ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ: ಸಿದ್ದರಾಮಯ್ಯ ಪ್ರಶ್ನೆ

Date:

Advertisements

ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಅಂದಾಜು ₹33,770 ಕೋಟಿಯಷ್ಟು ನಷ್ಟವಾಗಿದೆಯೆಂದು ರಾಜ್ಯ ಸರ್ಕಾರ ಸಮೀಕ್ಷೆ ನಡೆಸಿ ಅಂದಾಜು ಮಾಡಿತ್ತು. ಇದರಲ್ಲಿ ಕನಿಷ್ಠ ₹17,901 ಕೋಟಿ ಪರಿಹಾರವನ್ನಾದರೂ ನೀಡಬೇಕೆಂಬುದು ಕರ್ನಾಟಕದ ಬೇಡಿಕೆ. ಇದಕ್ಕಾಗಿ ಪತ್ರದ ಮೇಲೆ ಪತ್ರ ಬರೆದೆವು, ಪ್ರಧಾನಿಯವರ ಜೊತೆ ಬರಪರಿಹಾರ ನೀಡುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷರಾದ ನಿಮ್ಮನ್ನೂ ಭೇಟಿಯಾದೆವು. ಈವರೆಗೆ ಒಂದು ಪೈಸೆ ಪರಿಹಾರ ನೀಡಿಲ್ಲ. ಕರ್ನಾಟಕ-ಕನ್ನಡಿಗರ ಬಗ್ಗೆ ಯಾಕೆ ನಿಮಗೆ ಇಷ್ಟು ದ್ವೇಷ?” ಎಂದು ಕಿಡಿಕಾರಿದ್ದಾರೆ.

“ಒಂದು ವಾರದೊಳಗೆ ಉನ್ನತಾಧಿಕಾರ ಸಮಿತಿಯ ಸಭೆ ಕರೆಯುತ್ತೇನೆ ಎಂದು ಕಳೆದ ಸೆಪ್ಟೆಂಬರ್ ನಲ್ಲಿ ನೀವು ನನಗೆ ಆಶ್ವಾಸನೆ ಕೊಟ್ಟಿದ್ದೀರಿ. ವಾರ ಕಳೆದು ತಿಂಗಳುಗಳ ಮೇಲೆ ತಿಂಗಳುಗಳು ಕಳೆದುಹೋಯಿತು. ಇಲ್ಲಿಯವರೆಗೆ ನೀವು ಸಭೆಯನ್ನೂ ಕರೆದಿಲ್ಲ, ಬರಪರಿಹಾರವನ್ನೂ ನೀಡಿಲ್ಲ” ಎಂದಿದ್ದಾರೆ.

Advertisements

“ಈ ಅನ್ಯಾಯ ಇದೇ ಮೊದಲ ಸಲವೇನಲ್ಲ, 2017ರಲ್ಲಿಯೂ ಕರ್ನಾಟಕದಲ್ಲಿ ಬರಗಾಲ ಬಂದಿತ್ತು. ಇದರಿಂದಾಗಿ ಅಂದಾಜು ₹30,000 ಕೋಟಿಯಷ್ಟು ನಷ್ಟ ಉಂಟಾಗಿತ್ತು. ಆಗ ಕೇಂದ್ರ ಸರ್ಕಾರ ನೀಡಿದ್ದು ಕೇವಲ ₹1,435 ಕೋಟಿ ಪರಿಹಾರ. ಅದೇ ವರ್ಷ ಮಹಾರಾಷ್ಟ್ರಕ್ಕೆ ₹8,195 ಕೋಟಿ ಮತ್ತು ಗುಜರಾತ್‌ಗೆ ₹3,894 ಕೋಟಿ ಪರಿಹಾರ ನೀಡಲಾಗಿತ್ತು. 2019ರಲ್ಲಿ ರಾಜ್ಯದಲ್ಲಿ ಬಿಜೆಪಿಯದ್ದೇ ಸರ್ಕಾರವಿದ್ದಾಗಲೂ ಅತಿವೃಷ್ಟಿಯಿಂದಾಗಿರುವ ಹಾನಿಗೆ ಪರಿಹಾರ ನೀಡದೆ ಸತಾಯಿಸಿದ್ದೀರಿ. ಕನ್ನಡಿಗರು ನಿಮಗೆ ಏನು ಅನ್ಯಾಯ ಮಾಡಿದ್ದಾರೆ. ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಅವಕಾಶ ನೀಡದಿರುವುದೇ ಅಪರಾಧವಾಗಿ ಹೋಯಿತೇ?” ಎಂದು ವಾಗ್ದಾಳಿ ನಡೆಸಿದ್ದಾರೆ.

