ಶೇ.62 ರಷ್ಟು ಹೊಸ ಸೈನಿಕ ಶಾಲೆಗಳನ್ನು ಸಂಘ ಪರಿವಾರ, ಬಿಜೆಪಿ ನಾಯಕರಿಗೆ ಹಸ್ತಾಂತರಿಸಿದ ಕೇಂದ್ರ!

Date:

Advertisements

ಕೇಂದ್ರ ಸರ್ಕಾರವು ಸುಮಾರು ಶೇ.62 ರಷ್ಟು ಹೊಸ ಸೈನಿಕ ಶಾಲೆಗಳನ್ನು ಸಂಘ ಪರಿವಾರ ಮತ್ತು ಬಿಜೆಪಿ ನಾಯಕರಿಗೆ ಹಸ್ತಾಂತರಿಸಿದೆ ಎಂದು ರಿಪೋಟರ್ಸ್ ಕಲೆಕ್ಟಿವ್ ಬುಧವಾರ ವರದಿ ಮಾಡಿದೆ.

“ಕೇಂದ್ರ ಸರ್ಕಾರದ ಪತ್ರಿಕಾ ಹೇಳಿಕೆ ಮತ್ತು ಆರ್‌ಟಿಐನಿಂದ ಪಡೆದ ಮಾಹಿತಿ ಕಳವಳಕಾರಿಯಾಗಿದೆ. ನಮ್ಮ ವಿಚಾರಣೆಯಿಂದ ಸುಮಾರು 40ರಷ್ಟು ಅಂದರೆ ಶೇಕಡ 62ರಷ್ಟು ಸೈನಿಕ ಶಾಲೆಗಳನ್ನು ಆರ್‌ಎಸ್‌ಎಸ್‌, ಬಿಜೆಪಿ ನಾಯಕರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ” ಎಂದು ರಿಪೋಟರ್ಸ್ ಕಲೆಕ್ಟಿವ್ ವರದಿ ಹೇಳುತ್ತದೆ.

“ಸುಮಾರು ಶೇಕಡ 62ರಷ್ಟು ಸೈನಿಕ ಶಾಲೆಗಳನ್ನು ರಾಷ್ಟ್ರೀಯ ಸ್ವಯಂ ಸೇವಕ (ಆರ್‌ಎಸ್‌ಎಸ್‌) ಮತ್ತು ಅದರ ಅಂಗ ಸಂಸ್ಥೆಗಳೊಂದಿಗೆ ನಂಟು ಹೊಂದಿರುವ ಶಾಲೆಗಳಿಗೆ ನೀಡಲಾಗಿದೆ. ಜೊತೆಗೆ ಬಿಜೆಪಿ, ಅದರ ಮಿತ್ರಪಕ್ಷ, ಅದರ ಹಿತೈಷಿಗಳು, ಹಿಂದುತ್ವ ಸಂಘಟನೆಗಳು, ಇತರೆ ಹಿಂದೂ ಧಾರ್ಮಿಕ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದೆ” ಎಂದು ವರದಿ ಉಲ್ಲೇಖಿಸಿದೆ.

Advertisements

ಇದನ್ನು ಓದಿದ್ದೀರಾ?   ಕೇರಳ | ಆರ್‌ಎಸ್‌ಎಸ್‌ ಮುಖಂಡನ ಮನೆಯಲ್ಲಿ 770 ಕೆಜಿ ಸ್ಫೋಟಕ ಪತ್ತೆ

ಭಾರತದಲ್ಲಿ ಸೈನಿಕ ಶಾಲಾ ಶಿಕ್ಷಣ ವ್ಯವಸ್ಥೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಖಾಸಗಿ ಸಂಸ್ಥೆಗಳಿಗೆ ಶಾಲೆಯನ್ನು ಹಸ್ತಾಂತರಿಸಲಾಗಿದೆ ಅಥವಾ “ಭಾಗಶಃ ಹಣಕಾಸಿನ ನೆರವು” ನೀಡಲು ಮತ್ತು ಅವರ ಶಾಖೆಗಳನ್ನು ನಡೆಸಲು ಸರ್ಕಾರವು ಅನುಮತಿಸಿದೆ ಎಂದು ವರದಿ ಹೇಳಿದೆ.

2021ರಲ್ಲಿ ಕೇಂದ್ರ ಸರ್ಕಾರವು ಭಾರತದಲ್ಲಿ ಸೈನಿಕ ಶಾಲೆಯನ್ನು ಖಾಸಗಿ ಸಂಸ್ಥೆಗಳು ನಿರ್ವಹಣೆ ಮಾಡುವ ಅವಕಾಶವನ್ನು ನೀಡಿದೆ. ಆ ವರ್ಷದ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ದೇಶದಾದ್ಯಂತ ನೂರು ಹೊಸ ಸೈನಿಕ ಶಾಲೆಗಳನ್ನು ಆರಂಭಿಸುವ ಘೋಷಣೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X