ತೆಲಂಗಾಣ | ಔಷಧ ಘಟಕದಲ್ಲಿ ರಿಯಾಕ್ಟರ್ ಸ್ಫೋಟ; 7 ಮಂದಿ ಸಾವು

Date:

Advertisements

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಎಸ್‌ಬಿ ಆರ್ಗಾನಿಕ್ಸ್‌ ಲಿಮಿಟೆಡ್‌ (ಔಷಧ ತಯಾರಿಕಾ ಘಟಕ) ನಲ್ಲಿ ಬುಧವಾರ ಮೂರು ರಿಯಾಕ್ಟರ್‌ಗಳು ಸ್ಪೋಟಗೊಂಡಿದೆ. ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರಿಯಾಕ್ಟರ್‌ಗಳು ಸ್ಫೋಟಗೊಂಡ ನಂತರ ಬೆಂಕಿ ಅವಘಡದಲ್ಲಿ ಪ್ಲಾಂಟ್ ಡೈರೆಕ್ಟರ್ ರವಿ ಶರ್ಮಾ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತ ರವಿ ಮತ್ತು ಆರು ಜನ ಕಾರ್ಮಿಕರು ಬಿಹಾರ ಮೂಲದವರು ಎಂದು ಹೇಳಲಾಗಿದೆ.

ಕನಿಷ್ಠ30 ಕಾರ್ಮಿಕರು ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ. ಗಾಯಗೊಂಡಿದ್ದ ಕಾರ್ಮಿಕರು ಸಹಾಯಕ್ಕಾಗಿ ಕಿರುಚಿ, ಅಳಲು ಪ್ರಾರಂಭಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Advertisements

ಹತ್ನೂರು ಮಂಡಲದ ಚಂದಾಪುರ ಗ್ರಾಮದಲ್ಲಿ ಬೃಹತ್ ಔಷಧ ತಯಾರಿಕಾ ಘಟಕವಿದೆ. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಔಷಧ ಘಟಕದಲ್ಲಿರುವ ಮೂರು ರಿಯಾಕ್ಟರ್‌ಗಳು ಸ್ಪೋಟಗೊಂಡ ಬೆಂಕಿ ಅನಾಹುತ ಸಂಭವಿಸಿದೆ. ಈ ವೇಳೆ, ಸ್ಥಳದಲ್ಲಿ 60 ಕಾರ್ಮಿಕರಲ್ಲಿ ಸುಮಾರು 30 ಮಂದಿ ಫಾರ್ಮಾ ಕಂಪನಿಯ ಮೂರು ರಿಯಾಕ್ಟರ್‌ಗಳ ಬಳಿ ಕೆಲಸ ಮಾಡುತ್ತಿದ್ದರು. ಮೃತ ರವಿ ಅವರು ರಿಯಾಕ್ಟರ್ ಒಂದರಲ್ಲಿ ಔಷಧ ತಯಾರಿಕೆಯ ಬ್ಯಾಚ್ ಅನ್ನು ತೆರವುಗೊಳಿಸಲು ಕೆಲಸಗಾರರ ಮೇಲೆ ನಿಗಾ ಇಡುತ್ತಿದ್ದರು. ರಿಯಾಕ್ಟರ್‌ಗಳು ಒಂದೊಂದಾಗಿ ಸ್ಫೋಟಗೊಳ್ಳುತ್ತಿದ್ದಂತೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಆವರಣದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಸಂತ್ರಸ್ತರನ್ನು ಗುರುತಿಸಲು ಕಾರ್ಮಿಕರು ಹರಸಾಹಸ ಪಡಬೇಕಾಯಿತು. ಕೆಲವು ಕಾರ್ಮಿಕರು ಕಾರ್ಖಾನೆಯಿಂದ ಓಡಿಹೋದರು. ಆರಂಭದಲ್ಲಿ, ಅಪಘಾತವನ್ನು ಗಮನಿಸಿದ ಸ್ಥಳೀಯರು ಆವರಣಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಅಪರಿಚಿತರೊಬ್ಬರು ಕರೆ ಮಾಡಿ ಮಾಹಿತಿ ನೀಡಿದ ಮೇರೆಗೆ ಪೊಲೀಸರು ಮತ್ತು ಅಗ್ನಿಶಾಮಕ ಸುರಕ್ಷತಾ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದರು.

ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳದಿಂದ ನಾಲ್ಕು ಮೃತದೇಹಗಳನ್ನು ಹೊರತೆಗೆದು ಸಂಗಾರೆಡ್ಡಿ ಏರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಅಧಿಕಾರಿಗಳ ಪ್ರಕಾರ, ನಿರ್ವಹಣಾ ಉಸ್ತುವಾರಿಗಳಾದ ಪರ್ಲಿ ಸುಬ್ರಹ್ಮಣ್ಯಂ ಮತ್ತು ಸುರೇಶ್ ಪಾಲ್ ಅವರನ್ನು ಇನ್ನೂ ಗುರುತಿಸಬೇಕಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪುರುಷ ಸಹೋದ್ಯೋಗಿಯೊಂದಿಗೆ ಮಾತನಾಡಿದ್ದಕ್ಕೆ ಹೆಂಡತಿಯ ಮೇಲೆ ಹಲ್ಲೆ ನಡೆಸಿದ ಪತಿ

ಸಂಗಾರೆಡ್ಡಿ ಜಿಲ್ಲಾಧಿಕಾರಿ ವಲ್ಲೂರು ಕ್ರಾಂತಿ ಮಾಧ್ಯಮಗಳಿಗೆ ಘಟನೆ ಬಗ್ಗೆ ಮಾಹಿತಿ ನೀಡಿದರು. ಅಲ್ಲದೇ, ಘಟನಾ ಸ್ಥಳಕ್ಕೆ ಸಚಿವರಾದ ಕೊಂಡ ಸುರೇಖಾ, ದಾಮೋದರ ರಾಜನರಸಿಂಹ ಭೇಟಿ ನೀಡಿದ್ದಾರೆ. ಬಳಿಕ, ರಾಜನರಸಿಂಹ ಆಸ್ಪತ್ರೆಗೆ ತೆರಳಿ ಸಂತ್ರಸ್ತರು ಹಾಗೂ ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿ, ಗಾಯಾಳುಗಳಿಗೆ ಸರ್ಕಾರ ಉತ್ತಮ ಚಿಕಿತ್ಸೆ ನೀಡಲಿದೆ ಎಂದರು.

ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಕಾರ್ಮಿಕರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಗಾಯಗೊಂಡ ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಿಯಾಕ್ಟರ್‌ಗಳ ಸ್ಫೋಟದಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ವಿವರಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X