ಚುನಾವಣಾ ಬಾಂಡ್‌ ಮಾರ್ಗಸೂಚಿ ಬಗ್ಗೆ ಆರ್‌ಟಿಐ ಮಾಹಿತಿ ನೀಡಲು ಎಸ್‌ಬಿಐ ನಕಾರ

Date:

Advertisements

ಚುನಾವಣಾ ಬಾಂಡ್ ಮಾಹಿತಿ ನೀಡಲು ಹೆಚ್ಚುವರಿ ಸಮಯ ಕೇಳಿ ಸುಪ್ರೀಂ ಕೋರ್ಟ್‌ನ ಛಾಟಿಯೇಟಿಗೆ ಗುರಿಯಾದ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಈಗ, ಆರ್‌ಟಿಐ ಅರ್ಜಿಯೊಂದಕ್ಕೆ ಉತ್ತರ ನೀಡಲು ನಿರಾಕರಿಸಿದೆ. ಚುನಾವಣಾ ಬಾಂಡ್‌ ಮಾರ್ಗಸೂಚಿ ಬಗ್ಗೆ ಮಾಹಿತಿ ನೀಡಲು ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಲಾಗಿದ್ದು, ಮಾಹಿತಿ ನೀಡಲಾಗದು ಎಂದು ಎಸ್‌ಬಿಐ ತಿಳಿಸಿದೆ.

ಸಾಮಾಜಿಕ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿ ಅರ್ಜಿಯನ್ನು ಸಲ್ಲಿಸಿದ್ದು, ಪ್ರಸ್ತುತ ರದ್ದಾದ ಚುನಾವಣಾ ಬಾಂಡ್ ಯೋಜನೆಯ ಮಾರ್ಗಸೂಚಿಯ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.

ಇದನ್ನು ಓದಿದ್ದೀರಾ?  ಚುನಾವಣಾ ಬಾಂಡ್ | ವಿಶ್ವದಲ್ಲೇ ಅತೀ ದೊಡ್ಡ ಹಗರಣ ಎಂದ ನಿರ್ಮಲಾ ಸೀತಾರಾಮನ್ ಪತಿ!

Advertisements

ಇದಕ್ಕೆ ಪ್ರತಿಕ್ರಿಯೆ ನೀಡಿದ ಎಸ್‌ಬಿಐನ ಉಪ ವ್ಯವಸ್ಥಾಪಕ ಎಂ ಖನ್ನಾ ಬಾಬು ಅವರು, “ಚುನಾವಣಾ ಬಾಂಡ್ ಮಾರ್ಗಸೂಚಿಯು ಆತಂರಿಕ ಮಾರ್ಗಸೂಚಿ ಮತ್ತು ಈ ಮಾಹಿತಿಯು ಆರ್‌ಟಿಐ ಕಾಯ್ದೆಯ 8(1)(ಡಿ) ಅಡಿಯಲ್ಲಿ ಬಹಿರಂಗಪಡಿಸಲು ಸಾಧ್ಯವಾಗದ ಮಾಹಿತಿ” ಎಂದು ತಿಳಿಸಿದ್ದಾರೆ.

ಆರ್‌ಟಿಐ ಕಾಯ್ದೆಯ 8(1)(ಡಿ) ಪ್ರಕಾರ ವಾಣಿಜ್ಯ, ಬೌದ್ಧಿಕ ಆಸ್ತಿ, ವಹಿವಾಟು ರಹಸ್ಯ ಮೊದಲಾದವುಗಳನ್ನು ಬಹಿರಂಗಪಡಿಸುವುದರಿಂದ ವಿನಾಯಿತಿ ಇದೆ. ಅಂದರೆ ಇಂತಹ ವಿಚಾರಗಳನ್ನು ಆರ್‌ಟಿಐ ಅಡಿಯಲ್ಲಿಯೂ ಬಹಿರಂಗಪಡಿಸದೆ ಇರಬಹುದು.

ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಅನ್ನು ಅಸಾಂವಿಧಾನಿಕ ಎಂದು ಘೋಷಿಸಿ ಬಾಂಡ್ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ತಿಳಿಸಿತ್ತು. ಆದರೆ ಎಸ್‌ಬಿಐ ಇದಕ್ಕಾಗಿ ನಾಲ್ಕು ತಿಂಗಳುಗಳ ಅವಕಾಶ ಕೋರಿತ್ತು. ಆದರೆ ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್ ಒಂದು ದಿನದಲ್ಲೇ ಎಲ್ಲ ಮಾಹಿತಿ ನೀಡಲು ತಿಳಿಸಿತ್ತು. ಇದಾದ ಬಳಿಕ ಎಸ್‌ಬಿಐ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿಯನ್ನು ನೀಡಿದೆ.

ಚುನಾವಣಾ ಬಾಂಡ್ ಮೂಲಕ ಹಗರಣವನ್ನು ಮಾಡಿರುವ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವನ್ನು ರಕ್ಷಿಸುವ ಪ್ರಯತ್ನವನ್ನು ಎಸ್‌ಬಿಐ ಮಾಡಿದೆ ಎಂದು ವಿಪಕ್ಷಗಳು ಆರೋಪಿಸಿದೆ. ಹಾಗೆಯೇ ಚುನಾವಣಾ ಬಾಂಡ್ ವಿಶ್ವದಲ್ಲೇ ಅತೀ ದೊಡ್ಡ ಹಗರಣ ಎಂದು ಹೇಳಿದೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಣ್ಣಾಮಲೈ ಕೈಯಿಂದ ಪ್ರಶಸ್ತಿ ಪಡೆಯಲು ವಿದ್ಯಾರ್ಥಿ ನಕಾರ

ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ್ದ ವಿದ್ಯಾರ್ಥಿಯೊಬ್ಬ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ...

ಆಸ್ಪತ್ರೆ ನಿರ್ಮಾಣ ಹಗರಣ: ಎಎಪಿಯ ಸೌರಭ್ ಭಾರದ್ವಾಜ್ ನಿವಾಸದ ಮೇಲೆ ಇಡಿ ದಾಳಿ

ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ...

VP-Polls | ಸುದರ್ಶನ್‌ ರೆಡ್ಡಿ ವಿರುದ್ಧದ ಅಮಿತ್‌ ಶಾ ಹೇಳಿಕೆ ಖಂಡಿಸಿದ ನಿವೃತ್ತ ನ್ಯಾಯಮೂರ್ತಿಗಳು

ಸಾಲ್ವಾ ಜುಡುಮ್‌ ತೀರ್ಪಿನ ಕುರಿತು ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಬಿ....

ಪ್ರಧಾನಿಯ ಪದವಿ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು

ದೆಹಲಿ ವಿಶ್ವವಿದ್ಯಾಲಯವು ಪ್ರಧಾನಿ ನರೇಂದ್ರ ಮೋದಿಯ ಪದವಿ ವಿವರಗಳನ್ನು ಬಹಿರಂಗಪಡಿಸುವ ಅಗತ್ಯವಿಲ್ಲ...

Download Eedina App Android / iOS

X