ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತವು ಖಂಡಿತಾ ಖಾಯಂ ಸದಸ್ಯತ್ವ ಪಡೆಯುತ್ತದೆ: ಜೈಶಂಕರ್

Date:

Advertisements

ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ಪಡೆಯಬೇಕೆಂಬ ಭಾವನೆ ವಿಶ್ವದಲ್ಲಿದೆ. ಭಾರತವು ಖಂಡಿತವಾಗಿ ಖಾಯಂ ಸದಸ್ಯತ್ವ ಪಡೆಯಲಿದೆ. ಅದರೆ, ದೇಶವು ಅದಕ್ಕಾಗಿ ಈ ಬಾರಿ ಹೆಚ್ಚು ಶ್ರಮಿಸಬೇಕಾಗುತ್ತದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ವಿಶ್ವಸಂಸ್ಥೆಯು ಸುಮಾರು 80 ವರ್ಷಗಳ ಹಿಂದೆ ರೂಪುಗೊಂಡಿತು. ಐದು ರಾಷ್ಟ್ರಗಳು – ಚೀನಾ, ಫ್ರಾನ್ಸ್, ರಷ್ಯಾ ಒಕ್ಕೂಟ, ಯುನೈಟೆಡ್ ಕಿಂಗ್‌ಡಮ್ ಹಾಗೂ ಅಮೆರಿಕಾ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯ ರಾಷ್ಟ್ರಗಳಾಗಿವೆ.

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ವಿಶ್ವಸಂಸ್ಥೆ ರಚನೆಯಾದಾಗ ಜಗತ್ತಿನಲ್ಲಿ ಒಟ್ಟು 50 ಸ್ವತಂತ್ರ ರಾಷ್ಟ್ರಗಳಿದ್ದವು. ಕಾಲಕ್ರಮೇಣ ಅದು 193ಕ್ಕೆ ಏರಿಕೆಯಾಗಿದೆ. ಆದರೆ, ಈ ಐದು ರಾಷ್ಟ್ರಗಳು ಮಾತ್ರ ವಿಶ್ವಸಂಸ್ಥೆಯಲ್ಲಿ ತಮ್ಮ ನಿಯಂತ್ರಣ ಇಟ್ಟುಕೊಂಡಿವೆ. ಆದರೆ ಈಗ, ಇದು ಬದಲಾಗಬೇಕು. ಭಾರತಕ್ಕೆ ಶಾಶ್ವತ ಸ್ಥಾನ ಸಿಗಬೇಕು ಎಂಬ ಭಾವನೆ ಪ್ರಪಂಚದಾದ್ಯಂತ ಇದೆ” ಎಂದು ಅವರು ಹೇಳಿದರು.

Advertisements

“ನಾವು ಖಂಡಿತವಾಗಿಯೂ ಖಾಯಂ ಸದಸ್ಯತ್ವ ಪಡೆಯುತ್ತೇವೆ. ಆದರೆ, ಕಠಿಣ ಪರಿಶ್ರಮವಿಲ್ಲದೆ ದೊಡ್ಡದನ್ನು ಸಾಧಿಸಲಾಗುವುದಿಲ್ಲ. ನಾವು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಈ ಸಮಯದಲ್ಲಿ ನಾವು ಇನ್ನೂ ಹೆಚ್ಚು ಶ್ರಮಿಸಬೇಕು” ಎಂದು ಅವರು ಹೇಳಿದರು.

“ಭಾರತ, ಜಪಾನ್, ಜರ್ಮನಿ ಮತ್ತು ಈಜಿಪ್ಟ್ ಒಟ್ಟಾಗಿ ವಿಶ್ವಸಂಸ್ಥೆಯ ಮುಂದೆ ಪ್ರಸ್ತಾವನೆಯನ್ನು ಮುಂದಿಟ್ಟಿವೆ. ನಾವು ಒತ್ತಡವನ್ನು ನಿರ್ಮಿಸಬೇಕು. ವಿಶ್ವಸಂಸ್ಥೆಯು ದುರ್ಬಲಗೊಂಡಿದೆ ಎಂಬ ಭಾವನೆ ಜಗತ್ತಿನಲ್ಲಿದೆ. ಉಕ್ರೇನ್ ಯುದ್ಧ ಮತ್ತು ಗಾಜಾ ಬಿಕ್ಕಟ್ಟು ಕುರಿತು ವಿಶ್ವಸಂಸ್ಥೆಯಲ್ಲಿ ಯಾವುದೇ ಒಮ್ಮತ ತರಲಾಗಲಿಲ್ಲ. ಈ ಭಾವನೆ ಹೆಚ್ಚಾದಂತೆ ನಮಗೆ ಖಾಯಂ ಸೀಟು ಸಿಗುವ ಸಾಧ್ಯತೆ ಹೆಚ್ಚುತ್ತದೆ ಎಂಬುದು ನನ್ನ ಅನಿಸಿಕೆ” ಎಂದು ಅವರು ತಿಳಿಸಿದರು.

“ವಿಶ್ವಸಂಸ್ಥೆ ಸೇರಿದಂತೆ ಜಗತ್ತಿನ ಪ್ರಮುಖ ಸಂಸ್ಥೆಗಳು ನೀರು, ವಿದ್ಯುತ್, ರಸ್ತೆಗಳು, ಆರೋಗ್ಯ, ಶಾಲಾ ಶಿಕ್ಷಣ ಮುಂತಾದ ಸಾಮಾಜಿಕ ಕ್ಷೇತ್ರಗಳಲ್ಲಿ ಭಾರತದ ಸಾಧನೆಗಳನ್ನು ಅರ್ಥಮಾಡಿಕೊಂಡಿವೆ. ಜಗತ್ತು ನಮ್ಮನ್ನು ಪ್ರತಿಭಾವಂತರು ಎಂದು ನಂಬುತ್ತದೆ. ಸವಾಲುಗಳನ್ನು ಪರಿಹರಿಸಲು ಭಾರತ ಕೊಡುಗೆ ನೀಡಬೇಕೆಂದು ನಿರೀಕ್ಷಿಸುತ್ತದೆ” ಎಂದು ಅವರು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X