ಐಪಿಎಲ್ | ಗುಜರಾತ್‌ಗೆ ತವರಲ್ಲೇ ಸೋಲುಣಿಸಿದ ಪಂಜಾಬ್: 3 ವಿಕೆಟ್‌ಗಳ ರೋಚಕ ಜಯ

Date:

Advertisements

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಪಂದ್ಯದಲ್ಲಿ ಅತಿಥೇಯ ಗುಜರಾತ್ ಟೈಟನ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡವು 3 ವಿಕೆಟ್‌ಗಳಿಂದ ರೋಚಕವಾಗಿ ಸೋಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ ತಂಡ ಶುಭ್ಮನ್ ಗಿಲ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್‌ಗಳನ್ನು ಗಳಿಸುವ ಮೂಲಕ, ಪಂಜಾಬ್ ಕಿಂಗ್ಸ್ ತಂಡಕ್ಕೆ 200 ರನ್‌ಗಳ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನತ್ತಿದ ಶಿಖರ್ ಧವನ್ ನೇತೃತ್ವದ ಪಂಜಾಬ್ ತಂಡವು 19.5 ಓವರ್‌ಗಳಲ್ಲಿ ಗುರಿ ಮುಟ್ಟುವ ಮೂಲಕ ಜಯ ಸಾಧಿಸಿತು.

Advertisements

ಗುಜರಾತ್ ಟೈಟಾನ್ಸ್ ನೀಡಿದ್ದ 200 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್‌ಗೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ಶಿಖರ್ ಧವನ್ ಹಾಗೂ ಜಾನಿ ಬೈರ್‌ಸ್ಟೋವ್ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆ ಬಳಿಕ ಪ್ರಭಾಸಿಮ್ರಾನ್ ಸಿಂಗ್ ಸ್ವಲ್ಪ ಹೊತ್ತು ಆಸರೆಯಾದರು. ಔಟಾಗುವುದಕ್ಕೂ ಮುನ್ನ ಪ್ರಭಾಸಿಮ್ರಾನ್ ಸಿಂಗ್ 35 ರನ್ ಗಳಿಸಿದ್ದರು. ಕೊನೆಯಲ್ಲಿ IMPACT PLAYER ಆಗಿ ಬಂದ ಅಶುತೋಶ್ ಶರ್ಮಾ 31 ರನ್(17 ಎಸೆತ, 3 ಬೌಂಡರಿ,1 ಸಿಕ್ಸ್) ಹಾಗೂ ಶಶಾಂಕ್ ಸಿಂಗ್ ಔಟಾಗದೆ 61 ರನ್(29 ಎಸೆತ, 6 ಬೌಂಡರಿ, 4 ಸಿಕ್ಸ್) ಬಾರಿಸುವ ಮೂಲಕ ಕೊನೆಯ ಓವರ್‌ನ 5ನೇ ಎಸೆತದಲ್ಲಿ ನಿಗದಿತ ಗುರಿ ಮುಟ್ಟುವಲ್ಲಿ ಯಶಸ್ವಿಯಾದರು.

ಈ ಗೆಲುವಿನ ಮೂಲಕ ಈವರೆಗೆ ಆಡಿದ ಒಟ್ಟು ನಾಲ್ಕು ಪಂದ್ಯಗಳ ಪೈಕಿ 2ರಲ್ಲಿ ಸೋತು, ಎರಡರಲ್ಲಿ ಗೆಲುವು ಕಂಡಿದೆ. ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಕಾಯ್ದುಕೊಂಡಿದೆ.

ಗುಜರಾತ್ ಪರ ನೂರ್ ಅಹ್ಮದ್ 2 ವಿಕೆಟ್ ಪಡೆದರೆ, ಅಝ್ಮತುಲ್ಲ ಒಮರ್ ಝಾಯ್, ಉಮೇಶ್ ಯಾದವ್, ರಶೀದ್ ಖಾನ್, ಮೋಹಿತ್ ಶರ್ಮಾ, ದರ್ಶನ್, ಉಮೇಶ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X