ರಾಜಸ್ಥಾನ | ಕ್ರಿಕೆಟ್‌ ಬ್ಯಾಟ್‌ನಿಂದ ಹಲ್ಲೆ; ವ್ಯಾಪಾರಿಯ ಕೊಲೆಗೈದ ಸಬ್ ಇನ್ಸ್‌ಪೆಕ್ಟರ್ ಮಗ!

Date:

Advertisements

ತರಕಾರಿ ವ್ಯಾಪಾರಿಯೋರ್ವನನ್ನು ಸಬ್ ಇನ್ಸ್‌ಪೆಕ್ಟರ್‌ನ ಮಗನೊಬ್ಬ ಮನಬಂದಂತೆ ಕ್ರಿಕೆಟ್ ಬ್ಯಾಟ್‌ನಿಂದ ಥಳಿಸಿ ಕೊಂದ ಅಘಾತಕಾರಿ ಘಟನೆ ರಾಜಸ್ಥಾನದ ಜೈಪುರದ ಕರಣಿ ವಿಹಾರ್ ಪ್ರದೇಶದಲ್ಲಿ ನಡೆದಿದೆ.

ಕೊಲೆಗೈದ ಯುವಕನನ್ನು 23 ವರ್ಷದ ಕ್ಷಿತಿಜ್ ಶರ್ಮಾ ಎಂದು ಗುರುತಿಸಲಾಗಿದ್ದು, ಮೋಹನ್ ಲಾಲ್ ಸಿಂಧಿ (35) ಕೊಲೆಗೀಡಾದ ತರಕಾರಿ ವ್ಯಾಪಾರಿಯಾಗಿದ್ದಾನೆ. ಕೊಲೆ ಆರೋಪಿ ಕ್ಷಿತಿಜ್, ರಾಜಸ್ಥಾನದ ಪೊಲೀಸ್ ಇನ್ಸ್‌ಪೆಕ್ಟರ್ ಆಗಿರುವ ಪ್ರಶಾಂತ್ ಶರ್ಮಾ ಎಂಬವರ ಮಗನಾಗಿದ್ದಾನೆ.

ಕರಣಿ ವಿಹಾರ್ ಪ್ರದೇಶದಲ್ಲಿನ ರಜನಿ ಬಿಹಾರ್ ಕಾಲೋನಿಯಲ್ಲಿರುವ ಆರೋಪಿಯ ಮನೆಯ ಹೊರಗೆ ಈ ಘಟನೆ ನಡೆದಿದ್ದು, ಆತನ ತಂದೆ ಪ್ರಶಾಂತ್ ಶರ್ಮಾ ಮನೆಯೊಳಗಿದ್ದಾಗ ಈ ಘಟನೆ ನಡೆದಿದೆ ಎಂದು ರಾಜಸ್ಥಾನ ಪೊಲೀಸರು ಮಾಹಿತಿ ನೀಡಿದ್ದಾರೆ. ಹಲ್ಲೆಗೈಯ್ಯುತ್ತಿರುವ ದೃಶ್ಯವು ಸ್ಥಳೀಯ ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

Advertisements

ಮಂಗಳವಾರ ರಾತ್ರಿ ಮನೆಯ ಹೊರಗೆ ಈ ಘಟನೆ ನಡೆದಿದ್ದು, ಆ ಪ್ರದೇಶವನ್ನು ದಾಟುತ್ತಿದ್ದ ಮೋಹನ್ ಲಾಲ್ ಸಿಂಧಿಯ ಜತೆ ಕ್ಷಿತಿಜ್ ವಾಗ್ವಾದಕ್ಕೆ ಇಳಿದಿದ್ದಾನೆ. ವಾದವು ಉಲ್ಬಣಗೊಳ್ಳುತ್ತಿದ್ದಂತೆ, ಕ್ಷಿತಿಜ್ ಬ್ಯಾಟ್ ತರಲು ಮನೆಯೊಳಗೆ ಹೋದರು ಮತ್ತು ಸಿಂಧಿಯ ತಲೆಗೆ ಪದೇ ಪದೇ ಹೊಡೆದರು. ಅದು ಅವನ ಸಾವಿಗೆ ಕಾರಣವಾಯಿತು ಎಂದು ಘಟನೆಯ ಸಿಸಿಟಿವಿ ವೀಡಿಯೊವನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.

“ಆರೋಪಿ ಕ್ಷಿತಿಜ್‌ನ ತಂದೆ ಯಾವುದೋ ಶಬ್ದ ಕೇಳಿ ಮನೆಯಿಂದ ಹೊರಗೆ ಬಂದು ನೋಡಿದಾಗ ಸಿಂಧಿಯ ರಸ್ತೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು, ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯ ವೈದ್ಯರು ಪರಿಶೀಲನೆ ಮಾಡಿದ ಬಳಿಕ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಸದ್ಯ, ಆರೋಪಿ, ಸಬ್ ಇನ್ಸ್‌ಪೆಕ್ಟರ್ ಮಗ ಕ್ಷಿತಿಜ್ ಶರ್ಮಾನ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದೇವೆ. ವಿಚಾರಣೆ ನಡೆಸಲಾಗುತ್ತಿದೆ” ಎಂದು ಡಿಸಿಪಿ ಅಮಿತ್ ಬುಧಾನಿಯಾ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X