ಐಪಿಎಲ್ | ಮಯಾಂಕ್ ಮಿಂಚು: ಅಭಿಮಾನಿಗಳಿಗೆ ತವರಲ್ಲೇ ನಿರಾಸೆ ಮೂಡಿಸಿದ ಆರ್‌ಸಿಬಿ!

Date:

Advertisements

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನುಭವಿಸುವ ಮೂಲಕ ಅಭಿಮಾನಿಗಳಿಗೆ ತವರಲ್ಲೇ ನಿರಾಸೆ ಮೂಡಿಸಿದೆ.

ಲಕ್ನೋ ಸೂಪರ್ ಜೈಂಟ್ಸ್ ನೀಡಿದ್ದ 182 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಫಾಫ್ ಡು ಪ್ಲೆಸಿಸ್ ನೇತೃತ್ವದ ಬೆಂಗಳೂರು ತಂಡ, 19.4 ಓವರ್‌ಗಳಲ್ಲಿ 153ಕ್ಕೆ ಆಲೌಟ್ ಆಗುವ ಮೂಲಕ 28 ರನ್‌ಗಳಿಂದ ಸೋಲನುಭವಿಸಿದೆ.

ಲಕ್ನೋ ಸೂಪರ್‌ ಜೈಂಟ್ಸ್‌ನ ಕರಾರುವಕ್ಕಾದ ಬೌಲಿಂಗ್‌ಗೆ ಗುರಿ ತಲುಪಲು ಎಡವಿದ ಬೆಂಗಳೂರು, ತವರಲ್ಲೇ ಸೋಲುವ ಮೂಲಕ ನಿರಾಸೆ ಉಂಟು ಮಾಡಿದೆ.

Advertisements

ಆರ್‌ಸಿಬಿ ಪರ ಇನ್ನಿಂಗ್ಸ್‌ ಆರಂಭಿಸಿದ್ದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿ ಉತ್ತಮ ಆರಂಭ ನೀಡುವಲ್ಲಿ ವಿಫಲವಾದರು. 16 ಎಸೆತಗಳಲ್ಲಿ 22 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ಸಿದ್ಧಾರ್ಥ್ ಮಣಿಮಾರನ್ ಎಸೆದ 5ನೇ ಓವರ್​ನ ಮೊದಲ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಸಿಂಗಲ್ ತೆಗೆಯುವ ಯತ್ನದಲ್ಲಿ ಫಾಫ್ ಡುಪ್ಲೆಸಿಸ್ ರನೌಟ್ ಆದರು. ಔಟಾಗುವ ಮುನ್ನ 19 ರನ್ ಗಳಿಸಿದ್ದರು.

ಆರ್‌ಸಿಬಿ ಪರ ಉಳಿದಂತೆ ಇಂಪ್ಯಾಕ್ಟ್‌ ಪ್ಲೇಯರ್ ಆಗಿ ಬಂದ ಲೋಮ್‌ರೋರ್ 13 ಎಸೆತಗಳಲ್ಲಿ 33 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿದರು. ರಜತ್‌ ಪಾಟೀದಾರ್ 29 ರನ್, ಅನುಜ್ ರಾವತ್ 11 ರನ್ ಗಳಿಸಿದರು.

ಲಕ್ನೋದ ಯುವ ಬೌಲರ್ ಮಯಾಂಕ್ ಯಾದವ್ ಬೌಲಿಂಗ್‌ಗೆ ರನ್ ಗಳಿಸಲು ಪರದಾಡಿದ ಆರ್‌ಸಿಬಿಯ ಪ್ರಮುಖ ಮೂವರು ಬ್ಯಾಟರ್‌ಗಳು ವಿಕೆಟ್ ಒಪ್ಪಿಸಿದರು. ಮಯಾಂಕ್ ಯಾದವ್ ನಾಲ್ಕು ಓವರ್‌ಗಳಲ್ಲಿ ಕೇವಲ 14 ರನ್ ನೀಡಿ 3 ವಿಕೆಟ್ ಕಿತ್ತು ಮಿಂಚಿದರು.

ಉಳಿದಂತೆ ಲಕ್ನೋ ಪರ ನವೀನ್ ಉಲ್ ಹಕ್ 2, ಸ್ಟೋಯ್ನಿಸ್, ಸಿದ್ಧಾರ್ಥ್‌, ಬಿಷ್ಣೋಯ್ ಹಾಗೂ ಯಶ್ ತಲಾ ಒಂದೊಂದು ವಿಕೆಟ್ ಹಂಚಿಕೊಂಡರು.

ಆರ್‌ಸಿಬಿ ಈ ಸೋಲಿನೊಂದಿಗೆ ಈವರೆಗೆ ಆಡಿದ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಸೋತಿದ್ದು, ಕೇವಲ ಒಂದರಲ್ಲಷ್ಟೇ ಗೆಲುವು ಪಡೆದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X