ಚುನಾವಣೆ 2023 | ಕಲ್ಯಾಣ ಕರ್ನಾಟಕದಲ್ಲಿ ಎಸ್‌ಸಿ ‘ಬಲ ಸಮುದಾಯ’ಕ್ಕೆ ಒಂದೂ ಟಿಕೆಟ್ ನೀಡದ ಬಿಜೆಪಿ

Date:

Advertisements
ಖರ್ಗೆಯವರು ಪರಿಶಿಷ್ಟ ಜಾತಿಯ 'ಬಲ' ಸಮುದಾಯಕ್ಕೆ ಸೇರಿದವರು. ಅವರ ಸಮುದಾಯ ಬಿಜೆಪಿ ಪಕ್ಷಕ್ಕೆ ಮತ ಹಾಕುವುದಿಲ್ಲವೆಂದು ನಿರ್ಣಯಿಸಿಯೋ ಅಥವಾ ಜಾತಿ ಸಮೀಕರಣದಿಂದಾಗಿಯೋ ಏನೋ ಒಟ್ಟಿನಲ್ಲಿ ಈ ಭಾಗದಿಂದ 'ಬಲ' ಸಮುದಾಯಕ್ಕೆ ಒಂದು ಟಿಕೆಟ್ ನೀಡಿಲ್ಲ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕಲ್ಯಾಣ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ನಾಯಕ. ಸಹಜವಾಗಿ ಈ ಭಾಗದಿಂದ ಹೆಚ್ಚು ಕಾಂಗ್ರೆಸ್ ಹುರಿಯಾಳುಗಳು ಗೆಲ್ಲಿಸಬೇಕೆಂಬ ಉಮೇದಿನಲ್ಲಿ ಅವರು ಇರುತ್ತಾರೆ. ಏಕೆಂದರೆ ಇದು ಅವರ ಪ್ರತಿಷ್ಠೆಯ ವಿಷಯವಾಗಿದೆ. ಹೀಗಾಗಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಏನೇನೋ ಬೇಕು ಅದೆಲ್ಲವೂ ಸಾಧ್ಯವಾದ ಮಟ್ಟಿಗೆ ಮಾಡುತ್ತಾರೆ.

ಬಿಜೆಪಿಯೂ ಈ ಭಾಗದ ಮೇಲೆ ಅತಿ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದೆ. ಇಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಎಐಸಿಸಿ ಅಧ್ಯಕ್ಷರೆ ತಮ್ಮ ಭಾಗದಲ್ಲೇ ತಮ್ಮ ಪಕ್ಷವನ್ನು ಗೆಲ್ಲಿಸಿಲ್ಲ, ಇನ್ನೂ ದೇಶಾದ್ಯಂತ ಕಾಂಗ್ರೆಸ್ ಪಕ್ಷವನ್ನು ಇವರು ಗೆಲ್ಲಿಸಲು ಸಾಧ್ಯವೇ ಎಂದು ಜನರೆದುರು ಸಾರಲು ತುದಿಗಾಲಲ್ಲಿ ನಿಂತಿದೆ. ಅದಕ್ಕಾಗಿಯೇ ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡಿದೆ.

