ಹಿಂದೆ ಹಲವು ಕೋಟೆಗಳು ಉರುಳಿವೆ, ಮಹಾರಾಷ್ಟ್ರದಲ್ಲೇ ಹಿಂದುತ್ವದ ಕೋಟೆ ಉಳಿದಿಲ್ಲ: ಬಿ ಕೆ ಹರಿಪ್ರಸಾದ್

Date:

Advertisements

ಹಿಂದುತ್ವದ ಕೋಟೆ ಮಹಾರಾಷ್ಟ್ರದಲ್ಲೇ ಉಳಿದುಕೊಂಡಿಲ್ಲ, ಸಾವರ್ಕರ್ ನಿರ್ಮಿಸಿದ ಹಿಂದುತ್ವದ ಕೋಟೆಯೇ ಪುಡಿಯಾಗಿದೆ. ಹಿಂದೆ ರಾಜ ಮಹಾರಾಜರು ಕಟ್ಟಿದ್ದ ಕೋಟೆಗಳೂ ಪುಡಿಯಾಗಿವೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಗೆದ್ದಿರುವುದು ಹಿಂದುತ್ವದ ಕೋಟೆಯಿಂದಲ್ಲ, ಕಾರಣಾಂತರಗಳಿಂದ ಗೆದ್ದಿದೆ” ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದರು.

ಮಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದರು.

ದೇಶ ವಿಭಜನೆ ಹೇಳಿಕೆ ನೀಡಿದವರಿಗೆ ಟಿಕೆಟ್ ಎಂಬ ಅಮಿತ್ ಶಾ ಟೀಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, “ಇಂದಿರಾ ಗಾಂಧಿ ಕಾಲದಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ವಿಭಜನೆಯಾಗಿ‌ ಬಾಂಗ್ಲಾದೇಶವನ್ನು ಪ್ರತ್ಯೇಕ ದೇಶ ಮಾಡಿದ್ದು ಇಂದಿರಾಗಾಂಧಿ. ಇಲ್ಲಿ ಹೇಳಿಕೆ ಕೊಟ್ಟರೆ ಎಲ್ಲಿ ದೇಶ ವಿಭಜನೆಯಾಗುತ್ತದೆ. ಮೋದಿಯವರು ಕಚ್ಚತೀವು ದ್ವೀಪವನ್ನು ಬಿಟ್ಟುಕೊಟ್ಟ ಹೇಳಿಕೆ ನೀಡಿದ್ದಾರೆ. ಅದು ಶ್ರೀಲಂಕಾದ ಭಾಗವೇ ಆಗಿತ್ತು ಅನ್ನೋದು ಅವರಿಗೆ ಗೊತ್ತಿಲ್ಲವೇ” ಎಂದು ಪ್ರಶ್ನಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಬಿಜೆಪಿ ಗ್ಯಾರಂಟಿಗೆ ಬೆಲೆ ಇಲ್ಲ, ಅಮಿತ್ ಶಾ ಸುಳ್ಳು ಹೇಳಿಕೊಂಡು ಹೋಗಿದ್ದಾರೆ: ದಿನೇಶ್ ಗುಂಡೂರಾವ್

“ಹಿಂದೆ ಸಿಕ್ಕಿಂ ದೇಶ ಇದ್ದುದನ್ನು ನಮ್ಮ ಜತೆಗೆ ಸೇರಿಸಿದ್ದು ಕಾಂಗ್ರೆಸ್, ಈಗ ಎರಡು ಸಾವಿರ ಚದರ ಕಿಮೀ ಭೂಮಿ ಚೀನಾ ಪಾಲಾಗಿದೆ. ಇದನ್ನು ಹೇಳಿಕೊಂಡಿದ್ದು ಬಿಜೆಪಿಯವರೇ, ನಾವೇನೂ ಹೇಳಿದ್ದಲ್ಲ. ಚೀನಾ ಅತಿಕ್ರಮಿಸಿದ್ದನ್ನು ಮರಳಿ ಯಾವಾಗ ತರುತ್ತಾರೆಂದು ಹೇಳಲಿ, ದೇಶವನ್ನು ಉಳಿಸಿಕೊಳ್ಳುವಂಥದ್ದು ಸರ್ಕಾರದ ಕೈಲಿರುತ್ತದೆ” ಎಂದು ಬಿ ಕೆ ಹರಿಪ್ರಸಾದ್ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X