“ಕರಾವಳಿಯ ರೈತರೇ ಕಟ್ಟಿ ಬೆಳೆಸಿದ್ದ ವಿಜಯಾ ಬ್ಯಾಂಕನ್ನು ನುಂಗಿದ್ದು ಗುಜರಾತಿನ ಬರೋಡಾ ಬ್ಯಾಂಕ್. ಕಾಂಗ್ರೆಸ್ ನಾಯಕರ ಪ್ರಯತ್ನದಿಂದ ನಿರ್ಮಾಣಗೊಂಡಿದ್ದ ಬಂದರು ಮತ್ತು ವಿಮಾನ ನಿಲ್ದಾಣಗಳನ್ನು ನಮ್ಮಿಂದ ಕಿತ್ತುಕೊಂಡದ್ದು ಗುಜರಾತಿನ ಉದ್ಯಮಿ ಅದಾನಿ. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ?” ಎಂದು ಹರಿಹಾಯ್ದಿದ್ದಾರೆ.

“ನಮ್ಮ ರೈತರೇ ಕಟ್ಟಿರುವ ಕರ್ನಾಟಕದ ಹೆಮ್ಮೆಯ ಕೆಎಂಎಫ್ ಅನ್ನು ಗುಜರಾತಿನ ಅಮುಲ್ ಜೊತೆ ವಿಲೀನಗೊಳಿಸಲು ಹೂಡಿದ್ದ ಸಂಚನ್ನು ಕನ್ನಡಿಗರು ಮರೆತಿಲ್ಲ. ರಾಜ್ಯದಲ್ಲಿ ಆ ಕಾಲದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ನೆರವಿನಿಂದ ಒಂದಷ್ಟು ದಿನ ನಂದಿನಿ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಮಾಯಮಾಡಿ ಅಮುಲ್ ಉತ್ಪನ್ನಗಳು ಎಲ್ಲೆಲ್ಲೂ ರಾರಾಜಿಸುವಂತೆ ಮಾಡಿದ್ದು ನೀವೇ ಅಲ್ಲವೇ? ನಮ್ಮ ನಂದಿನಿಯನ್ನು ಉಳಿಸಲು ಕರ್ನಾಟಕದಾದ್ಯಂತ ಸ್ವಾಭಿಮಾನಿ ಕನ್ನಡಿಗರು ಎದ್ದು ನಿಂತಾಗ ಬೇರೆ ದಾರಿ ಕಾಣದೆ ನಿಮ್ಮ ದುರಾಲೋಚನೆಯನ್ನು ಕೈಬಿಟ್ಟದ್ದು ನಿಜ ಅಲ್ಲವೇ?” ಎಂದು ಕುಟುಕಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರೇ, ಕರ್ನಾಟಕದಲ್ಲಿ ಮತಕೇಳುವ ಮೊದಲು ಕನ್ನಡಿಗ ಮತದಾರರ ಪ್ರಶ್ನೆಗಳಿಗೆ ಉತ್ತರಿಸಿ” ಎಂದು ಸಿಎಂ ಆಗ್ರಹಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X