ಚುನಾವಣೆ 2023 | ಸಿಂಧನೂರಿನಲ್ಲಿ ಪತ್ನಿ-ಪತಿ ನಡುವೆ ಪೈಪೋಟಿ?

Date:

Advertisements

ರಾಯಚೂರು ಜಿಲ್ಲೆಯ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಪತ್ನಿ-ಪತಿ ಇಬ್ಬರೂ ಚುನಾವಣಾ ಕಣಕ್ಕಿಳಿದಿದ್ದು, ಇಬ್ಬರೂ ನಾಮಪತ್ರ ಸಲ್ಲಿಸಿದ್ದಾರೆ. ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಕಟ್ಟಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ನೆಕ್ಕಂಟಿ ನಾಮಪತ್ರ ಸಲ್ಲಿಸಿದ್ದರೆ, ಅವರ ಪತ್ನಿ ಎನ್ ರಮ್ಯಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಪತ್ನಿ-ಪತಿ ಇಬ್ಬರೂ ನಾಮಪತ್ರ ಸಲ್ಲಿಸಲು ಸಿಂಧನೂರು ತಹಶೀಲ್ದಾರ್ ‌ಕಚೇರಿಗೆ ಒಟ್ಟಿಗೆ ಬಂದಿದ್ದಾರೆ. ಮಲ್ಲಿಕಾರ್ಜುನ ಮೊದಲು ನಾಮಪತ್ರ ಸಲ್ಲಿಸಿದ್ದು, ಅವರ ಬಳಿಕ ರಮ್ಯಾ ಅವರು ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ನಾಮಪತ್ರ ಸಲ್ಲಿಕೆಗೂ ಮುನ್ನ ಇಬ್ಬರೂ ಜೊತೆಯಾಗಿಯೇ ರ್‍ಯಾಲಿ ನಡೆಸಿದ್ದಾರೆ.

ಹೀಗಾಗಿ, ಇಬ್ಬರೂ ಪರಸ್ಪರ ಎದುರಾಳಿಗಳಾಗಿ ಸ್ಪರ್ಧಿಸಿದ್ದಾರೆಯೇ ಅಥವಾ ಒಂದು ವೇಳೆ ಒಬ್ಬರ ನಾಮಪತ್ರ ರಿಜೆಕ್ಟ್‌ ಆದರೆ, ಮತ್ತೊಬ್ಬರು ಕಣದಲ್ಲಿರಲಿ ಎಂದು ಇಬ್ಬರೂ ನಾಮಪತ್ರ ಸಲ್ಲಿಸಿದ್ದಾರೆಯೇ ಎಂಬ ಅನುಮಾನವನ್ನು ಕ್ಷೇತ್ರದ ಜನರು ವ್ಯಕ್ತಪಡಿಸಿದ್ದಾರೆ.

Advertisements

ಸಿಂಧನೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ವೆಂಟರಾವ ನಾಡಗೌಡ, ಕಾಂಗ್ರೆಸ್‌ ಅಭ್ಯರ್ಥಿ ಹಂಪನಗೌಡ ಬಾದರ್ಲಿ, ಬಿಜೆಪಿ ಅಭ್ಯರ್ಥಿ ಕೆ ಕಾರಿಯಪ್ಪ, ಎಎಪಿ ಅಭ್ಯರ್ಥಿ ಸಂಗ್ರಾಮ ನಾರಾಯಣ ಕಣದಲ್ಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X