ಖರ್ಗೆಯವರು ಪರಿಶಿಷ್ಟ ಜಾತಿಯ ‘ಬಲ’ ಸಮುದಾಯಕ್ಕೆ ಸೇರಿದವರು. ಅವರ ಸಮುದಾಯ ಬಿಜೆಪಿ ಪಕ್ಷಕ್ಕೆ ಮತ ಹಾಕುವುದಿಲ್ಲವೆಂದು ನಿರ್ಣಯಿಸಿಯೋ ಅಥವಾ ಜಾತಿ ಸಮೀಕರಣದಿಂದಾಗಿಯೋ ಏನೋ ಒಟ್ಟಿನಲ್ಲಿ ಈ ಭಾಗದಿಂದ ‘ಬಲ’ ಸಮುದಾಯಕ್ಕೆ ಒಂದು ಟಿಕೆಟ್ ನೀಡಿಲ್ಲ. ಇಲ್ಲಿ ಒಟ್ಟು ನಲ್ವತ್ತೊಂದು ಕ್ಷೇತ್ರಗಳಿವೆ. ಅದರಲ್ಲಿ ಎಂಟು ಎಸ್‌ಸಿ ಮೀಸಲು ಕ್ಷೇತ್ರಗಳಿವೆ. ಸಾಮಾಜಿಕ ನ್ಯಾಯದ ದೃಷ್ಟಿಯಿಂದಾದರೂ ಒಂದೆರಡು ಕ್ಷೇತ್ರದಲ್ಲಾದರೂ ‘ಬಲ’ ಸಮುದಾಯಕ್ಕೆ ಸೇರಿರುವ ವ್ಯಕ್ತಿಗಳಿಗೆ ಟಿಕೆಟ್ ನೀಡಬೇಕಿತ್ತು. ಆದರೇಕೋ ನೀಡಿಲ್ಲ.

Advertisements

ಎಂಟು ಮೀಸಲು ಕ್ಷೇತ್ರಗಳಲ್ಲಿ ಲಂಬಾಣಿ ಸಮುದಾಯಕ್ಕೆ ನಾಲ್ಕು ಕ್ಷೇತ್ರಗಳಲ್ಲಿ, ಮಾದಿಗ ಸಮುದಾಯಕ್ಕೆ ಮೂರು ಕ್ಷೇತ್ರಗಳಲ್ಲಿ (ಮೂರರಲ್ಲಿ ಒಂದು ಕಡೆ ಎಡ ಸಮುದಾಯದ ‘ಸಮಗಾರ’ ಉಪಜಾತಿಗೆ ಮಣೆ ಹಾಕಿದೆ) ಮತ್ತು ಭೋವಿ ಸಮುದಾಯಕ್ಕೆ ಒಂದು ಕ್ಷೇತ್ರದಲ್ಲಿ ಟಿಕೆಟ್ ನೀಡಿದೆ. ಟಿಕೆಟ್ ಹಂಚಿಕೆ ನೋಡಿದರೆ ಪರಿಶಿಷ್ಟ ಜಾತಿಯ ‘ಬಲ’ ಸಮುದಾಯ ಹೊರಗಿಟ್ಟು, ಎಡ, ಲಂಬಾಣಿ ಹಾಗೂ ಭೋವಿ ಸಮುದಾಯಕ್ಕೆ ಮಣೆ ಹಾಕಿ, ಅವರನ್ನು ಓಲೈಸಿಕೊಳ್ಳಲು ಮುಂದಾಗಿದ್ದು ಸ್ಪಷ್ಟವಾಗಿ ಕಾಣುತ್ತಿದೆ. ಈ ಪ್ರಯೋಗ ಬಿಜೆಪಿ ಪಕ್ಷಕ್ಕೆ ವರವಾಗುತ್ತದೆಯೋ ಅಥವಾ ಉಲ್ಟಾ ಹೊಡೆಯುತ್ತದೆಯೋ ಎಂಬುವುದು ಚುನಾವಣೆಯ ಫಲಿತಾಂಶವೆ ನಿರ್ಧರಿಸುತ್ತದೆ.

