಭರ್ಜರಿ ಜಯ: ಹಾರ್ದಿಕ್ ಪಾಂಡ್ಯಾ ಬಳಗಕ್ಕೆ ‘ಹ್ಯಾಟ್ರಿಕ್’ ಸೋಲು

Date:

Advertisements

ಇಂದು ಮುಂಬೈನ ವಾಂಖೆಡೆ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಐಪಿಎಲ್‌ನ  ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಭರ್ಜರಿ ಜಯ ದಾಖಲಿಸಿದೆ. ಗೆಲ್ಲಲು ಕೇವಲ 126 ರನ್‌ಗಳ ಗುರಿ ಪಡೆದಿದ್ದ ರಾಜಸ್ಥಾನ, 15.3 ಓವರ್‌ಗಳಲ್ಲಿ ಗುರಿಯನ್ನು ತಲುಪಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ನೂತನ ನಾಯಕ ಹಾರ್ದಿಕ್ ಪಾಂಡ್ಯಾ ನೇತೃತ್ವ ಮುಂಬೈ ಇಂಡಿಯನ್ಸ್‌​ ನಿಗದಿತ 20 ಓವರ್​​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ ಕೇವಲ 125 ರನ್​ ಗಳಿಸಿತ್ತು. ಇಂದಿನ ಸೋಲಿನೊಂದಿಗೆ ಈವರೆಗೆ ಆಡಿರುವ ಮೂರೂ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್‌ ಸೋತಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಸತತ ಮೂರು ಪಂದ್ಯಗಳನ್ನು ಗೆದ್ದಿರುವ ರಾಜಸ್ಥಾನ ರಾಯಲ್ಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.

ಸತತ ಮೊದಲ ಎರಡು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ಮುಂಬೈ ಇಂಡಿಯನ್ಸ್​​​, ಇಂದು ತವರಲ್ಲಿ ಹೇಗಾದ್ರೂ ಮಾಡಿ ಗೆಲ್ಲಲೇಬೇಕು ಎಂದು ಜಿದ್ದಿಗೆ ಬಿದ್ದಿತ್ತು. ಆದರೆ, ಟಾಸ್​ ಸೋತು ಮೊದಲು  ಬ್ಯಾಟಿಂಗ್​ ಮಾಡಿದ ಮುಂಬೈ ಇಂಡಿಯನ್ಸ್​ ದೊಡ್ಡ ಸ್ಕೋರ್​ ಕಲೆ ಹಾಕುವ ಭರದಲ್ಲಿ ಬ್ಯಾಕ್​ ಟು ಬ್ಯಾಕ್​ ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

Advertisements

ಮುಂಬೈ ಇಂಡಿಯನ್ಸ್​ ಪರ ಓಪನರ್​ ಆಗಿ ಬಂದ ರೋಹಿತ್​ ಶರ್ಮಾ ಟ್ರೆಂಟ್​ ಬೌಲ್ಟ್​​ ಮೊದಲನೇ ಓವರ್​ನಲ್ಲೇ ಫಸ್ಟ್​ ಬಾಲ್​ಗೆ ಕ್ಯಾಚ್​​ ನೀಡಿ ಡಕೌಟ್​​ ಆದರು. ನಮನ್​​, ಬ್ರೆವೀಸ್​ ಕೂಡ ಡಕೌಟ್​ ಆಗಿ, ಔಟಾದರು. ಇಶಾನ್​ ಕಿಶನ್​ 1 ಸಿಕ್ಸರ್​​, 2 ಫೋರ್​ ಸಮೇತ 16 ರನ್​ ಸಿಡಿಸಿ ಕ್ಯಾಚ್​​ ಕೊಟ್ಟರು.

ಒಂದಷ್ಟು ಓವರ್​ಗಳು ಕ್ರೀಸ್​ನಲ್ಲಿ ನಿಂತು ಆಡಿದ ತಿಲಕ್​ ವರ್ಮಾ 2 ಫೋರ್​ ಸಮೇತ 32 ರನ್​ ಗಳಿಸಿದ್ದರು. ಬಳಿಕ ನಾಯಕ ಹಾರ್ದಿಕ್​ ಪಾಂಡ್ಯ 6 ಫೋರ್​ ಸಮೇತ 34 ರನ್​ ಬಾರಿಸಿದ್ದರು. ಟೀಮ್​ ಡೇವಿಡ್​​ 17 ರನ್ ಗಳಿಸಲಷ್ಟೇ ಶಕ್ತವಾದರು.

ರಾಜಸ್ಥಾನದ ಸಂಘಟಿತ ಬೌಲಿಂಗ್‌ ನಡುವೆ ವಿಫಲರಾದ ಮುಂಬೈ ಬ್ಯಾಟರ್‌ಗಳು, 20 ಓವರ್​​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ ಕೇವಲ 125 ರನ್​ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ, ರಿಯಾನ್ ಪರಾಗ್ ಅವರ ಭರ್ಜರಿ ಅರ್ಧಶಕದ ನೆರವಿನಿಂದ 15.3 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿಯನ್ನು ತಲುಪಿತು.

ರಿಯಾನ್ ಪರಾಗ್ 39 ಎಸೆತಗಳಲ್ಲಿ 54 ರನ್ ಗಳಿಸಿ ಮಿಂಚಿದರು. ಜೈಸ್ವಾಲ್ 10, ಸಂಜು ಸ್ಯಾಮ್ಸನ್ 12, ಜೋಸ್ ಬಟ್ಲರ್ 13 ರನ್, ರವಿಚಂದ್ರನ್ ಅಶ್ವಿನ್ 16 ರನ್ ಗಳಿಸಿದರು.

ಮುಂಬೈ ಪರ ಆಕಾಶ್ ಮದ್ವಾಲ್ 3 ವಿಕೆಟ್ ಪಡೆದರೆ, ಮಪಾಕಾ 1 ವಿಕೆಟ್ ಪಡೆದರು. ರಾಜಸ್ಥಾನ ಪರ ಬೌಲಿಂಗ್‌ನಲ್ಲಿ ಚಾಹಲ್ ಹಾಗೂ ಟ್ರೆಂಟ್ ಬೌಲ್ಟ್ 3 ವಿಕೆಟ್ ಪಡೆದರೆ, ಬರ್ಗರ್ 2 ಹಾಗೂ ಆವೇಶ್ ಖಾನ್ 1 ವಿಕೆಟ್ ಪಡೆದಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X