ಗಾಜಾದಲ್ಲಿ ತಕ್ಷಣವೇ ಕದನ ವಿರಾಮ ಘೋಷಿಸಿ: ಇಸ್ರೇಲ್ ಪ್ರಧಾನಿಗೆ ಅಮೆರಿಕ ಅಧ್ಯಕ್ಷರ ಕರೆ

Date:

Advertisements

ಪ್ಯಾಲಿಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಹಾಮಸ್ ಹೋರಾಟಗಾರರೊಂದಿಗೆ ಇಸ್ರೇಲ್‌ ನಡೆಸುತ್ತಿರುವ ಯುದ್ಧವನ್ನು ತಕ್ಷಣ ನಿಲ್ಲಿಸಿ ಕದನ ವಿರಾಮವನ್ನು ಘೋಷಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರಿಗೆ ಆಗ್ರಹಿಸಿದ್ದಾರೆ.

ಗಾಜಾದ ಮೇಲೆ ನಡೆಸಿದ ವಾಯುದಾಳಿಯಿಂದ ಆಹಾರ ಮತ್ತು ಮಾನವೀಯ ನೆರವು ಒದಗಿಸುತ್ತಿದ್ದ ಅಮೆರಿಕ ಮತ್ತು ಕೆನಡಾದ ನಾಗರಿಕರು ಮೃತಪಟ್ಟ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಗಾಜಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಮಾರಾಣಾಂತಿಕ ಆಕ್ರಮಣದ ಬಗ್ಗೆ ಅಮೆರಿಕ ಕಳವಳ ವ್ಯಕ್ತಪಡಿಸಿದೆ. ಕಳೆದ 7 ತಿಂಗಳಿನಿಂದ ನಡೆದ ಯುದ್ಧದಲ್ಲಿ 33 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ತಕ್ಷಣವೇ ಯುದ್ಧ ವಿರಾಮ ಘೋಷಿಸಿ ಎರಡು ಕಡೆಯಲ್ಲಿರುವ ಒತ್ತೆಯಾಳುಗಳನ್ನು ಬಿಡುಗಡೆಗೆ ತ್ವರಿತವಾಗಿ ಕ್ರಮವಹಿಸಬೇಕೆಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಂದೋ ಕೈತಪ್ಪಿದ ‘ಕಚ್ಚತೀವು’ ಕಥೆ ಇರಲಿ; ಚೀನಾ ಅತಿಕ್ರಮಣ ಬಗ್ಗೆ ಮೋದಿ ಮಾತಾಡಲಿ

ಬೆಂಜಮಿನ್‌ ನೆತನ್ಯಾಹು ಅವರೊಂದಿಗೆ 30 ನಿಮಿಷಗಳ ಕಾಲ ನಡೆದ ದೂರವಾಣಿ ಮೂಲಕ ಸಂಭಾಷಣೆ ನಡೆಸಿರುವ ಬೈಡನ್‌, ಪ್ಯಾಲಿಸ್ತೇನ್‌ ನಾಗರಿಕರು ಹಾಗೂ ವಿದೇಶಿ ನೆರವು ಕಾರ್ಯಕರ್ತರ ರಕ್ಷಣೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೆ ಹಾಮಸ್‌ ಹೋರಾಟಗಾರರ ವಿರುದ್ಧ ನಡೆಯುತ್ತಿರುವ ಯುದ್ಧಕ್ಕೆ ಇಸ್ರೇಲ್‌ಗೆ ಬೆಂಬಲ ಮುಂದುವರೆಸುವ ಬಗ್ಗೆ ಕೂಡ ಪುನರ್‌ ಪರಿಶೀಲಿಸುವುದಾಗಿ ಅಮೆರಿಕ ಅಧ್ಯಕ್ಷರು ತಿಳಿಸಿದ್ದಾರೆ ಎನ್ನಲಾಗಿದೆ.

ಕೆಲವು ದಿನಗಳ ಹಿಂದಷ್ಟೆ ಗಾಜಾದಲ್ಲಿ ಇಸ್ರೇಲ್‌ ನಡೆಸಿದ ವಾಯು ದಾಳಿಯಲ್ಲಿ ಮಾನವೀಯ ನೆರವು ಒದಗಿಸುತ್ತಿದ್ದ ಕಾರ್ಯಕರ್ತರು ಮೃತಪಟ್ಟ ನಂತರ ಆಸ್ಟ್ರೇಲಿಯಾ, ಕೆನಡಾ, ಅಮೆರಿಕಾ, ಪೋಲಾಂಡ್ ಹಾಗೂ ಇಂಗ್ಲೆಂಡ್‌ ಘಟನೆಯ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X