ಬಿಜೆಪಿ ಪಕ್ಷದಿಂದ ಎಸ್‌ಸಿ ಮೀಸಲು ಕ್ಷೇತ್ರಗಳಲ್ಲಿ ಟಿಕೆಟ್ ಪಡೆದ ಅಭ್ಯರ್ಥಿಗಳು

ಔರಾದ – ಪ್ರಭು ಬಿ. ಚೌಹಾಣ್ (ಲಂಬಾಣಿ)

ಚಿಂಚೋಳಿ – ಅವಿನಾಶ್ ಜಾದವ್ (ಲಂಬಾಣಿ)

ಕಲಬುರ್ಗಿ ಗ್ರಾಮೀಣ: ಬಸವರಾಜ ಮತ್ತಿಮೂಡ
{ ಸಮಗಾರ (ಮಾದಿಗ ಸಮುದಾಯ ಉಪಜಾತಿ)}

ಚಿತ್ತಾಪುರ – ಮಣಿಕಂಠ ರಾಠೋಡ (ಲಂಬಾಣಿ)

ಲಿಂಗಸುಗೂರು – ಮಾನಪ್ಪ ವಜ್ಜಲ್ (ಭೋವಿ)

ಕನಕಗಿರಿ – ಬಸವರಾಜ ದಡೇಸುಗೂರು (ಮಾದಿಗ)

ಹೂವಿನ ಹಡಗಲಿ – ಕೃಷ್ಣ ನಾಯ್ಕ (ಲಂಬಾಣಿ)

ಹಗರಿಬೊಮ್ಮನಹಳ್ಳಿ – ಬಲ್ಲಾಹುಣ್ಸಿ ರಾಮಣ್ಣ (ಮಾದಿಗ)

49661542 294235811438250 5384525710729674752 n
ಸಿದ್ದಪ್ಪ ಮೂಲಗೆ
+ posts

ಪತ್ರಕರ್ತರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಸಿದ್ದಪ್ಪ ಮೂಲಗೆ
ಸಿದ್ದಪ್ಪ ಮೂಲಗೆ
ಪತ್ರಕರ್ತರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಕೈ ಜಾರಿದ ರಾಜಸ್ಥಾನ- ವಾಡಿಕೆ ತಪ್ಪಿಸದೆ ಪಕ್ಷ ಬದಲಿಸಿದ ಮತದಾರರು

ರಾಜಸ್ಥಾನದಲ್ಲಿ ಪ್ರತಿ ಅವಧಿಗೂ ಸರ್ಕಾರ ಬದಲಾಯಿಸುವ ರೂಢಿಯಿದೆ ಹಾಲಿ ಚುನಾವಣೆಯಲ್ಲಿ...

ತೆಲಂಗಾಣ ಫಲಿತಾಂಶ: ಕೆಸಿಆರ್ ಸರ್ವಾಧಿಕಾರಕ್ಕೆ ಏಟು; ಕಾಂಗ್ರೆಸ್ ಗ್ಯಾರಂಟಿಗಳಿಗೆ ಓಟು

2014ರಿಂದಲೂ ಕಾಂಗ್ರೆಸ್ ತೆಲಂಗಾಣದ ಗದ್ದುಗೆ ಮೇಲೆ ಕಣ್ಣಿಟ್ಟಿತ್ತು. ಈ ಬಾರಿ ಕರ್ನಾಟಕದಲ್ಲಿ...

ರಾಜಸ್ಥಾನ | ಬಿಜೆಪಿ ವಿರುದ್ಧ ಬಂಡಾಯವೆದ್ದ 26 ವರ್ಷದ ಸ್ವತಂತ್ರ ಅಭ್ಯರ್ಥಿಗೆ ಭಾರಿ ಮುನ್ನಡೆ

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಭಾರಿ...

ರಾಜಸ್ಥಾನ | ಬಿಜೆಪಿ ಮುನ್ನಡೆ ಕಾಯ್ದುಕೊಂಡಂತೆ ಸಿಎಂ ಸ್ಥಾನಕ್ಕೆ ಮೂವರ ಪೈಪೋಟಿ!

ರಾಜಸ್ಥಾನ ರಾಜ್ಯದ 199 ವಿಧಾನಸಭಾ ಕ್ಷೇತ್ರಗಳ ಪೈಕಿ ಮಧ್ಯಾಹ್ನ 12 ಗಂಟೆ...

Download Eedina App Android / iOS

X