ತುಮಕೂರು | ರೈತರ ಸಾಲಕ್ಕೆ ಬ್ಯಾಂಕ್‌ಗಳ ನೋಟಿಸ್ ಜಾರಿ ಖಂಡನೀಯ: ಸಿ ಜಿ ಲೋಕೇಶ್

Date:

Advertisements

ಬರ ಪೀಡಿತ ಪ್ರದೇಶವೆಂದು ಘೋಷಣೆಯಾದ ಬೆನ್ನಲ್ಲೇ ಗುಬ್ಬಿ ತಾಲೂಕಿನ ರೈತರಿಗೆ ಬ್ಯಾಂಕ್‌ಗಳು ನೋಟಿಸ್ ಜಾರಿ ಮಾಡುತ್ತಿರುವುದು ಸರಿಯಲ್ಲ. ಜತೆಗೆ ಕೊಬ್ಬರಿ, ರಾಗಿ ಖರೀದಿ ಕೇಂದ್ರದ ಮೂಲಕ ರೈತನ ಖಾತೆಗೆ ಬಂದ ಹಣವನ್ನು ಸಾಲಕ್ಕೆ ವಜಾ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಹೀಗೆ ರೈತರಿಗೆ ತೊಂದರೆ ನೀಡುವ ಬ್ಯಾಂಕ್‌ಗಳ ವಿರುದ್ಧ ರೈತ ಸಂಘ ತೀವ್ರ ಹೋರಾಟಕ್ಕೆ ಮುಂದಾಗಲಿದೆ ಎಂದು ಎಂದು ರೈತ ಸಂಘದ ಗುಬ್ಬಿ ತಾಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಎಚ್ಚರಿಕೆ ನೀಡಿದರು.

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ರೈತರ ಕೊಬ್ಬರಿ ಮತ್ತು ರಾಗಿ ಖರೀದಿ ಕೇಂದ್ರದ ಬಳಿ ರೈತರ ಜತೆಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

“ಬರಗಾಲ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಗುಬ್ಬಿ ತಾಲೂಕು ಸೇರಿರುವ ಬಗ್ಗೆ ಮಾಹಿತಿ ಎಲ್ಲ ಬ್ಯಾಂಕ್‌ಗಳಿಗೂ ತಿಳಿದಿದೆ. ಆದರೂ ಮಾರ್ಚ್ ತಿಂಗಳೆಂದು ಕಾರಣ ನೀಡಿ ರೈತರಿಂದ ಸಾಲ ವಸೂಲಿಗೆ ನೋಟಿಸ್ ತಂತ್ರ ಬಳಸಿದ್ದಾರೆ. ಕಳೆದ ಬಾರಿ ಕೊಬ್ಬರಿ ಮಾರಾಟ ಮಾಡಿದ ರೈತರೊಬ್ಬರ ಖಾತೆಯಲ್ಲಿದ್ದ ಕೊಬ್ಬರಿ ಹಣವನ್ನು ಸಾಲಕ್ಕೆ ವಜಾ ಮಾಡಿಕೊಂಡ ವಿಷಯದಿಂದ ತಾಲೂಕಿನ ಹಲವು ರೈತರಲ್ಲಿ ಆತಂಕ ಮೂಡಿದೆ” ಎಂದು ರೈತರ ಅಳಲು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ನಾಮಪತ್ರ ಸಲ್ಲಿಕೆ; ಹರಿದು ಬಂದ ಜನಸಾಗರ

“ದಿನಗಟ್ಟಲೇ ಸರದಿಯಲ್ಲಿ ನಿಂತು ಕೊಬ್ಬರಿ, ರಾಗಿ ಮಾರಾಟ ಮಾಡಿದ ರೈತರ ಹಣ ಹಲವು ದಿನಗಳ ಬಳಿಕ ಖಾತೆಗೆ ಬರುತ್ತಿದೆ. ಈ ಹಣವೂ ಬ್ಯಾಂಕ್ ಪಾಲಾದರೆ ರೈತ ಹೇಗೆ ಬದುಕು ನಡೆಸುವುದು. ಬರ ಪ್ರದೇಶದಲ್ಲಿ ರೈತರ ಬಳಿ ಸಾಲ ವಸೂಲಿ ಮಾಡಲು ಬಲವಂತ ಮಾಡುವಂತಿಲ್ಲವೆಂದ ಅವರು ರಾಗಿ, ಕೊಬ್ಬರಿ ಖರೀದಿ ಕೇಂದ್ರದ ಬಳಿ ಮೂಲ ಸವಲತ್ತು ಒದಗಿಸದ ಬಗ್ಗೆಯೂ ರೈತರಲ್ಲಿ ಅಸಮಾಧಾನ ತಂದಿದೆ. ಕುಡಿಯಲು ನೀರು, ನೆರಳು ವ್ಯವಸ್ಥೆ ಮಾಡಬೇಕು” ಎಂದು ಆಗ್ರಹಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X