ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತ, ಹೈಕಮಾಂಡ್‌ ಭರವಸೆ ನೀಡಿದೆ: ಯತ್ನಾಳ್‌

Date:

Advertisements

ಜೂನ್ 4ರ ನಂತರ ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತವಾಗಲಿದೆ. ನನಗೆ ಹೈಕಮಾಂಡೇ ಭರವಸೆ ನೀಡಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಉತ್ತರ ಕನ್ನಡದ ಕುಮಟಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನನಗೆ ವಿಪಕ್ಷ ನಾಯಕನಾಗುವ ಅರ್ಹತೆ ಇದ್ದರೂ ಸಹ ಮಾಡಲಿಲ್ಲ. ಅಸಮಾಧಾನಿತರೆಲ್ಲರಿಗೂ ವಿನಂತಿ ಮಾಡುವೆ. ವೈಯಕ್ತಿಕ ವಿಚಾರ ಬಿಟ್ಟು, ನರೇಂದ್ರ ಮೋದಿಗಾಗಿ ನಾವೆಲ್ಲರೂ ಕೂಡಿ ಕೆಲಸ ಮಾಡೋಣ” ಎಂದರು.

“ಹಿಂದುತ್ವದ ರಾಜಕಾರಣಿಗಳನ್ನು ಯಾವತ್ತೂ ಮುಗಿಸಲು ಸಾಧ್ಯವಿಲ್ಲ. ಈಶ್ವರಪ್ಪ ಹೇಳುವ ವಿಚಾರಔನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು. ಪಕ್ಷಕ್ಕೆ ಮುಜುಗರ ಆಗದ ರೀತಿಯಲ್ಲಿ ಎಲ್ಲ ಸಮಸ್ಯೆ ಬಗೆಹರಿಸಬೇಕು. ನಾನು ಹೈಕಮಾಂಡ್​ಗೆ ವಿನಂತಿ ಮಾಡಿಕೊಳ್ಳುತ್ತೇನೆ” ಎಂದು ಹೇಳಿದರು.

Advertisements

“ಬೊಮ್ಮಾಯಿ ಬದಲು ನನ್ನ ಸಿಎಂ ಮಾಡಿದ್ದರೆ 103 ಸ್ಥಾನ ಗೆಲ್ಲಿಸುತ್ತಿದ್ದೆ. ಕೆ.ಸುಧಾಕರ್​ ನಡೆಯಿಂದ ಹಲವು ಶಾಸಕರು ಕಣ್ಣೀರು ಹಾಕಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕಿತ್ತು. ಡಾ.ಸುಧಾಕರ್​ ತಪ್ಪಿನಿಂದ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲಿಲ್ಲ. ಕಾಂಗ್ರೆಸ್​ನಲ್ಲಿ ಅಪ್ಪ, ಮಕ್ಕಳು, ಮಾವ, ಅಳಿಯ ಇವರೇ ಅಭ್ಯರ್ಥಿ. ನಮ್ಮ ಪಕ್ಷದಲ್ಲೂ ಅದೇ ರೀತಿಯಾಗಿದೆ” ಎಂದು ವಾಗ್ದಾಳಿ ನಡೆಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X